ಆರ್‌ಟಿಇ ಹೊಸ ನಿಯಮ: ಉಳಿಯಲಿವೆಯೇ ಸರ್ಕಾರಿ ಶಾಲೆ

ಶಿಕ್ಷಣ ಹಕ್ಕು ಕಾಯ್ದೆಯಿಂದಾಗಿ ತಾಲೂಕಿನಲ್ಲಿ 50 ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿವೆ

Team Udayavani, Apr 30, 2019, 4:48 PM IST

hasan 2 tdy

ಚನ್ನರಾಯಪಟ್ಟಣ ತಾಲೂಕಿನ ಬಾಗೂರಿನ ಸರ್ಕಾರಿ ಪ್ರಾಥಮಿಕ ಶಾಲೆ, ಚನ್ನರಾಯಪಟ್ಟಣದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ

ಚನ್ನರಾಯಪಟ್ಟಣ: ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ 2012-13ರಲ್ಲಿ ಅನುಷ್ಠಾನ ಮಾಡಿದ ಆರ್‌ಟಿಇ, ಖಾಸಗಿ ಶಾಲೆಗಳ ಪ್ರೋತ್ಸಾಹಹಿಸುತ್ತಿದೆ ಎಂಬ ಆರೋಪ ತಡವಾಗಿ ಇಲಾಖೆಗೆ ಮನವರಿಕೆಯಾಗಿದ್ದು, ಇದೀಗ ಆರ್‌ಟಿಇ ಪರಿಷ್ಕರಣೆಗೊಂಡಿದ್ದು ಕನ್ನಡ ಶಾಲೆಗಳ ಉಳಿವಿಗೆ ಹೊಸ ಪ್ರಯತ್ನ ಸಾಗಿದೆ.

ಪ್ರಸ್ತುತ ಶೈಕ್ಷಣಿಕ‌ ಸಾಲಿನಿಂದ ಆರ್‌ಟಿಇ ನಿಯಮ ಬದಲಾಗಿ ಕಂದಾಯ ಗ್ರಾಮದಲ್ಲಿ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳು ಇದ್ದಲ್ಲಿ ಅಂತಹ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಉಚಿತ ಪ್ರವೇಶ ದೊರೆಯುವುದು. ಒಂದು ವೇಳೆ ಸರ್ಕಾರಿ ಅನುದಾನಿತ ಶಾಲೆಗಳಿಲ್ಲದ್ದರೆ ಅಲ್ಲಿನ ಮಕ್ಕಳಿಗೆ ಪ್ರಸ್ತುತ ಸಾಲಿನಿಂದ ಆರ್‌ಟಿಇ ಯೋಜನೆ ಅಡಿ ಖಾಸಗಿ ಶಾಲೆಗಳಿಗೆ ಉಚಿತವಾಗಿ ಪ್ರವೇಶ ದೊರಕಿಸಲಾಗುತ್ತಿದೆ ಎಂಬ ಹೊಸ ನಿಯಮ ಜಾರಿಗೆ ತರಲಾಗಿದೆ.

ಸರಿಯಾಗಿ ಅನುಷ್ಠಾನ ಆಗಲಿಲ್ಲ: ಈ ಹಿಂದೆ ಎಲ್ಲಾ ಅನುದಾನರಹಿತ ಶಾಲೆಗಳಿಗೆ ಶೇ.25 ರಷ್ಟು ಆರ್‌ಟಿಇ ಪ್ರವೇಶ ನೀಡಿತ್ತು. ಈ ದಿಸೆಯಲ್ಲಿ ತಾಲೂಕಿನ ಸುಮಾರು 44 ಖಾಸಗಿ ಶಾಲೆಯಿಂದ 412 ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿ ಸರ್ಕಾರವೇ ಖಾಸಗಿ ಶಾಲೆಗೆ ಆ ವೆಚ್ಚ ಭರಿಸುತ್ತಿತ್ತು. ಬಡ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂಬ ಸದುದ್ದೇಶ ದಿಂದ ಜಾರಿಗೆ ತಂದ ಈ ಆರ್‌ಟಿಇ ನಿಯಮವನ್ನು ಜನತೆ ಸಾಕಷ್ಟು ದುರುಯಯೋಗ ಪಡಿಸಿಕೊಂಡಿದ್ದು ಉಂಟು. ನಗರ ಪ್ರದೇಶದ ಶಾಲಾ ವ್ಯಾಪ್ತಿಯಲ್ಲಿ ವಾಸವಿರುವುದಾಗಿ ತಾತ್ಕಾಲಿಕ ದಾಖಲೆಯನ್ನು ಸೃಷ್ಟಿಸಿ ಅಲ್ಲಿನ ಬಡ ಫ‌ಲಾನುಭವಿಗಳನ್ನು ವಂಚಿಸಿ ಸೀಟು ಪಡೆದ ಹಲವು ಉದಾಹರಣೆಗಳು ಇವೆ.

