ಚರಂಡಿ, ರಸ್ತೆ ನಿರ್ಮಾಣಕ್ಕೆ ಅಡ್ಡಿ

6 ತಿಂಗಳಾದ್ರೂ ಪೂರ್ಣವಾಗದ ಕಾಮಗಾರಿ • ಸಾರ್ವಜನಿಕರ ಓಡಾಟಕ್ಕೆ ತೊಂದ್ರೆ

Team Udayavani, Apr 23, 2019, 1:10 PM IST

kol 6 copy

ಬಂಗಾರಪೇಟೆ: ಉದ್ಯೋಗ ಖಾತ್ರಿ ಯೋಜನೆಯಡಿ ಚರಂಡಿ ಹಾಗೂ ರಸ್ತೆ ಕಾಮಗಾರಿ ಆರಂಭಿಸಿ 6 ತಿಂಗಳು ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ಜನರು ಓಡಾಟಕ್ಕೆ ತೀವ್ರ ತೊಂದರೆಯಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಕೆಸರನಹಳ್ಳಿ ಯಲ್ಲಪ್ಪ ಜಿಪಂ ಸಿಇಒಗೆ ದೂರು ನೀಡಿದ್ದಾರೆ.

ತಾಲೂಕಿನ ಕೆಸರನಹಳ್ಳಿ ಗ್ರಾಪಂ ಕೇಂದ್ರದಲ್ಲಿ ಅಧ್ಯಕ್ಷ ಮಂಜುನಾಥ್‌ ನೇತೃತ್ವದಲ್ಲಿ ನಡೆಯುತ್ತಿರುವ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಜನರ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ. 6 ತಿಂಗಳ ಹಿಂದೆ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣಕ್ಕೆ ಜೆಸಿಬಿ ಮೂಲಕ ಕಾಮಗಾರಿ ಆರಂಭಿಸಲಾಗಿತ್ತು. ಚರಂಡಿ ಕೆಲಸ ಅರ್ಧದಷ್ಟು ಮುಗಿದಿದೆ. ಉಳಿದ ಕೆಲಸ ನನೆಗುದಿಗೆ ಬಿದ್ದಿದೆ. ಇದರಿಂದ ಅಕ್ಕಪಕ್ಕದ ಮನೆಗಳಿಗೆ ತೀವ್ರ ತೊಂದರೆಯಾಗಿದೆ ಎಂದು ಗ್ರಾಮದ ಯಲ್ಲಪ್ಪ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮನವಿ ಮಾಡಿದ್ರೂ ಪ್ರಯೋಜನವಿಲ್ಲ:

ಈ ಸಂಬಂಧ ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಕೆಸರನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ, ತಾಪಂ ಇಒಗೆ, ಜಿಪಂ ಸಿಇಒಗೆ ಮನವಿ ಮಾಡಲಾಗಿದ್ದರೂ ಕಾಮಗಾರಿ ಪೂರ್ಣವಾಗಿಲ್ಲ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು 2 ತಿಂಗಳ ಹಿಂದೆ ಮೇಲಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ವಿವಾದದಲ್ಲಿ ಜಾಗ: ಕಾಮಗಾರಿ ನಡೆಯುತ್ತಿರುವ ಜಾಗವು ಇದೇ ಗ್ರಾಮದ ಪಟ್ಟಾಭಿರಾಮಣ್ಣಗೆ ಸೇರಿದ್ದು, 10 ವರ್ಷಗಳ ಹಿಂದೆ ಈ ಜಾಗ 10 ಜನರಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದ್ದು, ಈಗ ಜನ ಮನೆಗಳನ್ನೂ ನಿರ್ಮಾಣ ಮಾಡಿಕೊಂಡಿದ್ದಾರೆ. ಇದೀಗ ಪಟ್ಟಾಭಿರಾಮಣ್ಣ ಅವರ ಪುತ್ರಿ ಭಾರತಿ, ಮಗ ಚಲಪತಿ ತಕರಾರು ತೆಗೆದಿದ್ದು, ಅವರ ತಂದೆ ಮಾರಾಟ ಮಾಡಿದ್ದ ಜಾಗವನ್ನು ಮತ್ತೆ ವಾಪಸ್‌ ಕೊಡಬೇಕೆಂದು ಒತ್ತಾಯಿಸಿ ಕೋರ್ಟ್‌ನಲ್ಲ ಕೇಸು ಹಾಕಿರುವ ಕಾರಣ, ಜಾಗದಲ್ಲಿ ಕಾಮಗಾರಿ ಮಾಡದಂತೆ ಅರ್ಧಕ್ಕೆ ತಡೆಹಿಡಿದಿದ್ದಾರೆ.

ಗ್ರಾಪಂ ಅಧ್ಯಕ್ಷ ಕೆಸರನಹಳ್ಳಿ ಮಂಜುನಾಥ್‌ ಗ್ರಾಮಕ್ಕೆ ರಸ್ತೆ, ಚರಂಡಿ ನಿರ್ಮಾಣ ಮಾಡುವ ಉದ್ದೇಶದಿಂದ ನರೇಗಾ ಯೋಜನೆಯಡಿ ಕಾಮಗಾರಿ ಪ್ರಾರಂಭ ಮಾಡಿದ್ದು, ಕಾಮಗಾರಿ ಪ್ರಾರಂಭಿಸಿದ ವಾರದಲ್ಲಿ ತಡೆಹಿಡಿಯಲಾಗಿದೆ.ಈ ಬಗ್ಗೆ ಗ್ರಾಪಂ ಅಧಿಕಾರಿಗಳು ಸ್ಥಳೀಯ ಪೊಲೀಸ್‌ ಇಲಾಖೆಯಲ್ಲಿ ದೂರು ಸಹ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವ ಮೂಲಕ ಜನರಿಗೆ ಅನುಕೂಲ ಒದಗಿಸಬೇಕಿದೆ.

ಕ್ರಮಕ್ಕೆ ಮನವಿ: ಕೆಸರನಹಳ್ಳಿ ಗ್ರಾಮದ ಕಾಂಗ್ರೆಸ್‌ ಮುಖಂಡ ಜಿಪಂ ಅಧಿಕಾರಿಗಳಿಗೆ ದೂರು ನೀಡಿರುವುದರಿಂದ ಜಿಪಂ ಯೋಜನಾ ನಿರ್ದೇಶಕರು ಬಂಗಾರಪೇಟೆ ತಾಲೂಕಿನ ತಾಪಂ ಇಒಗೆ ಲಿಖೀತ ಪತ್ರ ಬರೆದಿದ್ದು, ಕೆಸರನಹಳ್ಳಿ ಗ್ರಾಪಂನಲ್ಲಿ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲು ಕಾರಣ ಕೇಳಿ, ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.