ಬೆಂಗಳೂರಲ್ಲಿ ಟ್ರಾನ್ಸಿಟ್ ಹಾಸ್ಟೆಲ್ ಸೌಲಭ್ಯ
Team Udayavani, Apr 30, 2019, 3:00 AM IST
ಬೆಂಗಳೂರು: ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಸಂದರ್ಶನ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಬರುವ ಎಲ್ಲ ವರ್ಗದ ಮಹಿಳೆಯರಿಗೆ ಸುರಕ್ಷಿತ ವಾಸ್ತವ್ಯ ಕಲ್ಪಿಸಲು ಹದಿಮೂರು ಟ್ರಾನ್ಸಿಟ್ ಹಾಸ್ಟೆಲ್ ಪ್ರಾರಂಭಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜತೆಗೂಡಿ ಸ್ಥಾಪಿಸಿರುವ ಈ ಹಾಸ್ಟೆಲ್ಗಳಲ್ಲಿ ಎಲ್ಲ ವರ್ಗದ ಮಹಿಳೆಯರಿಗೆ ವರಮಾನದ ಮಿತಿಯಿಲ್ಲದೆ ಮೂರು ದಿನಗಳವರೆಗೆ ಉಚಿತ ಊಟೋಪಚಾರ ಮತ್ತು ಸುರಕ್ಷಿತ ವಾಸ್ತವ್ಯವನ್ನು ಕಲ್ಪಿಸಲಾಗುವುದು.
ಜಯಮಹಲ್ನ ನಂದಿದುರ್ಗ ರಸ್ತೆಯಲ್ಲಿ ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡರ್ ವೆಲ್ಫೇರ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-23330846, 22925898), ಶಂಕರಪುರದ ರಂಗಾರಾವ್ ರಸ್ತೆಯ ಶಾರದಾ ಕುಟೀರ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-26674697), ಮಿಷನ್ ರಸ್ತೆಯ ಸಿಎಸ್ಐ ಕಾಂಪೌಂಡ್ನಲ್ಲಿ ಯಂಗ್ ವುಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-22238574),
ಸಂಪಂಗಿರಾಮನಗರದ ಯೂನಿವರ್ಸಿಟಿ ವುಮೆನ್ಸ್ ಅಸೋಸಿಯೇಷನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (0808-22223314,26631838,9845023783), ಕುಮಾರಸ್ವಾಮಿ ಲೇ ಔಟ್ನ ಶಾವಿಕೆ ಮಲ್ಲೇಶ್ವರ್ ಹಿಲ್ಸ್ನ ಮಹಾತ್ಮ ಗಾಂಧಿ ವಿದ್ಯಾಪೀಠ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-26662226), ಜಯನಗರ 1 ನೇ ಬ್ಲಾಕ್, 5 ನೇ ಕ್ರಾಸ್ನ ಜಯನಗರ ಸ್ತ್ರೀ ಸಮಾಜ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-26674697),
ಜಯನಗರ 4 ನೇ ಬ್ಲಾಕ್, ಕಾರ್ಪೋರೇಷನ್ ಲೇ ಔಟ್ನ ಆಲ್ ಇಂಡಿಯಾ ವುಮೆನ್ಸ್ ಕಾನ್ಫರೆನ್ಸ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಅಸೋಸಿಯೇಷನ್(080-26349676), ಕೆಂಗೇರಿ ಬಸವಾಶ್ರಮದ ಬಸವ ಸಮಿತಿ ಬಸವ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (0808-22723355), ಕನಕಪುರ ಮುಖ್ಯರಸ್ತೆ ಜರಗನಹಳ್ಳಿಯ ವಿಶಾಲ ವಿದ್ಯಾಸಂಸ್ಥೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (9341289653),
ಪೀಣ್ಯ 1 ನೇ ಹಂತ ಕೆಐಡಿಬಿ ಕಾಲೋನಿಯ ಕರ್ನಾಟಕ ರೂರಲ್ ಅಂಡ್ ಹ್ಯಾಂಡಿಕ್ಯಾಪ್ಡ್ ಡೆವಲಪ್ಮೆಂಟ್ ಸೊಸೈಟಿ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್, ನಾಗರಬಾವಿ ಕ್ಯಾಂಪಸ್ನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯನ್ ಯೂನಿವರ್ಸಿಟಿ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-23160531, 23160535),
ಕೋರಮಂಗಲ ಆರನೇ ಬ್ಲಾನ್ನ ಯಂಗ್ ವುಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-25634813), ಜ್ಞಾನಭಾರತಿ ಕ್ಯಾಂಪಸ್ನ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸೌತ್ ಇಂಡಿಯನ್ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ (080-23213243,23218452)ನಲ್ಲಿ ವಾಸ್ತವ್ಯ ಹೂಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.