“ಕುಕ್ಕೆ ದೇವರಿಗೆ ಭಕ್ತರ ದೇಣಿಗೆಯಲ್ಲಿ ಸುವರ್ಣರಥ’


Team Udayavani, Apr 30, 2019, 6:30 AM IST

kukke

ಸುಬ್ರಹ್ಮಣ್ಯ : ಕುಕ್ಕೆ ದೇವರ ಸುವರ್ಣ ರಥವನ್ನು ಕ್ಷೇತ್ರದ ಭಕ್ತರ ದೇಣಿಗೆ ಮತ್ತು ದೇಗುಲದ ಆದಾಯ ಬಳಸಿ ನಿರ್ಮಿಸಲಾಗುತ್ತಿದೆ. ಸರಕಾರದ ಹಣಕಾಸು ಒಪ್ಪಿಗೆ ದೊರೆತ ತತ್‌ಕ್ಷಣ ರಥ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು, ಮುಂದಿನ ಅಕ್ಟೋಬರ್‌ ಒಳಗೆ ನಿರ್ಮಾಣ ಪೂರ್ಣವಾಗಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚಿನ್ನದ ರಥ ನಿರ್ಮಾಣ ಮಾಡಲು 2006ರಲ್ಲಿ ಹಿಂದಿನ ಆಡಳಿತ ಸಮಿತಿಯು ಭಕ್ತರ ಆಶಯದಂತೆ ನಿರ್ಧರಿಸಿತ್ತು. 15 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ ಪ್ರಕ್ರಿಯೆ ನಡೆದು ಶಿಲ್ಪಿಗಳು ಮರದ ಕೆತ್ತನೆ ಆರಂಭಿಸಿದ್ದರು. ಆದರೆ ಚಿನ್ನದ ದರದಲ್ಲಿ ವ್ಯತ್ಯಾಸದಿಂದಾಗಿ ಸ್ಥಗಿತಗೊಂಡಿತ್ತು ಎಂದು ಮುಂಡೋಡಿ ಹೇಳಿದರು.

ಈ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಸುವರ್ಣ ರಥ ನಿರ್ಮಾಣ ಪೂರ್ಣಗೊಳಿಸುವ ಕುರಿತು ನಮ್ಮನ್ನು ಬೆಂಗಳೂರಿಗೆ ಕರೆಸಿ ಚರ್ಚಿಸಿದ್ದಾರೆ. ದೇಗುಲದ ಸ್ಥಿತಿಗತಿ, ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ. 88 ಕೋಟಿ ರೂ. ವೆಚ್ಚದ ರಥ ನಿರ್ಮಾಣಕ್ಕೆ ತಾಂತ್ರಿಕ ಮತ್ತು ಹಣಕಾಸಿನ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿಕೊಡುತ್ತಿದ್ದು, ಮೇ 6ರಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ಅನುಮೋದನೆ ದೊರೆತು ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರಕಲಿದೆ ಎಂದರು.

ರಥ ನಿರ್ಮಾಣ ಸಮಿತಿ
ಸೋಮವಾರ ಆಡಳಿತ ಮಂಡಳಿ ಸಮಿತಿಯ ಸಭೆಯಲ್ಲಿ ರಥ ನಿರ್ಮಾಣದ ಕುರಿತು ಚರ್ಚೆ ನಡೆದಿದೆ. ಅ. 15ರ ಒಳಗೆ ರಥ ನಿರ್ಮಾಣ ಪೂರ್ಣ ಗೊಳಿಸಲು ನಿರ್ಧರಿಸಿದ್ದೇವೆ. ರಥ ನಿರ್ಮಾಣ ಸಮಿತಿ ರಚಿಸಿ ಪ್ರತ್ಯೇಕ ಖಾತೆಯನ್ನು ತೆರೆಯಲಾಗುತ್ತದೆ. ಭಕ್ತರಿಂದ ಚಿನ್ನ ಮತ್ತು ನಗದು ರೂಪದ ದೇಣಿಗೆ ಸ್ವೀಕರಿಸಲಾಗುತ್ತದೆ. ಆರಂಭದಲ್ಲಿ 13 ಕೆ.ಜಿ.ಯಷ್ಟು ದೇಗುಲದ ಚಿನ್ನವನ್ನೇ ಬಳಸಿಕೊಳ್ಳಲಾಗುವುದು. ರಥ 14 ಅಡಿ 8 ಇಂಚು ಎತ್ತರವಿರಲಿದೆ ಎಂದರು.

