ಮಂಗಳೂರು-ಮೈಸೂರು ಹಳಿ ವಿದ್ಯುದೀಕರಣಕ್ಕೆ ಹಸಿರು ನಿಶಾನೆ

ಕರಾವಳಿ ರೈಲ್ವೇ ವಲಯದಲ್ಲಿ ಹೊಸ ನಿರೀಕ್ಷೆ 2 ಹಂತಗಳಲ್ಲಿ ಕಾಮಗಾರಿ ಸಾಧ್ಯತೆ

Team Udayavani, Apr 27, 2019, 10:36 AM IST

train

ಮಂಗಳೂರು: ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಮಂಗಳೂರು ಮಾರ್ಗದ ಮೈಸೂರು- ಹಾಸನ- ಮಂಗಳೂರು ಮಾರ್ಗ ವಿದ್ಯುದೀಕರಣ ಯೋಜನೆ ಎರಡು ಹಂತಗಳಲ್ಲಿ ಇದು ಶೀಘ್ರ ಕಾರ್ಯರೂಪಕ್ಕೆ ಬರುವ ನಿರೀಕ್ಷೆ ಇದೆ.

ರೈಲ್ವೇ ಇಲಾಖೆಯ ಅಧೀನದಲ್ಲಿ ರುವ ಅಲಹಾಬಾದ್‌ನ ಸೆಂಟ್ರಲ್‌ ಆರ್ಗನೈಸೇಶನ್‌ ಫಾರ್‌ ರೈಲ್ವೇ ಎಲೆಕ್ಟ್ರಿಫಿಕೇಶನ್‌ ವಿಭಾಗವು ಇದನ್ನು ನಿರ್ವಹಿಸಲಿದ್ದು, ಸದ್ಯ ಸರ್ವೆ ನಡೆಸಿ ಪ್ರಾರಂಭಿಕ ಸಿದ್ಧತೆ ಕೈಗೊಳ್ಳುತ್ತಿದೆ.
316 ಕೋ.ರೂ. ಮೀಸಲು ರೈಲ್ವೇ ಮೂಲಗಳ ಪ್ರಕಾರ ಕೇಂದ್ರ ಬಜೆಟ್‌ನಲ್ಲಿ ಮೈಸೂರು- ಹಾಸನ-ಮಂಗಳೂರು ಮಾರ್ಗ ವಿದ್ಯುದೀಕರಣಕ್ಕೆ 316 ಕೋ.ರೂ. ಮೀಸಲಿಡಲಾಗಿದೆ. ಮಂಗಳೂರು-ಹಾಸನ ಕಾಮಗಾರಿ ಮೊದಲಿಗೆ ಆರಂಭಿಸಿ, ಬಳಿಕ ಹಾಸನ-ಮೈಸೂರು ಕೆಲಸ ಕೈಗೊಳ್ಳುವ ಸಾಧ್ಯತೆ ಇದೆ. ಜತೆಗೆ ಹಾಸನ -ಅರಸೀಕೆರೆ ಮಾರ್ಗವನ್ನೂ ವಿದ್ಯುದೀಕರಣಕ್ಕೆ ಪರಿಗಣಿಸಲಾಗಿದೆ. ಅಂತಿಮ ತೀರ್ಮಾನ ಪ್ರಕಟಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪಡೀಲ್‌ನಿಂದ ಬಂಟ್ವಾಳ, ಕಬಕ ಪುತ್ತೂರು, ಎಡಮಂಗಲ, ಸುಬ್ರಹ್ಮಣ್ಯ ಘಾಟಿ, ಸಕಲೇಶಪುರ-ಹಾಸನ ಹಳಿಯು ವಿದ್ಯುದೀಕರಣಗೊಳ್ಳಬೇಕಿದೆ.

