![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 24, 2019, 3:34 AM IST
ಹುಬ್ಬಳ್ಳಿ: ದೇಶದಲ್ಲಿ ಇದ್ದವರೇ ಅನೇಕರು ಮತದಾನದಿಂದ ದೂರ ಉಳಿಯುತ್ತಾರೆ. ಆದರೆ, ಮಂಗಳವಾರ ನಡೆದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ಆಸ್ಟ್ರೇಲಿಯಾ, ನೈಜೀರಿಯಾ, ಚೀನಾ, ಇಟಲಿ ಇನ್ನಿತರ ಕಡೆ ವಾಸವಾಗಿದ್ದ ಅನೇಕರು ತಾಯ್ನಾಡಿಗೆ ಆಗಮಿಸಿ ಮತದಾನ ಕರ್ತವ್ಯ ನಿರ್ವಹಿಸಿ ಮಾದರಿಯಾಗಿದ್ದಾರೆ.
ಇಲ್ಲಿನ ಕೇಶ್ವಾಪುರದವರಾದ ನೈಜೀರಿಯಾದಲ್ಲಿ ಸೇವೆ ಸಲ್ಲಿಸುತ್ತಿರುವ ವಿಶ್ವಾಸ ಕಬಾಡಿ ಹಾಗೂ ಶೀಲಾ ದಂಪತಿ ನಗರಕ್ಕೆ ಆಗಮಿಸಿ ಮತದಾನ ಮಾಡಿದರು. ವಿಶ್ವಾಸ ಕಬಾಡಿ ಮಾತನಾಡಿ, ದೇಶದಲ್ಲಿ ಚುನಾವಣೆ ಹಬ್ಬ ನಡೆಯುತ್ತಿದ್ದು, ವಿದೇಶದಲ್ಲಿರುವ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕು ಚಲಾಯಿಸಲು ಆಗಮಿಸಿದ್ದೇವೆ ಎಂದರು.
ಇಟಲಿಯಲ್ಲಿ ಮಾಸ್ಟರ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ಪದ್ಮನಾಭ ಕಂಚಿಯವರು ಗೋಕುಲ ರಸ್ತೆ ಮಂಜುನಾಥ ನಗರ ಸರಕಾರಿ ಶಾಲೆಗೆ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಈ ದೇಶದ ಪ್ರಜೆಯಾಗಿರುವ ನಾನು, “ನನ್ನ ಮತ ನನ್ನ ಹಕ್ಕು’ ಎಂಬುದನ್ನು ತೋರಿಸುವ ನಿಟ್ಟಿನಲ್ಲಿ ಮತ ಚಲಾವಣೆಗೆ ಆಗಮಿಸಿದ್ದೇನೆ ಎಂದರು.
ಆಸ್ಟ್ರೇಲಿಯಾದಲ್ಲಿ ಸೇವೆ ಸಲ್ಲಿಸುತ್ತಿರುವ ಬಮ್ಮಾಪುರ ಓಣಿ ನಿವಾಸಿ ವಿವೇಕ ಇಂಡಿ ಲೋಕಸಆಅ ಚುನಾವಣೆ ನಿಮಿತ್ತ ರಜೆ ಹಾಕಿ ಬಂದಿದ್ದು, “ಜನಪ್ರತಿನಿಧಿಯ ಆಯ್ಕೆ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಚಲಾವಣೆಗೆ ಆಗಮಿಸಿದ್ದೇನೆ’ ಎಂದರು. ಚೀನಾದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಇಲ್ಲಿನ ಡಾಕಪ್ಪ ವೃತ್ತ ಬಳಿಯ ಅರಳಿಕಟ್ಟಿ ಓಣಿ ನಿವಾಸಿ ಪರಶುರಾಮ ಪಾಟೀಲ ಕೂಡ ಮಂಗಳವಾರ ತಮ್ಮ ಮತ ಚಲಾಯಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.