ಪೊಲೀಸರಿಂದಲೂ ಕಳ್ಳ ಮತ ಚಲಾವಣೆ;ದೂರು: ತನಿಖೆ


Team Udayavani, May 1, 2019, 6:02 AM IST

POLLING

ಸಾಂದರ್ಭಿಕ ಚಿತ್ರ.

ಕಾಸರಗೋಡು: ಎಪ್ರಿಲ್‌ 23 ರಂದು ಕೇರಳದ ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ವ್ಯಾಪಕ ಕಳ್ಳಮತ ಚಲಾಯಿಸಲ್ಪಟ್ಟ ಆರೋಪಗಳು ಎದ್ದು ಬಂದ ಬೆನ್ನಲ್ಲೇ ಕಳ್ಳಮತದಾನ ತಡೆಯುವ ಹೊಣೆಗಾರಿಕೆ ಹೊಂದಿರುವ ಪೊಲೀಸರೇ ಕಳ್ಳಮತ ಚಲಾಯಿಸಿರುವ ಬಗ್ಗೆ ಹೊಸ ಆರೋಪ ಈಗ ಹುಟ್ಟಿಕೊಂಡಿದೆ.

ಲೋಕಸಭಾ ಚುನಾವಣೆ ವೇಳೆ ಕರ್ತವ್ಯದಲ್ಲಿರುವ ಪೊಲೀಸರಿಗೆ ತಮ್ಮ ಮತ ಚಲಾಯಿಸಲು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಅಂಚೆ ಮೂಲಕ ಮತ ಚಲಾಯಿಸಲು ಅವರಿಗೆ ಅವಕಾಶ ನೀಡಲಾಗುತ್ತಿದೆ. ಕೆಲವೆಡೆಗಳಲ್ಲಿ ಪೊಲೀಸರು ಅಂಚೆ ಮತ ಚಲಾಯಿಸಿದ ಬ್ಯಾಲೆಟ್‌ ಪೇಪರ್‌ ಒಳಗೊಂಡಿರುವ ಕವರ್‌ಗಳನ್ನು ಪೊಲೀಸ್‌ ಅಸೋಸಿಯೇಶನ್‌ನ ಕೆಲವೊಂದು ಪದಾಧಿಕಾರಿಗಳು ನೇರವಾಗಿ ಸಂಗ್ರಹಿಸಿ ಬಳಿಕ ಆ ಕವರನ್ನು ಒಡೆದು ಅದರೊಳಗಿರುವ ಬ್ಯಾಲೆಟ್‌ ಪೇಪರ್‌ನಲ್ಲಿ ಯಾರಿಗೆ ಮತ ಚಲಾಯಿಸಲಾಗಿದೆ ಎಂಬುದನ್ನು ನೋಡಿ ತಮ್ಮ ಅಭ್ಯರ್ಥಿಗೆ ಅನುಕೂಲಕರವಾಗಿ ಮತ ಚಲಾಯಿಸದೇ ಇದ್ದಲ್ಲಿ ಅಂತಹ ಬ್ಯಾಲೆಟ್‌ ಪೇಪರ್‌ಗಳಲ್ಲಿ ಕೆಲವೊಂದು ಅವ್ಯವಹಾರ ನಡೆಸಿದ ಬಳಿಕ ಬ್ಯಾಲೆಟ್‌ ಪೇಪರನ್ನು ಮತ್ತೆ ಅಂಚೆ ಕವರಿನೊಳಗೆ ತುಂಬಿಸಿ ಕಳುಹಿಸಿ ಕೊಡಲಾಗಿದೆ ಎಂಬುದು ಈಗ ಉಂಟಾಗದ ಹೊಸ ಆರೋಪಗಳಾಗಿವೆ.

ಈ ಬಗ್ಗೆ ಕೆಲವು ಪೊಲೀಸರು ವಾಟ್ಸಾಪ್‌ ಸಂದೇಶ ರವಾನಿಸಿದ್ದು, ಆ ಸಂದೇಶವೂ ಈಗ ಹೊರಕ್ಕೆ ಬಂದಿದೆ. ಅದುವೇ ಪೊಲೀಸರು ಚಲಾಯಿಸಿದ ಅಂಚೆ ಮತದಲ್ಲಿ ಅವ್ಯವಹಾರ ನಡೆದ ಆರೋಪ ಹುಟ್ಟಿಕೊಳ್ಳಲು ಪ್ರಧಾನ ಕಾರಣವಾಗಿದೆ. ಆದರೆ ಅಂತಹ ಆರೋಪಗಳನ್ನು ಪೊಲೀಸ್‌ ಅಸೋಸಿಯೇಶನ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಲಗಳೆದಿದ್ದಾರೆ.

ಅಂಚೆ ಮತದಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಆರೋಪಗಳಿಗೂ ತಮ್ಮ ಸಂಘಟನೆಗಳಿಗೂ ಯಾವುದೇ ರೀತಿಯ ಸಂಬಂಧವೂ ಇಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಪೊಲೀಸರು ಕಳ್ಳಮತ ಚಲಾಯಿಸಿದ್ದಾರೆಂಬ ದೂರುಗಳು ಉಂಟಾಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಲವು ರಾಜಕೀಯ ಪಕ್ಷಗಳೂ ಈಗ ರಂಗಕ್ಕಿಳಿದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ, ಮಾಜಿ ಗೃಹ ಸಚಿವ ಕಾಂಗ್ರೆಸ್‌ ನೇತಾರ ತಿರುವಾಂಜೂರು ರಾಧಾಕೃಷ್ಣನ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.