ಗುರುಮಠಕಲ್ ನಲ್ಲಿ ಸೋಲು-ಗೆಲುವಿನ ಲೆಕ್ಕಚಾರ

ಕ್ಷೇತ್ರದಲ್ಲಿ ಮೈತ್ರಿ ಶಕ್ತಿ ಸಾಫಲ್ಯ ನೀಡುವುದೇ? •ಬಿಜೆಪಿಗೆ ಲಾಭವಾಗುವುದೇ ಮತದಾರರ ನಿರ್ಧಾರ?

Team Udayavani, Apr 27, 2019, 12:41 PM IST

27-April-14

ಯಾದಗಿರಿ: ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರ ಕಲಬುರಗಿ ಲೋಕಸಭೆ ವ್ಯಾಪ್ತಿಗೆ ಒಳಪಟ್ಟಿದ್ದು, ಕಾಂಗ್ರೆಸ್‌ ಭದ್ರ ಕೋಟೆ ಎಂದೇ ಹೆಸರಾಗಿದ್ದ ಕ್ಷೇತ್ರದಲ್ಲೀಗ ಸೋಲು ಗೆಲುವಿನ ಲೆಕ್ಕಾಚಾರ ಚರ್ಚೆಗೆ ಆಹಾರವಾಗಿದೆ.

ಕಾಂಗ್ರೆಸ್‌ ಕೋಟೆಯನ್ನು ಭೇದಿಸಿ ಜೆಡಿಎಸ್‌ನ ನಾಗನಗೌಡ ಕಂದಕೂರ ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಮೈತ್ರಿಯಾಗಿರುವುದರಿಂದ ಕಲಬುರಗಿ ಲೋಕಸಭೆ ಕ್ಷೇತ್ರದ ಗುರುಮಠಲ್ ವಿಧಾನ ಸಭೆಯಲ್ಲಿ ಮೈತ್ರಿ ವರ್ಕೌಟ್ ಆಗಬಹುದೇ ಎನ್ನುವ ಕುರಿತು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಮತದಾನ ಕೇವಲ ಒಂದು ದಿನ ಉಳಿದಿರುವಾಗ ಜೆಡಿಎಸ್‌ನವರು ಕಡಿಮೆ ಸಮಯದಲ್ಲಿ ಏನು ಪ್ರಭಾವ ಬೀರಲಾಗಿಲ್ಲ ಎನ್ನುವ ಜನರ ಗುಸು ಗುಸು ಮಾತು ಒಂದೆಡೆ ಕೇಳಿಬರುತ್ತಿದ್ದರೆ, ಇನ್ನೊಂದೆಡೆ ಕಲಬುರಗಿ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದಿನಿಂದಲೂ ಗುರುಮಠಕಲ್ನಲ್ಲಿ ಹಿಡಿತ ಹೊಂದಿದ್ದು, ಅವರಿಗೆ ಲಾಭವಾಗಲಿದೆ ಎನ್ನಲಾಗುತ್ತಿದೆ. ಈ ಹಿಂದಿನ ಚುನಾವಣೆಗಳ ಟ್ರೆಂಡ್‌ ಬೇರೆನೇ ಇತ್ತು. ಈ ಚುನಾವಣೆ ದೇಶದ ಚುನಾವಣೆಯಾಗಿದೆ. ಗುರುಮಠಕಲ್ ನಗರದ ಹಿಂದಿನಿಂದಲೂ ಬಿಜೆಪಿಗೆ ಲೀಡ್‌ ನೀಡುತ್ತ ಬಂದಿದೆ. ಈ ಬಾರಿ ದೇಶದ ವಿಚಾರಗಳು ಮತದಾರರ ತಲೆಹೊಕ್ಕಿರುವುದು ಬಿಜೆಪಿಗೆ ಲಾಭವಾಗಲಿದೆ ಎನ್ನುವ ಮಾತು ಬಿಜೆಪಿಗರದ್ದು. ಪ್ರತಿ ಗ್ರಾಮದಲ್ಲಿಯೂ ದೇಶದ ವಿಚಾರ ಮತದಾರರು ಯೋಚಿಸುವ ಮಟ್ಟಕ್ಕೆ ಅರಿವು ಮೂಡಿರುವುದು ಕಮಲಕ್ಕೆ ಸ್ಫೂರ್ತಿಯಾಗಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.

