ತೆಲುಗಿನತ್ತ ಮಾರಿಮುತ್ತು ಮೊಮ್ಮಗಳು

ಮೇರಾದೋಸ್ತ್ ಚಿತ್ರಕ್ಕೆ ಜಯಶ್ರೀ ನಾಯಕಿ

Team Udayavani, Apr 30, 2019, 3:00 AM IST

jayashree

ಮಾರಿಮುತ್ತು ಖ್ಯಾತಿಯ ನಟಿ ಸರೋಜಮ್ಮ ಅವರ ಮೊಮ್ಮಗಳು ಜಯಶ್ರೀ ಸಿನಿಮಾ ರಂಗಕ್ಕೆ ಎಂಟ್ರಿಯಾಗಿರುವ ಕುರಿತು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. “ಶಶಿಕಲಾ ಲವ್ವರ್‌ ಆಫ್ ಪುಟ್ಟರಾಜು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಜಯಶ್ರೀ, ಈಗ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ.

ಹೌದು, ಕನ್ನಡದಲ್ಲೇ ಒಳ್ಳೆಯ ಚಿತ್ರಗಳನ್ನು ಎದುರು ನೋಡುತ್ತಿದ್ದ ಜಯಶ್ರೀಗೆ ತೆಲುಗು ಚಿತ್ರದಲ್ಲಿ ನಟಿಸುವ ಅವಕಾಶ ಬಂದಿದೆ. ಆ ಚಿತ್ರಕ್ಕೆ “ಮೇರಾ ದೋಸ್ತ್’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರವನ್ನು ಮುರಳಿ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ.

ತೆಲುಗಿನ ಈಟಿವಿಯಲ್ಲಿ ಒಂದು ದಶಕದ ಕಾಲ ಮನರಂಜನೆ ವಿಭಾಗದಲ್ಲಿ ಕೆಲಸ ಮಾಡಿದ್ದ ಮುರಳಿ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಇನ್ನು, ವಿಜಯ್‌ ಎಂಬ ಹೊಸ ಪ್ರತಿಭೆ ಈ ಚಿತ್ರದ ನಾಯಕ. ಚಿತ್ರದಲ್ಲಿ ನಾಯಕ, ನಾಯಕಿ ಹೊಸಬರಿದ್ದರೆ, ಉಳಿದಂತೆ ಪೋಷಕ ಪಾತ್ರಗಳಲ್ಲಿ ಅನುಭವಿ ಕಲಾವಿದರೇ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಜಯಶ್ರೀ ಮಾತು.

ಅಂದಹಾಗೆ, ಇದು ಗೆಳೆತನ ಮತ್ತು ಪ್ರೀತಿ ನಡುವಿನ ಕಥೆ. ಈಗಿನ ಟ್ರೆಂಡ್‌ಗೆ ತಕ್ಕಂತಹ ಇರುವ ಕಥೆ ಇದಾಗಿದ್ದು, ಜಯಶ್ರೀ ಅವರಿಗಿಲ್ಲಿ ಎರಡು ಶೇಡ್‌ ಇರುವ ಪಾತ್ರ ಸಿಕ್ಕಿದೆಯಂತೆ. ಒಂದು ಹಳ್ಳಿ ಹುಡುಗಿಯಾಗಿ, ಇನ್ನೊಂದು ಕಾಲೇಜು ಓದುವ ಮಾರ್ಡನ್‌ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ.

ಅದೊಂದು ರೀತಿ ಮನೆಯಲ್ಲಿ ಮುಗ್ಧವಾಗಿರುವ ಹುಡುಗಿ, ಹೊರಗೆ ಸಿಕ್ಕಾಪಟ್ಟೆ ತರೆಲ ಮಾಡುವ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೈದ್ಯರೊಬ್ಬರು ನಿರ್ಮಿಸುತ್ತಿದ್ದು, ಅವರಿಗೂ ಇದು ಮೊದಲ ಚಿತ್ರವಂತೆ. ಇನ್ನು, “ಮೇರಾ ದೋಸ್ತ್’ ಚಿತ್ರಕ್ಕೆ ಮೇ 6 ರಿಂದ ಚಿತ್ರೀಕರಣ ಶುರುವಾಗಲಿದೆ.

ಸುಮಾರು 30 ದಿನಗಳ ಕಾಲ ಮೂರು ಹಂತದಲ್ಲಿ ಹೈದರಾಬಾದ್‌ ನಗರ, ಹಳ್ಳಿ ಮತ್ತು ರಾಮೋಜಿ ಫಿಲ್ಮ್ಸಿಟಿ ಸೇರಿದಂತೆ ಇತರೆಡೆ ಚಿತ್ರೀಕರಣ ಮಾಡಲು ನಿರ್ಧರಿಸಿರುವ ಚಿತ್ರತಂಡದಲ್ಲಿ ನುರಿತ ತಂತ್ರಜ್ಞರು ಕೆಲಸ ಮಾಡಲಿದ್ದಾರಂತೆ. ಜಯಶ್ರೀ ಅವರಿಗೆ ತೆಲುಗು ಭಾಷೆ ಶೇ.40 ರಷ್ಟು ಗೊತ್ತಿದೆ.

ಸಲೀಸಾಗಿ ಮಾತನಾಡಲು ಬರದಿದ್ದರೂ, ಹೇಳಿದ್ದನ್ನು ಅರ್ಥ ಮಾಡಿಕೊಳ್ಳಬಲ್ಲರಂತೆ. ತಮ್ಮ ಎರಡನೇ ಚಿತ್ರಕ್ಕೆ ತೆಲುಗಿನಿಂದ ಅವಕಾಶ ಬಂದಿರುವುದರಿಂದ ಅವರಿಗೆ ಸಹಜವಾಗಿಯೇ ಖುಷಿ ಇದೆ. ಹಾಗಂತ ಅವರು ಅಲ್ಲೇ ಇದ್ದು, ಸಿನಿಮಾಗಳನ್ನು ಮಾಡುತ್ತಾರಾ ಎಂಬ ಪ್ರಶ್ನೆಗೆ,

“ಖಂಡಿತ ಇಲ್ಲ ಎಂಬ ಉತ್ತರ ಬರುತ್ತದೆ. ಕನ್ನಡದಲ್ಲಿ ಒಂದೆರಡು ಮಾತುಕತೆ ನಡೆಯುತ್ತಿದ್ದು, ಈ ಚಿತ್ರ ಮುಗಿಸಿಕೊಂಡು ಪುನಃ ಕನ್ನಡದಲ್ಲೇ ಕೆಲಸ ಮಾಡ್ತೀನಿ. ಒಳ್ಳೆಯ ಅವಕಾಶ ಸಿಕ್ಕರೆ ಮಾತ್ರ ಯಾವ ಭಾಷೆ ಇದ್ದರೂ ಮಾಡ್ತೀನಿ’ ಎನ್ನುತ್ತಾರೆ ಜಯಶ್ರೀ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.