ಬಸ್‌ -ಕಾರು ಢಿಕ್ಕಿ: ಮಹಿಳೆಯರಿಬ್ಬರ ಸಾವು

ಪಾಣೆಮಂಗಳೂರಿನಲ್ಲಿ ಭೀಕರ ಅಪಘಾತ

Team Udayavani, Apr 27, 2019, 11:02 AM IST

accident]

ಬಂಟ್ವಾಳ: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ನೆಹರೂ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಮಾರುತಿ ಸೆಲೆರಿಯೋ ಕಾರು ಮುಖಾಮುಖೀ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಕ್ಕೂರು ನಿವಾಸಿ ಕೋಚಣ್ಣ ಮಲ್ಲಿ ಅವರ ಪತ್ನಿ ರುಕ್ಮಿಣಿ ಕೆ. ಮಲ್ಲಿ (69) ಮತ್ತು ಮಂಗಳೂರು ಜಪ್ಪುಗುಡ್ಡೆ ತುಕಾರಾಮ ಶೆಟ್ಟಿ ಅವರ ಪತ್ನಿ ಸರೋಜಿನಿ ಟಿ. ಶೆಟ್ಟಿ (63) ಮೃತಪಟ್ಟವರು. ಕಾರು ಕೋಚಣ್ಣ ಮಲ್ಲಿ ಅವರಿಗೆ ಸೇರಿದ್ದಾಗಿದೆ. ಸರೋಜಿನಿ ಮತ್ತು ರುಕ್ಮಿಣಿ ಅವರ ತಾಯಂದಿರು ಅಕ್ಕ-ತಂಗಿಯರು. ಗಂಭೀರ ಗಾಯಗೊಂಡಿರುವ ಮೃತರ ನಿಕಟ ಸಂಬಂಧಿ ಶಕ್ತಿನಗರ ನಿವಾಸಿ ಅನುಷಾ (40) ಹಾಗೂ ಕಾರು ಚಾಲಕ ಸುಳ್ಯ ಕನಕಮಜಲು ನಿವಾಸಿ ಉಮೇಶ್‌ ಪೂಜಾರಿ (36) ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗೃಹ ಪ್ರವೇಶಕ್ಕೆ ತೆರಳುತ್ತಿದ್ದರು
ಶಂಭೂರು ಗ್ರಾಮದ ಸಣ್ಣಕುಕ್ಕಿನಲ್ಲಿ ನಡೆಯಲಿದ್ದ ಸಂಬಂಧಿಗಳ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರುಕ್ಮಿಣಿ ಕಾರಿನ ಮುಂಬದಿ ಸೀಟಲ್ಲಿದ್ದು, ಢಿಕ್ಕಿಯ ರಭಸಕ್ಕೆ ಮುಂದಕ್ಕೆ ಎಸೆಯಲ್ಪಟ್ಟು ಕಾರಿನ ಮುಂಬದಿ ಗಾಜು ಒಡೆದು ಬಸ್ಸಿನ ಎಂಜಿನ್‌ಗೆ ಅವರ ತಲೆ ಬಡಿದಿತ್ತು. ಬಸ್ಸಿನ ಮುಂಬದಿ ತಗಡುಗಳನ್ನು ಕತ್ತರಿಸಿ ಕಾರನ್ನು ತೆರವು ಮಾಡಿದ ಬಳಿಕ ಅವರ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.

ಹಿಂಭಾಗದ ಸೀಟ್‌ನಲ್ಲಿದ್ದ ಸರೋಜಿನಿ ಅವರ ಕುಟುಂಬ ಪ್ರಸ್ತುತ ತಮಿಳುನಾಡಿನಲ್ಲಿ ವಾಸ್ತವ್ಯವಿದ್ದು, ಶುಭ ಕಾರ್ಯ ನಿಮಿತ್ತ ಊರಿಗೆ ಬಂದಿದ್ದರು. ಸರೋಜಿನಿ ಶೆಟ್ಟಿ ಅವರ ಮನೆಯಲ್ಲಿ ಗುರುವಾರ ರಾತ್ರಿ ದೈವದ ಕಾರ್ಯ ಇದ್ದು, ತಡರಾತ್ರಿ ವರೆಗೆ ಕಾರ್ಯಕ್ರಮ ನಡೆದಿತ್ತು. ಕಾರು ಚಾಲಕನೂ ಅವರ ಮನೆಯಲ್ಲೇ ಇದ್ದು, ನಿದ್ದೆಗೆಟ್ಟದ್ದರಿಂದ ಕಾರು ಚಲಾಯಿಸುವ ವೇಳೆ ತೂಕಡಿಕೆ ಬಂದಿರುವುದು ಅಪಘಾತಕ್ಕೆ ಕಾರಣ ಇರಬಹುದು ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಓವರ್‌ಟೇಕ್‌ ಕಾರಣ
ಅತಿ ವೇಗದಲ್ಲಿದ್ದ ಕಾರು ಇನ್ನೊಂದು ವಾಹನವನ್ನು ಹಿಂದಿಕ್ಕಿ ಹೋಗುವ ಭರದಲ್ಲಿ ಸರಕಾರಿ ಬಸ್ಸಿನ ಮುಂಬದಿಗೆ ಗುದ್ದಿ ಅದರ ಎಂಜಿನ್‌ನ ಒಳಗೆ ಸೇರಿತ್ತು. ಅಪಘಾತ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರು ಚಾಲಕ ಮತ್ತು ಗಾಯಾಳು ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಮೆಲ್ಕಾರ್‌ ಸಂಚಾರ ಠಾಣೆ ಎಎಸ್‌ಐ ಕುಟ್ಟಿ ಎಂ.ಕೆ. ಸ್ಥಳಕ್ಕೆ ಧಾವಿಸಿದ್ದರು. ಪಿಎಸ್‌ಐ ಮಂಜುನಾಥ್‌ ಅವರು ಪ್ರಕ ರಣ ದಾಖ ಲಿ ಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.