ರಾಜಸ್ಥಾನ್‌- ಹೈದರಾಬಾದ್‌ ಕಾದಾಟ

ಇತ್ತಂಡಗಳಿಗೂ ಕಾಡಲಿದೆ ಆಂಗ್ಲರ ಅಲಭ್ಯ

Team Udayavani, Apr 27, 2019, 9:53 AM IST

rr-rsh

ಜೈಪುರ: ಗುರುವಾರದ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ರೋಚಕ 3 ವಿಕೆಟ್‌ಗಳ ಗೆಲುವು ಸಾಧಿಸಿದ ರಾಜಸ್ಥಾನ್‌ ರಾಯಲ್ಸ್‌ ತಂಡವು ಸನ್‌ರೈಸರ್ ಹೈದರಾಬಾದ್‌ ವಿರುದ್ಧ ಮರು ಪಂದ್ಯಕ್ಕೆ ಸಜ್ಜಾಗಿದೆ. ಶನಿವಾರ ಜೈಪುರದಲ್ಲಿ ಇತ್ತಂಡಗಳು ಸೆಣಸಲಿದೆ.

ಕೂಟದ ಮೊದಲ ಮುಖಾಮುಖೀಯಲ್ಲಿ ಹೈದರಾಬಾದ್‌ ತಂಡ ರಾಜಸ್ಥಾನ್‌ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿತ್ತು. ಈ ಸೋಲಿನ ಸೇಡನ್ನು ತವರಿನಲ್ಲಿ ತೀರಿಸಿಕೊಳ್ಳಲು ರಾಜಸ್ಥಾನ್‌ ಕಾದು ಕುಳಿತಿದೆ. ಆದರೆ ಇತ್ತಂಡಗಳಲ್ಲಿ ಕಾಡುತ್ತಿರುವ ಸಮಸ್ಯೆ ಎಂದರೆ ಆಂಗ್ಲ ಆಟಗಾರರ ಅಲಭ್ಯತೆ. ರಾಜಸ್ಥಾನ್‌ ತಂಡದಲ್ಲಿ 3 ಆಂಗ್ಲ ಆಟಗಾರರು ಮತ್ತು ಹೈದರಾಬಾದ್‌ನಲ್ಲಿ ಓರ್ವ ಆಟಗಾರನ ಅಲಭ್ಯತೆಯಿಂದ ಪಂದ್ಯಕ್ಕೆ ಭಾರೀ ಹಿನ್ನಡೆ ಎದುರಾಗಲಿದೆ.

ಸಂಕಷ್ಟದಲ್ಲಿ ರಾಜಸ್ಥಾನ್‌
ನಾಯಕತ್ವದ ಬದಲಾವಣೆಯಿಂದ ಗೆಲುವಿನ ಹಳಿಯೇರಿರುವ ರಾಜಸ್ಥಾನ್‌ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ಜೋಫ್ರಾ ಆರ್ಚರ್‌, ಬೆನ್‌ ಸ್ಟೋಕ್ಸ್‌, ಜೋಸ್‌ ಬಟ್ಲರ್‌ ವಿಶ್ವಕಪ್‌ ತಯಾರಿಗಾಗಿ ಇಂಗ್ಲೆಂಡಿಗೆ ತೆರಳಲಿದ್ದಾರೆ. ಗುರುವಾರದ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಸೋಲುವ ಸ್ಥಿತಿ ವೇಳೆ ಭರ್ಜರಿ ಬ್ಯಾಟಿಂಗ್‌ ನಡೆಸಿದ ಆರ್ಚರ್‌ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಇವರ ಅನುಪಸ್ಥಿತಿ ತಂಡಕ್ಕೆ ಬಾರಿ ನಷ್ಟ ಉಂಟುಮಾಡಲಿದೆ. ಇನ್ನು ಇವರ ಸ್ಥಾನ ತುಂಬ ಬಲ್ಲ ಆಟಗಾರ ಯಾರು ಎಂಬುದೊಂದು ಪ್ರಶ್ನೆ.

ರಾಜಸ್ಥಾನ್‌ ಬ್ಯಾಟಿಂಗ್‌ನಲ್ಲಿ ಸ್ಥಿರ ಪ್ರದರ್ಶನವಿಲ್ಲ. ಪಂಜಾಬ್‌ ವಿರುದ್ಧದ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಸಂಭ್ರಮಿಸಿದ್ದ ಸಂಜು ಸ್ಯಾಮ್ಸನ್‌ ಅನಂತರದ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನಾಯಕ ಸ್ಮಿತ್‌, ಆಶ್ಟನ್ ಟರ್ನರ್‌, ಸುವರ್ಟ್‌ ಬಿನ್ನಿ ಕ್ರೀಸ್‌ ಆಕ್ರಮಿಸಲು ಪರದಾಡುತ್ತಿದ್ದಾರೆ.

