ಕೊಡಗಿನಲ್ಲಿ ಮಹಾಮಳೆ ಮುನ್ಸೂಚನೆ ಇಲ್ಲ : ಜಿಲ್ಲಾಧಿಕಾರಿ


Team Udayavani, May 1, 2019, 6:15 AM IST

Z-DC-ANNIES-1

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರದಿಯಾಗಿದ್ದ ಮಾಹಿತಿ ಆಧರಿಸಿದಂತೆ ಈ ವರ್ಷವೂ ಸಹ ಕಳೆದ ವರ್ಷದಂತೆ ಕೇರಳ ಮಾದರಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮರುಕಳಿಸಲಿದೆ ಎಂದು ನಿವೃತ್ತ ಉಪ ಮಹಾ ನಿರ್ದೇಶಕರೊಬ್ಬರು ನೀಡಿರುವ ಹೇಳಿಕೆ ಪ್ರಕಟವಾಗಿತ್ತು.

ಇದು ಜಿಲ್ಲೆಯ ಜನತೆಯಲ್ಲಿ ಭೀತಿ ಉಂಟುಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಈ ವಿಚಾರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಗಮನಕ್ಕೆ ತಂದಿತ್ತು, ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ನಿರ್ದೇಶಕರು ಸ್ಪಷ್ಟೀಕರಣ ನೀಡಿದ್ದು, ವಿವರ ಹೀಗಿದೆ.ಕಳೆದ ವರ್ಷ ಕೊಡಗು ಜಿಲ್ಲೆ ಮತ್ತು ಕೇರಳದಲ್ಲಿ ಅಸಹಜ ರೀತಿಯ ಭಾರೀ ಮಳೆಯಾಗಿತ್ತು.

ಮಳೆ ಹಾಗೂ ಬೇರೆ ಭಾಗಗಳಲ್ಲಿ ಉಂಟಾಗುವ ಜ್ವಾಲಾಮುಖೀ ಸ್ಫೋಟಕ್ಕೂ ಸಂಬಂಧವಿರುವ ಬಗ್ಗೆ ವ್ಯವಸ್ಥಿತ ವೈಜ್ಞಾನಿಕ ಸಂಶೋಧನೆಗಳಿಂದ ಇನ್ನಷ್ಟೇ ದೃಢಪಡಬೇಕಿದೆ.

ಕಳೆದ ವಾರ ಕೊಡಗಿನಲ್ಲಿ ಬಿದ್ದ ಮಳೆಯು ಮುಂಗಾರು ಪೂರ್ವ ಮಳೆಯಾಗಿದ್ದು, ಸಾಮಾನ್ಯವಾದ ಗುಡುಗು-ಮಿಂಚಿನಿಂದ ಕೂಡಿದ್ದು, ಯಾವುದೇ ರೀತಿಯ ಜ್ವಾಲಾಮುಖೀ ಸ್ಫೋಟದ ಪರಿಣಾಮವಾಗಿರುವುದಿಲ್ಲ.

ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿ ಈ ವರ್ಷ ಅತಿವೃಷ್ಟಿ ಹಾಗೂ ಸಂಬಂಧಿತ ಪ್ರವಾಹ ಉಂಟಾಗುವ ಬಗ್ಗೆ ಪ್ರಸ್ತುತ ಯಾವುದೇ ಮುನ್ಸೂ ಚನೆಗಳಿರುವುದಿಲ್ಲ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದ ಹವಾಮಾನದಲ್ಲಿನ ಏರಿಳಿ ತಗಳನ್ನು ಗ್ರಾಮ ಪಂಚಾಯತ್‌ ವಾರು ನಿರಂತರವಾಗಿ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಹವಾಮಾನ ಮತ್ತು ಭೌಗೋಳಿಕ ವೈಪರೀತ್ಯದಿಂದ ಉಂಟಾಗಬಹುದಾದ ಪ್ರಕೃತಿ ವಿಕೋಪದ ಬಗ್ಗೆ ಪೂರ್ವಭಾವಿಯಾಗಿ ಅಧಿಕೃತವಾಗಿ ಮುನ್ನೆಚ್ಚೆರಿಕೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಮಳೆ ಸಂಬಂಧ ಯಾವುದೇ ರೀತಿಯ ದೃಢೀಕರಿಸಲಾಗದ ಅಥವಾ ಅಧಿಕೃತವಲ್ಲದ ಹೇಳಿಕೆಗಳಿಂದ ಜನರು ಭೀತಿ ಪಡದೆ, ಹವಾಮಾನ ಮತ್ತು ಮಳೆ ಬಗ್ಗೆ ಅಧಿಕೃತ ಮಾಹಿತಿಗಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಕೋರಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

complaint

Madikeri: ಕಾರ್ಮಿಕರ ಕಲಹ ಸಾವಿನಲ್ಲಿ ಅಂತ್ಯ; ಪ್ರಕರಣ ದಾಖಲು

8

Sampaje: ಕೃಷಿಕರ ತೋಟಕ್ಕೆ ಕಾಡಾನೆ ದಾಳಿ

police

Madikeri: ಕಳ್ಳತನ ಪ್ರಕರಣ : ಅಂತಾರಾಜ್ಯ ಆರೋಪಿಗಳ ಬಂಧನ

KGB

Congress ಸರಕಾರ ಕೆಲವೇ ದಿನಗಳಲ್ಲಿ ಉರುಳಿ ಬೀಳುವ ಸಾಧ್ಯತೆ : ಕೆ.ಜಿ.ಬೋಪಯ್ಯ

WhatsApp Image 2024-08-25 at 20.32.24

Road Mishap ಮಡಿಕೇರಿ: ಲಾರಿ, ಟ್ಯಾಂಕರ್‌ ಡಿಕ್ಕಿ ; ವ್ಯಕ್ತಿ ಸಾವು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.