ಲಂಕಾ ಸ್ಫೋಟಕ್ಕೆ ಕೊಯಮತ್ತೂರು ನಂಟು!

ಕಳೆದ ವರ್ಷ ಬೆಳಕಿಗೆ ಬಂದಿದ್ದ ಐಸಿಸ್‌ ಬೆಂಬಲಿಗ ಯುವಕರ ತಂಡದ ಪ್ರಕರಣ

Team Udayavani, Apr 25, 2019, 6:00 AM IST

34

ನವದೆಹಲಿ/ಕೊಲೊಂಬೋ: ಕೊಲೊಂಬೋ ಸರಣಿ ಬಾಂಬ್‌ ಸ್ಫೋಟ ಪ್ರಕರಣ, ಕಳೆದ ವರ್ಷ ಭಾರತದಲ್ಲಿ ಬೆಳಕಿಗೆ ಬಂದಿದ್ದ ‘ಕೊಯಮತ್ತೂರು ಐಸಿಸ್‌ ಬೆಂಬಲಿಗರ ಪ್ರಕರಣ’ದ ಜತೆಗೆ ತಳುಕು ಹಾಕಿಕೊಂಡಿದೆ.

ಶ್ರೀಲಂಕಾದ ಚರ್ಚ್‌ಗಳ ಮೇಲೆ ದಾಳಿ ನಡೆಸುವ ಉಗ್ರ ಸಂಚಿನ ಬಗ್ಗೆ 3-4 ತಿಂಗಳ ಹಿಂದೆಯೇ ಭಾರತಕ್ಕೆ ತಿಳಿದುಬಂದಿತ್ತು. ಕೂಡಲೇ ರಾಜತಾಂತ್ರಿಕ ಮಾರ್ಗದ ಮೂಲಕ ಎಚ್ಚರಿಕೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಉಗ್ರರು ಕೊಲೊಂಬೋದಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಮತ್ತು ದಕ್ಷಿಣ ಭಾರತದ ಪ್ರಮುಖ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವ ಯೋಜನೆ ಹೊಂದಿದ್ದರು.

ಏನಿದು ಪ್ರಕರಣ?: ಕೊಯಮತ್ತೂರಿನ ಮೊಹಮ್ಮದ್‌ ಆಶಿಕ್‌, ಇಸ್ಮಾಯಿಲ್ ಎಸ್‌, ಶಂಶುದ್ದೀನ್‌, ಮೊಹಮ್ಮದ್‌ ಸಲಾಲುದ್ದೀನ್‌, ಜಾಫ‌ರ್‌ ಶಾದಿಕ್‌ ಅಲಿ ಮತ್ತು ಶಾಹುಲ್ ಹಮೀದ್‌ ಎಂಬವರು ತಂಡವೊಂದನ್ನು ರಚಿಸಿಕೊಂಡಿರುವ ಮಾಹಿತಿ ಮೇರೆಗೆ 2018ರ ಡಿಸೆಂಬರ್‌ನಲ್ಲಿ ಅವರ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗಿನ ವಿಚಾರಣೆ ವೇಳೆ ಲಂಕಾದ ನ್ಯಾಷನಲ್ ತೌಹೀದ್‌ ಜಮಾತ್‌ (ಎನ್‌ಟಿಜೆ) ಸಂಘಟನೆಯ ಸಂಸ್ಥಾಪಕ ಝಹ್ರನ್‌ ಹಾಶೀಂ ಜತೆ ಇವರು ನೇರ ಸಂಪರ್ಕದಲ್ಲಿದ್ದಿದ್ದು ತಿಳಿದುಬಂದಿತ್ತು. ಆತ, ದಕ್ಷಿಣ ಭಾರತದಲ್ಲಿ ಇಸ್ಲಾಂ ರಾಜ್ಯಭಾರ ಸ್ಥಾಪಿಸುವಂತೆ ಈ ಯುವಕರನ್ನು ಪ್ರೇರೇಪಿಸಿದ್ದ, ಇದಕ್ಕೆ ಪೂರಕವಾಗಿ, ದಕ್ಷಿಣ ಭಾರತದ ಅಲ್ಲಲ್ಲಿ ಬಾಂಬ್‌ ಸ್ಫೋಟ ನಡೆಸುವಂತೆ ಹಾಗೂ ಹಿಂದೂ ನಾಯಕರ ಹತ್ಯೆ ಮಾಡುವಂತೆ ಸೂಚಿಸಿದ್ದ ಎಂಬುದು ತಿಳಿದುಬಂದಿತ್ತು.

ಇದೇ ಸಂದರ್ಭದಲ್ಲೇ, ಶ್ರೀಲಂಕಾದಲ್ಲೂ ಚರ್ಚುಗಳ ಮೇಲೆ ದಾಳಿ ನಡೆಸುವ ವಿಚಾರ ಬಹಿರಂಗಗೊಂಡಿತ್ತು. ತಕ್ಷಣವೇ ಈ ಮಾಹಿತಿಯನ್ನು ಎನ್‌ಐಎ, ಭಾರತೀಯ ಗುಪ್ತಚರ ಇಲಾಖೆಗೆ ಮುಟ್ಟಿಸಿತ್ತು. ಭಾರತೀಯ ಗುಪ್ತಚರ ಇಲಾಖೆ ಅದನ್ನು ಶ್ರೀಲಂಕಾದ ಗುಪ್ತಚರ ಇಲಾಖೆಗೆ ತಲುಪಿಸಿತ್ತು.

ಸ್ಫೋಟಕ ಪತ್ತೆ: ಈ ನಡುವೆ, ದಕ್ಷಿಣ ಕೊಲಂಬೋದ ವೆಲ್ಲವಟ್ಟಾದಲ್ಲಿರುವ ಸವೋಯ್‌ ಚಿತ್ರಮಂದಿರದ ಹೊರಗಡೆ ನಿಲ್ಲಿಸಲಾಗಿದ್ದ ಬೈಕೊಂದರಲ್ಲಿ ಬುಧವಾರ ನಿಯಂತ್ರಿತ ಸ್ಫೋಟಕವೊಂದು ಪತ್ತೆಯಾಗಿದ್ದು ಅದನ್ನು ನಿಷ್ಕ್ರಿಯಗೊಳಿಸಲಾಗಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.