ಪರಿಸರ ಸೂಕ್ಷ್ಮ ಪ್ರದೇಶ
ಸುಬ್ರಹ್ಮಣ್ಯ – ಸಕಲೇಶಪುರ ಮಾರ್ಗವು ಪರಿಸರ ಸೂಕ್ಷ್ಮ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹೊಂದಿದೆ. ತಿರುವುಗಳು ಅಧಿಕವಿದ್ದು, ಸುರಕ್ಷಿತ ಯಾನದ ನೆಲೆಯಲ್ಲೂ ಇಲ್ಲಿ ಹೆಚ್ಚು ರೈಲು ಓಡಾಟಕ್ಕೆ ಅವಕಾಶವಿಲ್ಲ. ವೇಗವೂ ನಿಯಂತ್ರಿತ. ಹೀಗಾಗಿ ಇಲ್ಲಿ ಹಳಿ ವಿದ್ಯುದೀಕರಣ ಸವಾಲಿನ ಕಾರ್ಯ. ವಿದ್ಯುದೀಕರಣಗೊಂಡ ಬಳಿಕವೂ ಇಲ್ಲಿ ರೈಲು ಮಿತ ವೇಗದಲ್ಲೇ ಸಂಚರಿಸಬೇಕಿದೆ. ವಿದ್ಯುದೀಕರಣಗೊಂಡರೆ ಡೀಸೆಲ್‌ ಬಳಕೆಯಿಂದಾಗುವ ಪರಿಸರ ಮಾಲಿನ್ಯ ತಪ್ಪುತ್ತದೆ ಮತ್ತು ಖರ್ಚು ಕಡಿಮೆ ಎನ್ನುತ್ತಾರೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ತಾಂತ್ರಿಕ ಸಲಹೆಗಾರ ಅನಿಲ್‌ ಹೆಗ್ಡೆ.  ಕೊಂಕಣ ರೈಲ್ವೇಯಲ್ಲಿ ಸುರತ್ಕಲ್‌ ಸಮೀಪದ ತೋಕೂರಿನಿಂದ ಮಹಾರಾಷ್ಟ್ರದ ರೋಹಾವರೆಗಿನ ಒಟ್ಟು 741 ಕಿ.ಮೀ. ಮಾರ್ಗದ ವಿದ್ಯು ದೀಕರಣ ನಡೆಯುತ್ತಿದೆ.

ದಕ್ಷಿಣ ರೈಲ್ವೇ ವತಿಯಿಂದ ಕೇರಳದ ಶೋರ್ನೂರು ಮತ್ತು ಮಂಗಳೂರು ನಡುವಣ 328 ಕಿ.ಮೀ. ಮಾರ್ಗದ ವಿದ್ಯುದೀಕರಣ ಈಗಾಗಲೇ ಮಂಗಳೂರು ಜಂಕ್ಷನ್‌ (ಕಂಕನಾಡಿ)ವರೆಗೆ ಪೂರ್ಣಗೊಂಡಿದ್ದು, ತೋಕೂರು ವರೆಗೆ ಮುಂದುವರಿಯ ಲಿದೆ. ಕರಾವಳಿಯ ಎರಡು ರೈಲ್ವೇ ಸಂಪರ್ಕ ಹಳಿಗಳು ಉನ್ನತಿಗೆ ಏರುತ್ತಿರುವಾಗಲೇ ಮೈಸೂರು-ಹಾಸನ-ಮಂಗಳೂರು ಮಾರ್ಗ ವಿದ್ಯುದೀಕರಣಕ್ಕೆ ನೈಋತ್ಯ ರೈಲ್ವೇ ಮುಂದಡಿ ಇಟ್ಟಿದೆ.

ಬೆಂಗಳೂರಿನಿಂದ ಮೈಸೂರು ವರೆಗೆ ಈಗಾಗಲೇ ವಿದ್ಯುದೀಕರಣಗೊಂಡಿದ್ದು, ಅಲ್ಲಿಂದ ಮಂಗಳೂರು ವರೆಗಿನ ಸುಮಾರು 310 ಕಿ.ಮೀ. ಮಾರ್ಗ ಬಾಕಿಯಿದೆ. ಈ ಪೈಕಿ ಮಂಗಳೂರು-ಹಾಸನ ವಿದ್ಯುದೀಕರಣಕ್ಕೆ ಮೊದಲ ಮಂಜೂರಾತಿ ದೊರಕಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು- ಹಾಸನ ಮಂಜೂರು
ಮಂಗಳೂರು-ಹಾಸನ ರೈಲ್ವೇ ವಿದ್ಯುದೀಕರಣ ಯೋಜನೆಗೆ ಮಂಜೂರಾತಿ ದೊರಕಿದೆ. ಅಲಹಾಬಾದ್‌ನ ಸೆಂಟ್ರಲ್‌ ಆರ್ಗನೈಸೇಶನ್‌ ಫಾರ್‌ ರೈಲ್ವೇ ಎಲೆಕ್ಟ್ರಿಫಿಕೇಶನ್‌ ವಿಭಾಗವು ಇದರ ನಿರ್ವಹಿಸಲಿದೆ.
ಅಪರ್ಣಾ ಗರ್ಗ್‌, ರೈಲ್ವೇ ವ್ಯವಸ್ಥಾಪಕರು, ಮೈಸೂರು ವಿಭಾಗ

ದಿನೇಶ್‌ ಇರಾ

ಟಾಪ್ ನ್ಯೂಸ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

7

‘The Indian House’ Movie: ರಾಮ್‌ಚರಣ್‌ ನಿರ್ಮಾಣದಲ್ಲಿ ʼದಿ ಇಂಡಿಯನ್‌ ಹೌಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.