ಅಂಧ ದಂಪತಿ ವಂಚಿಸಿ ಮಗು ಕದ್ದೊಯ್ದ ದುಷ್ಕರ್ಮಿಗಳು


Team Udayavani, Apr 30, 2019, 3:00 AM IST

Udayavani Kannada Newspaper

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ನಗರಕ್ಕೆ ಬಂದಿದ್ದ ಅಂಧ ದಂಪತಿಯ ಎಂಟು ತಿಂಗಳ ಮಗುವನ್ನು ನೀರು ಕುಡಿಸುವ ನೆಪದಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕದ್ದೊಯ್ದ ಘಟನೆ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಮೂಲದ ಬಸವರಾಜು ಹಾಗೂ ಬಿ.ಕೆ.ಚಿನ್ನು ದಂಪತಿಯ ಪುತ್ರ ಸಾಗರ್‌ ಅಪಹರಣಗೊಂಡ ಮಗು. ಈ ಸಂಬಂಧ ದಂಪತಿ, ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿರುವ ಬಸವರಾಜು ದಂಪತಿ ಸಂಗೀತ ಶಾಲೆ ಹಾಗೂ ಆರ್ಕೆಸ್ಟ್ರಾದಲ್ಲಿ ಹಾಡು ಹಾಡಿ ಜೀವನ ನಡೆಸುತ್ತಿದ್ದಾರೆ. ದಂಪತಿ ತಾವು ಹೋದಲ್ಲೆಲ್ಲಾ ಮಗುವನ್ನು ಕರೆದೊಯ್ಯುತ್ತಿದ್ದರು. ಬೆಂಗಳೂರಿನಲ್ಲಿ ಬಸವರಾಜು ಅವರ ಸಂಬಂಧಿಗಳಿದ್ದ ಕಾರಣ, ಆಗಾಗ ಬಂದು ಹೋಗುತ್ತಿದ್ದರು.

ಪ್ರತಿ ಬಾರಿಯಂತೆ ಏ.26ರಂದು ಊರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಂದು ಏ.27ರಂದು ಮೆಜೆಸ್ಟಿಕ್‌ನಲ್ಲಿ ಇಳಿದುಕೊಂಡಿದ್ದಾರೆ. ಬೆಳಗ್ಗೆ 7.30ಕ್ಕೆ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿರುವ ಪ್ಲಾಟ್‌ಫಾರಂ 19(ಡಿ)ನಲ್ಲಿ ದಂಪತಿ ಪುತ್ರನ ಜತೆ ಕುಳಿತಿದ್ದರು.

ಮಗು ಜೋರಾಗಿ ಅಳುತ್ತಿದ್ದರಿಂದ ತಾಯಿ ಮಗುವಿಗೆ ನೀರು ಕುಡಿಸಲು ಹೊರಟಿದ್ದಾರೆ. ಇದೇ ವೇಳೆ ನಿಲ್ದಾಣದಲ್ಲಿದ್ದ ಅಪರಿಚಿತ ಮಹಿಳೆ, “ಮಗು ಕೊಡಿ, ನಾನು ನೀರು ಕುಡಿಸುತ್ತೇನೆ’ ಎಂದು ಮತ್ತೆ ಮತ್ತೆ ಕೇಳಿದ್ದಾಳೆ. ಆದರೆ, ದಂಪತಿ ನಿರಾಕರಿಸಿದ್ದರು.

ಈ ನಡುವೆ ಸಾಗರ್‌ ಅಳುವುದನ್ನು ನಿಲ್ಲಿಸಿಲ್ಲ. ಹೀಗಾಗಿ ಸ್ವಲ್ಪ ಸಮಾಧಾನವಾಗಬಹದು ಎಂದು ಮಹಿಳೆಗೆ ಮಗು ಕೊಟ್ಟು, ನೀರು ಕುಡಿಸುವಂತೆ ನೀರಿನ ಲೋಟ ನೀಡಿದ್ದಾರೆ. ನೀರು ಕುಡಿಸಿದ ಮಹಿಳೆ, ನೀರಿನ ಲೋಟವನ್ನು ಹಿಂದಿರುಗಿಸಿದ್ದಾಳೆ.