ಸರ್ಕಾರಿ ಶಾಲೆಗೆ ಮಾರಕವಾದ ನಿಯಮ: 2009- 10ರಲ್ಲಿ ಕಡ್ಡಾಯ ಶಿಕ್ಷಣದ ಹಕ್ಕು ಅಧಿನಿಯಮ ಸಂಸತ್‌ನಲ್ಲಿ ಆನುಮೋದನೆಗೊಂಡರೂ ಅದು ಜಾರಿಗೆ ಬಂದಿದ್ದು 2012-13ರಲ್ಲಿ. ಅದು ಸರ್ಕಾರವೇ ಹಣ ನೀಡಿ ಸರ್ಕಾರಿ ಶಾಲೆಗಳಿಗೆ ಮಾರಕವಾಗಿ ಖಾಸಗಿ ಶಾಲೆಗಳ ಪಾಲಿಗೆ ವರವಾಗುವ ಮೂಲಕ ಸರ್ಕಾರಿ ಶಾಲೆಗಳ ಬಾಗಿಲು ಹಾಕಿಸಿತು ಎಂದರೆ ತಪ್ಪಾ ಗಲಾರದು. ದುಬಾರಿ ಹಣ ಕೊಟ್ಟು ಗ್ರಾಮೀಣ ಭಾಗದ ಮಕ್ಕಳಿಗೆ ಆಂಗ್ಲಮಾಧ್ಯಮ ಖಾಸಗಿ ಶಾಲೆ ಗಳಿಗೆ ಪ್ರವೇಶ ದೊರಿಕಿಸಿ ಕನ್ನಡ ಶಾಲೆಗಳ ಅವನತಿಗೆ ಕಾರಣವಾಗಿತ್ತು.

ಸರ್ಕಾರಿ ಶಾಲೆಗಳಿಗೆ ಮಾರಕ: ತಾಲೂಕಿನಲ್ಲಿ 2012-13 ರಲ್ಲಿ 162 ಎಲ್ಪಿಎಸ್‌ ಮತ್ತು 228 ಎಚ್ಪಿಎಸ್‌ ಸರ್ಕಾರಿ ಶಾಲೆಗಳಿದ್ದು, ಆರ್‌ಟಿಇ ಜಾರಿ ಗೊಂಡ 8 ವರ್ಷದ ಅಂತರದಲ್ಲಿ ಸುಮರು 25 ಶಾಲೆಗಳು ಬಾಗಿಲು ಹಾಕುವಂತಾಯಿತು. ಇದಲ್ಲದೇ ಹಲವು ಶಾಲೆಗಳಲ್ಲಿ ಇಬ್ಬರು ಮೂರು ಮಕ್ಕಳಿಗೆ ಇಬ್ಬರು ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಅವುಗಳ ಅಂಕಿ ಅಂಶಗಳನ್ನು ನೋಡಿದರೆ ಸುಮಾರು 50 ಕ್ಕೂ ಹೆಚ್ಚು ಶಾಲೆಗಳು ಕುಸಿದಿದೆ, ಈಗಾಗಿ 8 ವರ್ಷದ ಅವಧಿಯಲ್ಲಿ ಆರ್‌ಟಿಇ ಸೇರಿದಂತೆ ಹಲವು ಕಾರಣಗಳಿಂದ ಖಾಸಗಿ ಶಾಲೆಗಳು ತಮ್ಮ ಹಾಜರಾತಿ ಹೆಚ್ಚಿಸಿಕೊಂಡು ವೈಭವೀಕರಿಸಿಕೊಂಡರೆ ತಾಲೂಕಿನಲ್ಲಿ 2012-13ರಲ್ಲಿ 143 ಇದ್ದ ಆರ್‌ಟಿಇ ಫ‌ನಾನುಭವಿಗಳ ಸಂಖ್ಯೆ 2018-19ರಲ್ಲಿ 412ಕ್ಕೆ ಏರಿದೆ. ಇದು ಒಂದು ತಾಲೂಕಿನ ಉದಾಹರ ಣೆಯಾದರೆ ರಾಜ್ಯದ ಎಷ್ಟು ಕನ್ನಡ ಶಾಲೆಗಳಿಗೆ ಈ ನೀತಿ ಮಾರಕವಾಗಿತ್ತು ಎಂಬುದನ್ನು ಊಹಿಸಬೇಕಿದೆ.

