ನಗರದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತ
Team Udayavani, Apr 24, 2019, 5:50 AM IST
ರಥಬೀದಿಯಲ್ಲಿ ಕಸ ವಿಲೇವಾರಿಯಾಗದೆ ಹಾಕಿ ಉಳಿದಿರುವುದು.
ಮಹಾನಗರ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಮತದಾನಕ್ಕೆ ಸ್ವಚ್ಛ ಮಂಗಳೂರು ಕಸದ ವಾಹನ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಿದ ಕಾರಣದಿಂದಾಗಿ ನಗರದ ಅನೇಕ ಕಡೆಗಳಲ್ಲಿ ಮಂಗಳವಾರ ಘನ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡಿತ್ತು.
ನಗರದಲ್ಲಿ ಸಾಮಾನ್ಯವಾಗಿ ಪ್ರತೀ ದಿನ ಘನತ್ಯಾಜ್ಯ ವಿಲೇವಾರಿ ಕಾರ್ಯ ನಡೆಯುತ್ತದೆ. ಆದರೆ, ಮಂಗಳವಾರ ಸಂಜೆಯಾಗುತ್ತಿದ್ದರೂ ಕಸದ ವಾಹನ ಬರದಿದ್ದುದನ್ನು ಕಂಡು ಸಾರ್ವಜನಿಕರು ಪರಸ್ಪರ ಮಾತನಾಡಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂತು. ಇನ್ನು, ನಗರದ ಮಾರುಕಟ್ಟೆ, ಅಂಗಡಿಗಳು ಸೇರಿದಂತೆ ಮನೆ ಮುಂದೆ ಪ್ಲಾಸ್ಟಿಕ್ನಲ್ಲಿ ಕಟ್ಟಿದ್ದ ತ್ಯಾಜ್ಯದ ರಾಶಿ ಬಿದ್ದಿದ್ದವು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಹೆಚ್ಚಿನ ಕಾರ್ಮಿಕರು ಬಾದಾಮಿ, ಬಾಗಕೋಟೆ ಪ್ರದೇಶದ ಮಂದಿ ಇರುವುದರಿಂದ ಅಲ್ಲಿ ಮಂಗಳವಾರ ಮತದಾನ ನಡೆದಿತ್ತು. ಇದೇ ಕಾರಣಕ್ಕೆ ಕಾರ್ಮಿಕರು ತೆರಳಿದ್ದಾರೆ. ಇದರಿಂದಾಗಿ ಒಂದು ದಿನಗಳ ಕಾಲ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡಿತ್ತು.
ಬುಧವಾರದಿಂದ ಎಂದಿನಂತೆ ವಿಲೇವಾರಿ
ಪಾಲಿಕೆ ಪ್ರಭಾರ ನಾರಾಯಣಪ್ಪ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ತ್ಯಾಜ್ಯ ವಿಲೇವಾರಿ ಮಾಡುವ ಹೆಚ್ಚಿನ ಕಾರ್ಮಿಕರು ಮತದಾನದ ಕಾರಣಕ್ಕೆ ತಮ್ಮ ಊರುಗಳಿಗೆ ತೆರಳಿದ್ದಾರೆ. ಇದರಿಂದಾಗಿ ಒಂದು ದಿನಗಳ ಕಾಲ ತ್ಯಾಜ್ಯ ವಿಲೇವಾರಿಯಲ್ಲಿ ವ್ಯತ್ಯಯವಾಗಿದೆ. ಬುಧವಾರದಿಂದ ಎಂದಿನಂತೆ ಕಾರ್ಯ ಸಾಗಲಿದೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.