ನಂತರ “ನನ್ನ ಮಗು ಕೊಡಿ ತಾಯಿ’ ಎಂದು ಕೇಳಿದಾಗ ಯಾವುದೇ ಉತ್ತರ ಬಂದಿಲ್ಲ. ದಂಪತಿಗೆ ಕಣ್ಣು ಕಾಣದ ಹಿನ್ನೆಲೆಯಲ್ಲಿ ತಾವು ಕುಳಿತಿದ್ದ ಸುತ್ತ-ಮುತ್ತ ಕೈ ಆಡಿಸಿದಾಗ ಮಗುವಾಗಲಿ, ಮಗುವನ್ನು ಪಡೆದ ಅಪರಿಚಿತ ಮಹಿಳೆಯಾಗಲಿ ಸಿಕ್ಕಿಲ್ಲ.

ಆತಂಕಗೊಂಡ ದಂಪತಿ, ಪುತ್ರ ಎಲ್ಲಿ ಹೋದ ಸಹ ಪ್ರಯಾಣಿಕರನ್ನು ಕೇಳಿದ್ದಾರೆ. ಆದರೆ, ಯಾರೂ ಸರಿಯಾಗಿ ಸ್ಪಂದಿಸಿಲ್ಲ. ಕೊನೆಗೆ ಸಹಾಯಕ್ಕೆ ಬಂದ ಕೆಲವರು, ನಿಲ್ದಾಣದ ಸುತ್ತ-ಮುತ್ತ ಹುಡುಕಾಡಿದರೂ, ಮಹಿಳೆ, ಮಗು ಪತ್ತೆಯಾಗಿಲ್ಲ. ಕೊನೆಗೆ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಸಿ ಕ್ಯಾಮೆರಾ ಪರಿಶೀಲನೆ: ಮಹಿಳೆ ಮಗುವನ್ನು ಕರೆದೊಯ್ದ ಸ್ಥಳದ ಆಸುಪಾಸು ಇರುವ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿದ್ದು, ಯಾವುದೇ ಸುಳಿವು ಸಿಗುತ್ತಿಲ್ಲ. ಹೀಗಾಗಿ ಬಸವರಾಜು ಅವರ ಸೋದರ ಸಂಬಂಧಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.

ಸಿಎಂ ಭೇಟಿಯಾಗಲು ಬಂದಿದ್ದೇವು: ಉದಯವಾಣಿ ಜತೆ ಮಾತನಾಡಿದ ಬಸವರಾಜು, ಅಂಗವಿಕಲರ ಅನುದಾನ ಹಾಗೂ ತಾವು ನಡೆಸುತ್ತಿರುವ ಆರ್ಕೆಸ್ಟ್ರಾಗೆ ಧನ ಸಹಾಯ ಕೇಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದೆವು.

ಇಲ್ಲಿಗೆ ಬಂದ ನಂತರ ಮುಖ್ಯಮಂತ್ರಿ ಬಳಿ ಹೇಗೆ ಹೋಗಬೇಕು ಎಂದು ತೋಚದೆ, ಬಸ್‌ ನಿಲ್ದಾಣದಲ್ಲೇ ಕಾಲ ಕಳೆಯುತ್ತಿದ್ದೆವು. ನೀರು ಕುಡಿಸುವ ನೆಪದಲ್ಲಿ ಮಹಿಳೆ ಮಗುವನ್ನು ಕರೆದೊಯ್ದಿದ್ದಾಳೆ. ಪೊಲೀಸರು ಸೇರಿ ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಬಸ್‌ ನಿಲ್ದಾಣದಲ್ಲೇ ದಿನದೂಡುತ್ತಿದ್ದೇವೆ ಎಂದು ಭಾವುಕರಾದರು.

ಮಗು ಸಿಗುವವರೆಗೂ ಬೆಂಗಳೂರು ಬಿಟ್ಟು ಹೋಗುವುದಿಲ್ಲ. ಒಂದು ವೇಳೆ ಮಗು ಸಿಗದಿದ್ದರೆ, ನಾವು ಬದುಕುವುದಿಲ್ಲ.
-ಬಸವರಾಜು, ಮಗುವಿನ ತಂದೆ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.