ಮಾಡಾವು-ಪೆರ್ಲಂಪಾಡಿ ರಸ್ತೆ: ಹೊರಳಾಡುತ್ತಿವೆ ಜಲ್ಲಿಕಲ್ಲುಗಳು

ಹದಗೆಟ್ಟ ರಸ್ತೆಯಲ್ಲಿ ಬಸ್ಸೂ ಬರುವುದಿಲ್ಲ | ವಿದ್ಯಾರ್ಥಿಗಳಿಗೆ ಭಾರಿ ತೊಂದರೆ

Team Udayavani, Apr 27, 2019, 3:59 PM IST

puthur-4-tdy..

ಸವಣೂರು/ಕುಂಬ್ರ ಎ. 26: ರಸ್ತೆಯಲ್ಲಿ ಡಾಮರು ಇಲ್ಲ. 5.5 ಕಿ.ಮೀ. ಉದ್ದಕ್ಕೂ ಹೊಂಡ-ಗುಂಡಿಗಳು. ರಸ್ತೆಗೆ ಹಾಕಿದ್ದ ದೊಡ್ಡ ಗಾತ್ರದ ಜಲ್ಲಿಗಳು ಮೇಲೆದ್ದು ಹೊರಳಾಡುತ್ತಿದೆ. ಮಳೆ ಬಂದರೆ ಕೆಸರು, ವಾಹನಗಳ ಚಕ್ರ ಹೂತು ಹೋಗುವಷ್ಟು ಮಣ್ಣು ಇದೆ.

ಇದು ಮಾಡಾವಿನಿಂದ ಪೆರ್ಲಂಪಾಡಿಗೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆ. ಈ ರಸ್ತೆಯನ್ನು ಜನಪ್ರತಿನಿಧಿಗಳು ಮರೆತು ಬಿಟ್ಟಿದ್ದಾರೆ. ಆದರೆ ಸಂಚಾರ ಮಾಡುವಾಗ ಆಗುವ ವ್ಯಥೆ, ನೋವನ್ನು ಜನ ಮರೆತಿಲ್ಲ. ಮರೆಯಲು ಸಾಧ್ಯವೂ ಇಲ್ಲ.

ಬಸ್ಸು ಬರುವುದೇ ಇಲ್ಲ:

ಸುಮಾರು 5.5 ಕಿ.ಮೀ. ಉದ್ದದ ಡಾಮರ್‌ ರಸ್ತೆಯಲ್ಲೊಮ್ಮೆ ಸಂಚರಿಸಿದರೆ ಇದು ಡಾಮರು ರಸ್ತೆ ಹೌದೇ ಎನ್ನುವಂತಿದೆ. ಅಲ್ಲಲ್ಲಿ ಅಲ್ಪ-ಸ್ವಲ್ಪ ಡಾಮರು ಕಾಣುವುದು ಬಿಟ್ಟರೆ ಎಲ್ಲೆಡೆ ಮಣ್ಣು ರಸ್ತೆಯೇ ಕಾಣುತ್ತದೆ. ಮಾತ್ರವಲ್ಲದೆ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿದೆ. ರಸ್ತೆಯಲ್ಲಿ ಬಸ್‌ ಸಂಚಾರವೂ ಇಲ್ಲದಾಗಿದ್ದು, ಜನ ಸಾಮಾನ್ಯರ ಮತ್ತು ವಿದ್ಯಾರ್ಥಿಗಳ ಪೇಚಾಟಕ್ಕೂ ಕಾರಣವಾಗಿದೆ. ವರ್ಷಗಳ ಹಿಂದೆ ಪುತ್ತೂರಿನಿಂದ ಮಾಡಾವುಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಈ ಭಾಗದ ಉಪ್ಪಳಿಗೆಯವರೆಗೆ ವಿಸ್ತರಿಸಿ ವ್ಯವಸ್ಥೆ ಕಲ್ಪಿಸಲಾಗಿತ್ತಾದರೂ, ಈಗ ಅದೂ ಇಲ್ಲದಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದ ರಿಂದ ಬಸ್ಸು ಸಂಚಾರ ಬಿಡಿ ಸೈಕಲ್ ಸಂಚಾರಕ್ಕೂ ಸಾಧ್ಯವಿಲ್ಲದ ಸ್ಥಿತಿ ಇದೆ.

