ಕಿನ್ನಿಗೋಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯೇ ಆಧಾರ
ಕಿಲ್ಪಾಡಿ, ಅತಿಕಾರಿಬೆಟ್ಟು ಗ್ರಾ. ಪಂ.
Team Udayavani, Apr 29, 2019, 10:52 AM IST
ಅತಿಕಾರಿ ಬೆಟ್ಟು ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ನೀರಿನ ಸಂಗ್ರಹಣೆ ಟ್ಯಾಂಕ್.
ಮೂಲ್ಕಿ: ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದರೂ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದಾಗಿ ಈ ಭಾಗದಲ್ಲಿ ಅತಿಯಾದ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಆದರೆ ನೀರಿನ ಒರತೆ ಕಡಿಮೆ ಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ನಾಲ್ಕೈದು ವರ್ಷಗಳ ಹಿಂದೆ ಇಬ್ಟಾಗವಾಗಿ ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾ. ಪಂ. ಆಗಿ ಪರಿವರ್ತನೆ ಯಾಯಿತು. ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಿಲ್ಪಾಡಿ ಗ್ರಾಮ ಒಂದೇ ಇದ್ದು, ಅತಿಕಾರಿಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಮಂತೂರು ಮತ್ತು ಅತಿಕಾರಿ ಬೆಟ್ಟು ಗ್ರಾಮಗಳು ಸೇರಿ ಕೊಂಡಿವೆ. ಹೊಸದಾಗಿ ರೂಪಿಸಲಾದ ಈ ಎರಡೂ ಗ್ರಾ.ಪಂ. ಗಳಿಗೂ ಒಬ್ಬರೇ ಅಭಿವೃದ್ಧಿ ಅಧಿಕಾರಿ ಇದ್ದು, ವಾರದಲ್ಲಿ ಮೂರು ದಿನ ಎರಡು ಅವಧಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ಟ್ಯಾಂಕ್ ನಿರ್ಮಾಣ
ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಎಸ್.ಸಿ. ಮತ್ತು ಎಸ್.ಟಿ. ಕಾಲನಿಯ ಬಳಿಯ ಸುಮಾರು ಐದು ಮನೆಗೆ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದನ್ನು ಪರಿಹರಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಟ್ಯಾಂಕ್ ನಿರ್ಮಿಸಲಾಗಿದೆ. ಕೊಳವೆ ಬಾವಿ ಮೂಲಕ ಟ್ಯಾಂಕ್ಗೆ ನೀರು ಸಂಪರ್ಕಕೊಟ್ಟು ಸಮಸ್ಯೆ ಪರಿಹರಿಸಲು ಪಂಚಾಯತ್ ಮುಂದಾಗಿದೆ. ಈ ಎರಡು ಪಂಚಾಯತ್ನಲ್ಲಿ ಹೇಳಿಕೊಳ್ಳುವಂತಹ ನೀರಿನ ಸಮಸ್ಯೆ ಸದ್ಯಕ್ಕಿಲ್ಲ ಎನ್ನುತ್ತಾರೆ ಪಂಚಾಯತ್ ಪಿಡಿಒ.
ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ನ ಕಕ್ವ, ಮಟ್ಟು ಮತ್ತು ಬಾನಬೆಟ್ಟು ಪ್ರದೇಶ ಮಾತ್ರವಲ್ಲ ಇತರ ಕಡೆಗಳಲ್ಲೂ ನೀರಿನ ಸಮಸ್ಯೆ ಇದೆಯಾದರೂ ಎರಡು ವರ್ಷಗಳಿಂದ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಸರಬರಾಜು ಆಗುತ್ತಿದೆ ಹೀಗಾಗಿ ಇಲ್ಲಿನ ನೀರಿನ ಸಮಸ್ಯೆಗೆ ಸದ್ಯ ಪರಿಹಾರ ಸಿಕ್ಕಿದೆ.
ಟ್ಯಾಂಕ್ ಕುಸಿಯುವ ಭೀತಿ
ಬಾನಬೆಟ್ಟು ಎಂಬಲ್ಲಿ ನೀರು ಸಂಗ್ರಹಕ್ಕಾಗಿ ಇರುವ ಟ್ಯಾಂಕ್ ಕುಸಿಯುವ ಹಂತದಲ್ಲಿದೆ. ಈ ಟ್ಯಾಂಕ್ನಲ್ಲಿ ನೀರು ತುಂಬಿಸುವ ಹಾಗಿಲ್ಲದಿದ್ದರೂ ತುಂಬಿಸಲಾಗುತ್ತಿದೆ. ಈ ಪರಿಸರದಲ್ಲಿ ಅಂಗನವಾಡಿ ಹಾಗೂ ಮನೆಯೊಂದು ಇದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಗಮನಕ್ಕೆ ತಂದಿದ್ದರೂ ಈ ವರೆಗೆ ಕ್ರಮಕೈಗೊಂಡಿಲ್ಲ ಎನ್ನುತ್ತಾರೆ ಸ್ಥಳೀಯರು.
•ಸರ್ವೋತ್ತಮ ಅಂಚನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ
Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ
Crime: ನಡುರಸ್ತೆಯಲ್ಲೇ ಪೇಂಟರ್ ಕೊಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.