ಬೌಲಿಂಗ್‌ನಲ್ಲಿ ಈ ಬಾರಿಯ ದುಬಾರಿ ಬೆಲೆಯ ಬೌಲರ್‌ ಜಯ್‌ದೇವ್‌ ಉನಾದ್ಕತ್‌ ದುಬಾರಿ ಯಾಗುತ್ತಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಉಳಿದಂತೆ ಕನ್ನಡಿಗರಾದ ಶ್ರೇಯಸ್‌ ಗೋಪಾಲ್‌, ಕೆ. ಗೌತಮ್‌, ಧವಳ್‌ ಕುಲಕರ್ಣಿ ಅವರಿಂದಲೂ ಉತ್ತಮ ಪ್ರದರ್ಶನ ಕಂಡು ಬಂದಿಲ್ಲ. ಇವೆಲ್ಲವೂ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

ಬೇರ್‌ಸ್ಟೋ ಅಲಭ್ಯ
ವಾರ್ನರ್‌- ಬೇರ್‌ ಸ್ಟೋ ಅವರ ಪ್ರಚಂಡ ಓಪನಿಂಗ್‌ ಹೈದರಾಬಾದ್‌ನ ಈ ವರೆಗಿನ ಆಟದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೀಗ ಬೇರ್‌ ಸ್ಟೊ ವಿಶ್ವಕಪ್‌ ತಯಾರಿಗಾಗಿ ಇಂಗ್ಲೆಂಡಿಗೆ ತೆರಳಲಿದ್ದು ವಾರ್ನರ್‌ಗೆ ತಕ್ಕ ಜತೆ ದೊರೆಯುವುದು ಕಷ್ಟವಾಗಿದೆ. ಕೆಲ ದಿನಗಳಲ್ಲಿ ವಾರ್ನರ್‌ ಕೂಡ ತವರಿಗೆ ಮರಳಲಿದ್ದು ತಂಡಕ್ಕೆ ತೀವ್ರ ಹೊಡೆತ ಬೀಳುವ ಲಕ್ಷಣಗಳಿವೆ. ಫ್ಲೇ ಆಫ್ಗೇರಲು ಹರಸಾಹಸ  ಪಡುತ್ತಿರುವ ಹೈದರಾಬಾದ್‌ಗೆ ಈ ಹಂತದಲ್ಲೇ ಇಬ್ಬರು ಆಟಗಾರರು ಹೊರನಡೆದಿರುವುದು ಆತ್ಮ ವಿಶ್ವಾಸ ಕುಗ್ಗಿಸಿದಂತಾಗಿದೆ.

ಹೈದರಾಬಾದ್‌ ಉತ್ತಮ ಓಪನಿಂಗ್‌ ಸಿಕ್ಕರೂ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಮೇಲೆ ಹೆಚ್ಚು ನಂಬಿಕೆ ಇರಿಸುವಂತಿಲ್ಲ. ಯಾಕೆಂದರೆ ಯಾರೊಬ್ಬರೂ ಹೆಚ್ಚು ಕಾಲ ಕ್ರಿಸ್‌ ಆಕ್ರಮಿಸುತ್ತಿಲ್ಲ. ವಿಜಯ್‌ ಶಂಕರ್‌, ಯೂಸುಫ್ ಪಠಾಣ್‌ ಇನ್ನೂ ಫಾರ್ಮ್ಗೆ ಮರಳದಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಬ್ಯಾಟಿಂಗ್‌ನಲ್ಲಿ ಸ್ಥಿರತೆಯಿಲ್ಲದಿದ್ದರೂ ಬೌಲಿಂಗ್‌ನಲ್ಲಿ ಹೈದರಾಬಾದ್‌ ಬಲಿಷ್ಠವಾಗಿದೆ. ರಶೀದ್‌ ಖಾನ್‌, ಮೊಹಮ್ಮದ್‌ ನಬಿ, ಸಂದೀಪ್‌ ಶರ್ಮ, ಭುವನೇಶ್ವರ್‌ ಕುಮಾರ್‌ ಅವರನ್ನೊಳಗೊಂಡ ಬೌಲಿಂಗ್‌ ಪಡೆ ಘಾತುಕವಾಗಿರುವುದು ತಂಡದ ಪ್ಲಸ್‌ ಪಾಯಿಂಟ್‌ ಆಗಿದೆ.

ಟಾಪ್ ನ್ಯೂಸ್

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.