ಜನಪ್ರತಿನಿಧಿಗಳೇ ಗಮನಹರಿಸಿ:

ಕಳೆದ ಹಲವು ವರ್ಷಗಳಿಂದ ದುರಸ್ತಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಾಡಾವು-ಪೆರ್ಲಂಪಾಡಿ ಸಿದ್ಧಮೂಲೆ ರಸ್ತೆ ದುರಸ್ತಿಯ ಬಗ್ಗೆ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ನೂರಕ್ಕೂ ಅಧಿಕ ಮನೆ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಮಾಡಾವುನಿಂದ ಸಿದ್ಧಮೂಲೆ ಪೆರ್ಲಂಪಾಡಿ ರಸ್ತೆಗೆ ಬಂದು ಆ ಮೂಲಕ ಅಮ್ಚಿನಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸೇರಬಹುದು. ಯಾವ ಜನಪ್ರತಿನಿಗಳು ಸ್ವಂತ ಹಣವನ್ನು ರಸ್ತೆಗೆ ಹಾಕುತ್ತಿಲ್ಲ. ತಮ್ಮ ಕ್ಷೇತ್ರದ ಜನರ ಬೇಡಿಕೆಯನ್ನು ಈಡೇರಿಸಲು ಜನರಿಂದ ಆಯ್ಕೆಯಾದವರು ಶ್ರಮಿಸ ಬೇಕು. ಅದಕ್ಕೆಂದೇ ಜನ ನಿಮ್ಮನ್ನು ಆಯ್ಕೆ ಮಾಡಿದ್ದಾರೆ. ಈ ರಸ್ತೆಗೆ ಅನುದಾನ ಇರಿಸಲು ನಿಮ್ಮಿಂದ ಸಾಧ್ಯವಾಗದೇ ಇದ್ದಲ್ಲಿ ಗ್ರಾಮಸ್ಥರಿಗೆ ತಿಳಿಸಿ ನಾವೇ ಅದಕ್ಕೊಂದು ಪರಿಹಾರವನ್ನು ಕಾಣಿಸುತ್ತೇವೆ. ನಿಮ್ಮ ಭರವಸೆಯನ್ನು ನಂಬಿ ನಾವು ಹತ್ತಾರು ವರ್ಷಗಳಿಂದ ಮೋಸ ಹೋಗಿದ್ದೇವೆ. ರಸ್ತೆ ನೋಡಲು ಬರುವುದಾದರೆ ಬನ್ನಿ ಎಂದು ಸ್ಥಳೀಯ ಜನರು ಆಕ್ರೋಶದಿಂದ ಜನಪ್ರತಿನಿಧಿಗಳ ವಿರುದ್ಧ ಮಾತನಾಡುತ್ತಾರೆ.

ವಿದ್ಯಾರ್ಥಿಗಳಿಗೆ ಭಾರಿ ತೊಂದರೆ:

ಈ ಭಾಗದಲ್ಲಿ ಅದೆಷ್ಟೋ ಮನೆಗಳಿವೆ. ಪುತ್ತೂರು, ಪೆರ್ಲಂಪಾಡಿ, ಬೆಳ್ಳಾರೆ ಕಡೆಗೆ ಈ ಭಾಗದಿಂದ ನಿತ್ಯ ಪ್ರಯಾಣಿಕರು ಪ್ರಯಾಣಿಸುತ್ತಾರೆ. ರಸ್ತೆಯ ಸದ್ಯದ ಪರಿಸ್ಥಿತಿಯಿಂದ ಕಂಗಾಲಾಗಿದ್ದಾರೆ. ಈ ಭಾಗದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಬೇಕಾಗಿದೆ. ಮೊದಲೇ ಬಸ್‌ ಸೌಲಭ್ಯವಿಲ್ಲದ ರಸ್ತೆಯಲ್ಲಿ ಇತರ ಬಾಡಿಗೆ ವಾಹನಗಳ ಸಂಚಾರವೂ ಇಲ್ಲದಾಗಿದೆ. ಪುತ್ತೂರು, ಬೆಳ್ಳಾರೆ ಮೊದಲಾದ ಕಡೆಗಳಿಗೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಅತೀವ ತೊಂದರೆ ಎದುರಿಸುತ್ತಿದ್ದಾರೆ. ರಸ್ತೆಯ ದುರಸ್ತಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪುತ್ತೂರು-ಸುಳ್ಯ ಗಡಿಭಾಗದ ವಿಚಾರದಲ್ಲಿ ರಸ್ತೆ ಅಭಿವೃದ್ದಿ ಕಾಣದಾಯಿತೋ ಅಥವಾ ಜನಪ್ರತಿನಿಗಳ  ನಿರ್ಲಕ್ಷ್ಯಕ್ಕೆ ಒಳಗಾಯಿತೋ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.