ಸತ್ಕರ್ಮಗಳಿಂದ ಬದುಕಿನಲ್ಲಿ ಒಳಿತು: ಅಬ್ದುಲ್
Team Udayavani, Apr 28, 2019, 6:32 AM IST
ಉಳ್ಳಾಲ: ನಾವು ಮಾಡಿದ ಸತ್ಕರ್ಮಗಳು ನಮ್ಮ ಬದುಕಿಗೆ ಒಳಿತ ನ್ನೊದಗಿಸುತ್ತವೆ. ಇನ್ನೊಬ್ಬರ ಸಂಕಷ್ಟಕ್ಕಾಗಿ ಉದಾರವಾಗಿ ನೀಡುವ ದಾನ ವಿಪತ್ತುಗಳಿಂದ ನಮ್ಮನ್ನು ಕಾಪಾಡುತ್ತವೆ ಎಂದು ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು.
ಮಿಲ್ಲತ್ನಗರ ಮಸೀದಿ ಮತ್ತು ಪರಿಸರದ ನಿವಾಸಿಗಳ ಉಪಯೋಗಕ್ಕಾಗಿ ದಾನಿಯೊಬ್ಬರ ನೆರವಿನಿಂದ ನಿರ್ಮಾಣ ವಾಗಲಿರುವ ತೆರೆದಬಾವಿ ಕಾಮಗಾರಿಗೆ ನಡೆದ ಆರಂಭಿಕ ಪ್ರಕ್ರಿಯೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ಪರಿಹಾರಕ್ಕಾಗಿ ದರ್ಗಾದ ಮಾಜಿ ಸದಸ್ಯ ಕಬೀರ್ ಚಾಯಬ್ಬ ಅವರ ಪ್ರಯತ್ನದ ಫಲವಾಗಿ ಬೆಂಗಳೂರಿನ ದಾನಿಗಳು ಬಾವಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಆ ಕಾರ್ಯಕ್ಕೆ ಭಗವಂತನು ತಕ್ಕುದಾದ ಪ್ರತಿಫಲ ನೀಡಲಿ ಎಂದು ಹಾರೈಸಿದರು.
ಉಳ್ಳಾಲದ ಸಹಾಯಕ ಖಾಝಿ ಅಬ್ದುಲ್ ರವೂಫ್ ಮುಸ್ಲಿಯಾರ್ ದುವಾಗೈದರು.ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಕೆ. ಮೋನು ಇಸ್ಮಾಯಿಲ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್, ಸಮಾಜ ಸೇವಕ ಕಬೀರ್ ಚಾಯಬ್ಬ, ಉಳ್ಳಾಲ ದರ್ಗಾ ಲೆಕ್ಕ ಪರಿಶೋಧಕ ಯು.ಟಿ. ಇಲ್ಯಾಸ್, ಕೌನ್ಸೆಲರ್ ಯು.ಎಂ. ಜಬ್ಟಾರ್, ಉಳ್ಳಾಲ ದರ್ಗಾ ಜತೆ ಕಾರ್ಯದರ್ಶಿ ನೌಷಾದ್ ಅಬೂಬಕ್ಕರ್, ಉಳ್ಳಾಲ ಅರೇಬಿಕ್ ಟ್ರಸ್ಟ್ ಜತೆ ಕಾರ್ಯದರ್ಶಿ ಆಶಿಫ್ ಅಬ್ದುಲ್ಲ, ದರ್ಗಾ ಸದಸ್ಯರಾದ ಉದ್ಯಮಿ ಅಲಿಮೋನು, ಯು.ಕೆ. ಯುಸೂಫ್ ಉಳ್ಳಾಲ್, ಆದ್ದಂ ಕೋಟೆಪುರ, ಹಮ್ಮಬ್ಬ ಕೋಟೆಪುರ, ಎಸ್.ಡಿ.ಪಿ.ಐ. ಮುಖಂಡ ನಿಝಾಮ್ ಮೇಲಂಗಡಿ, ಉಳ್ಳಾಲ ಸಯ್ಯದ್ ಇಬ್ರಾಹಿಂ ತಂಙಳ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಅದ್ರಾಮ, ಗುತ್ತಿಗೆದಾರ ಮಹಮ್ಮದ್ ಮೇಸ್ತ್ರಿ, ಹೊಸಪಳ್ಳಿ ಸದಸ್ಯರಾದ ಕಬೀರ್ ಬುಖಾರಿ, ಹಸೈನಾರ್ ಜಿ.ಎಂ.ಹೌಸ್, ಇಬ್ರಾಹಿಂ ಕಲ್ಲಾನ ಹಾಗೂ ಖಾದರ್ ಮಿಲ್ಲತ್ನಗರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
MRPL: ಕರಾವಳಿಗೆ ಮೊದಲ “ಗ್ರೀನ್ ಹೈಡ್ರೋಜನ್’ ಘಟಕ
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.