14 ಕೋ.ರೂ. ವೆಚ್ಚದಲ್ಲಿ ಹೊರಾಂಗಣ ಸುತ್ತುಪೌಳಿ
ದೇಗುಲದ ಹೊರಾಂಗಣ ಸುತ್ತುಪೌಳಿ ನಿರ್ಮಾಣಕ್ಕೆ 14 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿ ಸಿದ್ಧಪಡಿಸಿ ಸರಕಾರದ ಹಣಕಾಸು ಅನುಮೋದನೆಗೆ ಕಳುಹಿಸಿಕೊಟ್ಟಿದ್ದೇವೆ. 68 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಪ್ರಗತಿಯಲ್ಲಿದೆ. ಆದಿಸುಬ್ರಹ್ಮಣ್ಯದಲ್ಲಿ 182 ಕೊಠಡಿಗಳ ನೂತನ ವಸತಿಗ್ರಹ ಶೀಘ್ರ ಲೋಕಾರ್ಪಣೆಗೊಳ್ಳಲಿದೆ. ನಗರದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಿದ್ದೇವೆ.

ಕುಮಾರಧಾರೆಯಲ್ಲಿ ಭಕ್ತರಿಗೆ ಪುಣ್ಯ ಸ್ನಾನಕ್ಕೆ ತೆರಳಲು ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟು ಎಲ್ಲೆಂದರಲ್ಲಿ ನದಿಗೆ ತ್ಯಾಜ್ಯ ಸುರಿಯದಂತೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್‌.ಎಂ., ಸಮಿತಿ ಸದಸ್ಯರಾದ ಬಾಲಕೃಷ್ಣ ಬಳ್ಳೇರಿ, ಮಹೇಶ್‌ಕುಮಾರ್‌ ಕರಿಕ್ಕಳ, ರಾಜೀವಿ ರೈ ಆರ್‌., ದಮಯಂತಿ ಕೂಜುಗೋಡು, ಮಾಧವ ಡಿ. ಉಪಸ್ಥಿತರಿದ್ದರು.

“ಸರಕಾರಿ ಅನುದಾನ ಇಲ್ಲ’
ಬೆಂಗಳೂರು:

ಕ್ಕೆ ಸಮರ್ಪಿಸಲು ಉದ್ದೇಶಿಸಿರುವ ಚಿನ್ನದ ರಥಕ್ಕೆ ಸರಕಾರದ ಅನುದಾನ ಬಳಸುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.
ಸಾರ್ವಜನಿಕರ ದೇಣಿಗೆ ಸಂಗ್ರಹ ಮತ್ತು ದೇವಾಲಯದ ಸಂಪನ್ಮೂಲಗಳಿಂದಲೇ ರಥದ ನಿರ್ಮಾಣ ವೆಚ್ಚ ಭರಿಸುವಂತೆ ತಿಳಿಸಲಾಗಿದೆ. ಇದು ಹಳೆಯ ಪ್ರಸ್ತಾವನೆಯಾಗಿದ್ದು, ಇತ್ತೀಚೆಗೆ ಕ್ಷೇತ್ರದ ಭಕ್ತರೊಬ್ಬರು ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ನನೆಗುದಿಗೆ ಬಿದ್ದಿರುವ ರಥದ ಯೋಜನೆ ಮುಂದುವರಿಸುವಂತೆ ಮನವಿ ಮಾಡಿದ್ದರು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.