ಇದೆಲ್ಲಕ್ಕೂ ಮಿಗಿಲಾಗಿ 2014ರ ಚುನಾವಣೆಗಿಂತ 2019ರ ಚುನಾವಣೆಯಲ್ಲಿ ಗುರುಮಠಕಲ್ನಲ್ಲಿ ಶೇಕಡವಾರು ಮತದಾನ ಹೆಚ್ಚಾಗಿರುವುದು ಬಿಜೆಪಿಗೆ ಲಾಭವಾಗಬಹುದಾ ಎನ್ನುವ ಅಂಶವೂ ಪ್ರಮುಖವಾಗಿದೆ. 2014ರಲ್ಲಿ ಒಟ್ಟು 213293 ಮತದಾರರಲ್ಲಿ 61069 ಪುರುಷರು 61245 ಮಹಿಳೆಯರು ಮತ ಚಲಾಯಿಸಿದ್ದರಿಂದ ಶೇ.57.35 ಮತದಾನವಾಗಿದ್ದು, ಗುರುಮಠಕಲ್ನಲ್ಲಿ ಕಾಂಗ್ರೆಸ್‌ 2700ಕ್ಕೂ ಲೀಡ ಪಡೆದಿತ್ತು. 2019ರಲ್ಲಿ 245251 ಮತದಾರರಲ್ಲಿ 73714 ಪುರುಷ, 74,062 ಮಹಿಳೆಯರು ಮತ್ತು 2 ಇತರೆ ಹಕ್ಕು ಚಲಾಯಿಸಿದ್ದು ಶೇ. 60.31ಮತದಾನ ದಾಖಲಾಗಿದೆ.

ಈ ಹಿಂದಿನ ಚುನಾವಣೆಗಳೇ ಬೇರೆ. ಈ ಚುನಾವಣೆಯಲ್ಲಿ ಮತದಾರರು ಸಾಕಷ್ಟು ಅಂಶಗಳನ್ನು ಗಮನದಲ್ಲಿರಿಸಿಕೊಂಡು ಮತ ನೀಡಿದ್ದಾರೆ. ಅತ್ಯಂತ ಉಲ್ಲಾಸದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರಿಂದ ಶೇಕಡಾವಾರು ಮತದಾನವೂ ಹೆಚ್ಚಾಗಿದೆ. ಮೋದಿ ಅಲೆ ಪ್ರಭಾವ ಬೀರಿರುವುದು ಕಂಡು ಬಂದಿದೆ. ಹಾಗಾಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್‌ ದೊರೆಯುವ ವಿಶ್ವಾಸವಿದೆ.
• ಚಂದುಲಾಲ್ ಚೌಧರಿ,
ಬಿಜೆಪಿ ನಗರ ಘಟಕ ಅಧ್ಯಕ್ಷ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಮಾತ್ರವಲ್ಲದೇ ಗುರುಮಠಕಲ್ನಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಮೈತ್ರಿ ಅಭ್ಯರ್ಥಿಪರ ಉತ್ತಮ ವಾತಾವರಣ ಕಂಡು ಬಂದಿದೆ. ಹೆಚ್ಚಿನ ಮತಗಳು ಮೈತ್ರಿ ಅಭ್ಯರ್ಥಿಗೆ ದೊರೆಯುತ್ತವೆ. ಇದರಲ್ಲಿ ಯಾವುದೇ ಸಂಶಯವಿಲ್ಲ.
•ಶರಣು ಆವುಂಟಿ,
ಜೆಡಿಎಸ್‌ ಮತಕ್ಷೇತ್ರ ಅಧ್ಯಕ್ಷ.

ಮೈತ್ರಿ ಸರ್ಕಾರ ಇರುವುದರಿಂದ ಕೆಲವು ಕಡೆ ಸಹಾಯವಾಗುತ್ತದೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 2700ಕ್ಕೂ ಹೆಚ್ಚು ಲೀಡ್‌ ದೊರೆತಿತ್ತು. ಈ ಬಾರಿ ಗುರುಮಠಕಲ್ ನಗರದಲ್ಲಿ 1 ಸಾವಿರ ಲೀಡ್‌ ಮತ್ತು ಕ್ಷೇತ್ರದಲ್ಲಿ 15 ಸಾವಿರ ಲೀಡ್‌ ಪಡೆಯುವ ವಿಶ್ವಾಸವಿದೆ.
•ಮಹಿಪಾಲರೆಡ್ಡಿ ಹತ್ತಿಕುಣಿ,
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ.

ಅನೀಲ ಬಸೂದೆ

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.