ಒಂದು ಖಾಸಗಿ ಶಾಲೆಗೆ ಆರ್‌ಟಿಇ: ಒಟ್ಟಾರೆ ಪ್ರಸ್ತುತ 8 ವರ್ಷಗಳ ನಂತರ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮನವರಿಕೆಯಾಗಿ ಈ ಶೈಕ್ಷಣಿಕ ಸಾಲಿನಿಂದ ಈ ಹಿಂದಿನ 41 ಆರ್‌ಟಿಇ ಪ್ರವೇಶ ಪಡೆದಿದ್ದ ಖಾಸಗಿ ಶಾಲೆಗಳು ರದ್ದಾಗಿದೆ.

ದಂಡಿಗನ ಹಳ್ಳಿ ಹೋಬಳಿ ಅರಳ ಬರಗೂರು ವ್ಯಾಪ್ತಿಯಲ್ಲಿನ ವೆಸ್ಟ್‌ಹಿಲ್ ಖಾಸಗಿ ಶಾಲೆ, ಅನುದಾನಿತ ಶಾಲೆಗಳಾದ ದಿಡಗ ವ್ಯಾಪ್ತಿಯ ಹೊಯ್ಸಳ, ಹಿರೀಸಾವೆಯ ಜಯ ಪ್ರಕಾಶ ಹಾಗೂ ಚನ್ನರಾಯಪಟ್ಟಣ ನವೋದಯ ಶಾಲೆಗಳು ಮಾತ್ರ ಆರ್‌ಟಿಇಗೆ ಒಳಪಟ್ಟಿವೆ.

ಹೀಗಾಗಿ ಕನ್ನಡ ಶಾಲೆಗಳ ಹಾಗೂ ಹತ್ತಿರದ ಸರ್ಕಾರಿ ಅನುದಾನಿತ ಶಾಲೆಗಳ ಹಾಜರಾತಿ ಹೆಚ್ಚಲಿವೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಆರ್‌ಟಿಇ ಮುಂದುವರಿಸುವಂತೆ ಹಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಒಂದು ವೇಳೆ ಕನ್ನಡ ಮಾಧ್ಯಮಗಳ ಶಾಲೆ ಅಳಿವು ಉಳಿವಿನ ಪ್ರಶ್ನೆ ನ್ಯಾಯದೇವತೆ ಕೈಯಲ್ಲಿದೆ.

ಹೊಸ ನಿಯಮದಿಂದಾಗಿ ಇನ್ನ್ನು ಮುಂದೆ ತಾಲೂಕಿನ ಮಕ್ಕಳು ಸನಿಹದ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತವಾಗಿ ಪ್ರವೇಶಾವಕಾಶ ಗಿಟ್ಟಿಸಬಹುದು.

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.