ಕೆ.ಆರ್‌.ಪುರದಲ್ಲಿ ಕುಡಿಯುವ ನೀರಿಗೆ ಪರದಾಟ


Team Udayavani, Apr 30, 2019, 3:00 AM IST

kr-pur

ಕೆ.ಆರ್‌.ಪುರ: ಬಿಸಿಲ ತಾಪ ಹೆಚ್ಚಾದಂತೆ ಕೆ.ಆರ್‌.ಪುರ ವಿಧಾನಸಭೆ ಕ್ಷೇತ್ರದ ಬಹುತೇಕ ವಾರ್ಡ್‌ಗಳಲ್ಲಿ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಒಂದೆಡೆ ಅಂತರ್ಜಲ ಮಟ್ಟ ಕುಸಿದು, ಕೊಳೆವೆಬಾವಿಗಳು ಬತ್ತುತ್ತಿದ್ದು, ಬೋರ್‌ವೆಲ್‌ ನೀರನ್ನೇ ಅವಲಂಬಿಸಿದ್ದ ಹಲವು ಗ್ರಾಮಗಳಲ್ಲಿ ಸಮಸ್ಯೆ ಹೆಚ್ಚಾಗಿದೆ.

ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ ಕ್ಷೇತ್ರದ 11 ಹಳ್ಳಿಗಳಿಗೆ ಜಲಮಂಡಳಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ಹೀಗಾಗಿ ಬೋರ್‌ವೆಲ್‌ ನೀರಿಲ್ಲದೆ, ಇತ್ತ ಕಾವೇರಿ ನೀರೂ ಬಾರದೆ ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರು, ಅನಿವಾರ್ಯವಾಗಿ ಒಂದು ಟ್ಯಾಂಕರ್‌ ನೀರಿಗೆ 600ರಿಂದ 700 ರೂ. ಕೊಟ್ಟು ನೀರು ಖರೀದಿಸುತ್ತಿದ್ದಾರೆ.

ಕೆ.ಆರ್‌.ಪುರ ಕ್ಷೇತ್ರದ ವ್ಯಾಪ್ತಿಯ 9 ವಾರ್ಡ್‌ಗಳಲ್ಲೂ ಕುಡಿಯುವ ನೀರಿನ ತತ್ವಾರ ಎದುರಾಗಿದೆ. ಬಸವನಪುರ ವಾರ್ಡ್‌ನ ಸ್ವತಂತ್ರನಗರ, ಪಾರ್ವತಿನಗರ, ದೊಡ್ಡಬಸವನಪುರ ಹಾಗೂ ರಾಮಮೂರ್ತಿನಗರ ವಾರ್ಡ್‌ನ ಕೆ.ಚನ್ನಸಂದ್ರ, ಕನಕನಗರ, ರಾಮಮೂರ್ತಿನಗರ, ಕಲ್ಕೆರೆ ಗ್ರಾಮಗಳಲ್ಲಿ ವಾರದಲ್ಲಿ ಒಂದು ದಿನ ನೀರು ಬರುತ್ತಿದೆ.

ಆದರೆ ಯಾವ ದಿನ ಬರುತ್ತದೆ ಎಂಬ ಖಾತ್ರಿಯಿಲ್ಲದ ಕಾರಣ, ಇಲ್ಲಿನ ನಿವಾಸಿಗಳು ಲ್ಲ ಕೆಲಸ ಬಿಟ್ಟು, ಬಿಂದಿಗೆ ಹಿಡಿದು ನಿಂತು ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಹೊರಮಾವು ವಾರ್ಡ್‌ನ ಬಾಬುಸಾಪಾಳ್ಯ, ಎಂ.ಎಂ.ಗಾರ್ಡನ್‌, ದೊಡ್ಡಯ್ಯಲೇಔಟ್‌, ಜಯಂತಿನಗರ, ಸೇರಿ ಹಲವೆಡೆ ನೀರಿನ ಸಮಸ್ಯೆ ತೀವ್ರವಾಗಿದೆ.

ಇದ್ದ ಮೂರು ಬೊರ್‌ವೆಲ್‌ಗ‌ಳ ಪೈಕಿ ಎರಡು ಕೆಟ್ಟಿವೆ. ಸಮಸ್ಯೆ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರೂ ಪ್ರಯೋಜವಾಗಿಲ್ಲ ಎಂದು ದೊಡ್ಡಯ್ಯ ಬಡಾವಣೆ ನಿವಾಸಿಗಳು ಅವಲತ್ತುಕೊಳ್ಳುತ್ತಿದ್ದಾರೆ.

500 ರೂ. ಕೇಳುವ ನೀರುಗಂಟಿ!: ಕಲ್ಕೆರೆಯ ಖಾನೆ ಬಡಾವಣೆಯ ಹಲವು ಮನೆಗಳಿಗೆ ನಾಲ್ಕೈದು ತಿಂಗಳಿನಿಂದ ಕುಡಿಯುವ ನೀರೇ ಬರುತ್ತಿಲ್ಲ. ಹೀಗಾಗಿ ಕಿ.ಮೀ.ಗಟ್ಟಲೆ ಕ್ರಮಿಸಿ, ನೀರು ಹೊತ್ತು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೊರೆಸಿರುವ ಬೋರ್‌ವೆಲ್‌ಗ‌ಳಲ್ಲಿ ನೀರಿಲ್ಲ.

ಜಾನುವಾರುಗಳಿಗೂ ಕುಡಿಯಲು ನೀರು ಸಿಗದ ಕಾರಣ, ಪಶುಸಂಗೋಪನೆ ನೆಚ್ಚಿಕೊಂಡಿರುವ ರೈತರು ಕಂಗಾಲಾಗಿದ್ದಾರೆ. ಪ್ರತಿ ಮನೆಯಿಂದ 500 ರೂ. ವಸೂಲಿ ಮಾಡುವ ನೀರುಗಂಟಿ, ಹಣ ಕೊಡದಿದ್ದರೆ ನೀರೇ ಬಿಡುವುದಿಲ್ಲ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ.

ನಮ್ಮ ಬಡಾವಣೆಯಲ್ಲಿ ಉಳ್ಳವರ ಮನೆಗಷ್ಟೇ ನೀರು. ಇಕ್ಕಟ್ಟಿನ ರಸ್ತೆಗಳಿರುವ ಪ್ರದೇಶಕ್ಕೆ ಟ್ಯಾಂಕರ್‌ ಬರುವುದಿಲ್ಲ. ನೀರು ಬಿಡುವ ವ್ಯಕ್ತಿ 500 ರೂ. ಕೇಳುತ್ತಾನೆ. ಹೀಗಾಗಿ ದೂರದವರೆಗೆ ಹೋಗಿ ನೀರು ಹೊತ್ತು ತರುವುದು ಅನಿವಾರ್ಯ.
-ಶ್ಯಾಮಲಾ, ಖಾನೆ ಬಡಾವಣೆ ನಿವಾಸಿ

* ಕೆ.ಆರ್‌.ಗಿರೀಶ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.