ಕಂಬಳ ಗದ್ದೆಯಲ್ಲಿ ಭತ್ತದ ಕೊಯ್ಲು ಸಂಭ್ರಮ

ಯುವವಾಹಿನಿ ಮಾಣಿ ಘಟಕದ ವಿನೂತನ ಕಾರ್ಯ

Team Udayavani, May 1, 2019, 11:44 AM IST

1-MAY-8

ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳ ಗದ್ದೆಯಲ್ಲಿ ಯುವವಾಹಿನಿ ಮಾಣಿ ಘಟಕದವರು ರವಿವಾರ ಗದ್ದೆಯಲ್ಲಿ ಸುಗ್ಗಿಯ ಸಾಗುವಳಿಯ ವಿನೂತನ ಚಟುವಟಿಕೆ ಹಮ್ಮಿಕೊಂಡಿದ್ದರು.

ಮಾಣಿ : ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳ ಗದ್ದೆಯಲ್ಲಿ ರವಿವಾರ ಯುವಕರ ಕಲರವ. ಗದ್ದೆಯಲ್ಲಿ ಸುಗ್ಗಿಯ ಸಾಗುವಳಿ ಬಹಳ ಉತ್ಸಾಹದಿಂದ ನಡೆಯಿತು.

ಯುವವಾಹಿನಿ ಮಾಣಿ ಘಟಕ ಈ ವಿನೂತನ ಚಟುವಟಿಕೆ ಹಮ್ಮಿಕೊಂಡಿತ್ತು.

ಕಳೆದ ವರ್ಷ ಡಿ. 23ರಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಕಾರದಲ್ಲಿ ಯುವವಾಹಿನಿ ಘಟಕ ಈ ಗದ್ದೆಯಲ್ಲಿ ಕೋಟಿ-ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಂಡಿತ್ತು. ಘಟಕದ ಅಧ್ಯಕ್ಷ ಹರೀಶ ಪೂಜಾರಿ ಹಾಗೂ ಇತರ ಪದಾಧಿಕಾರಿಗಳು ಇದೇ ಕಂಬಳ ಗದ್ದೆಯಲ್ಲಿ ಭತ್ತದ ಕೃಷಿ ಕೈಗೊಳ್ಳುವ ಕುರಿತು ತೀರ್ಮಾನಿಸಿದರು. ಬಾಕಿಲ ಕುಟುಂಬದ ಹಿರಿಯರ ಅನುಮತಿ ಪಡೆದು ಕಂಬಳ ಗದ್ದೆಯಲ್ಲಿ ಸುಗ್ಗಿಯ ಸಾಗುವಳಿ ಉತ್ಸಾಹದಿಂದ ನಡೆಯಿತು.

ಗದ್ದೆಯಲ್ಲಿ ಬಿತ್ತಿದ ಭತ್ತದ ಬೀಜಗಳು ಸಸಿಗಳಾಗಿ, ಹಚ್ಚ ಹಸುರಿನಿಂದ ನಳನಳಿಸಿದವು. ಯುವ ವಾಹಿನಿ ಸದಸ್ಯರ ಕನಸುಗಳಂತೆ ಭತ್ತ ತೆನೆ ಕಟ್ಟಿ, ತೆನೆಗಳು ತೂಗಿ, ನೋಡುಗರ ಕಣ್ಣಿಗೆ ಹಬ್ಬವನ್ನುಂಟುಮಾಡಿದವು. ಎ 28ರಂದು ಇದರ ಕೊಯ್ಲು ಸಂಭ್ರಮ ನಡೆಯಿತು.

ರವಿವಾರ ಬೆಳಗ್ಗೆ 7ರಿಂದಲೇ ಕೊಯ್ಲು ಕಾರ್ಯ ಆರಂಭವಾಯಿತು. ಸುಮಾರು 45 ಸದಸ್ಯರು ಇದರಲ್ಲಿ ಪಾಲ್ಗೊಂಡರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್‌ ನಡುಬೈಲು ಕತ್ತಿ ಮುಟ್ಟಾಳೆ ಧರಿಸಿ ಕಟಾವು ಮಾಡುವ ಮೂಲಕ ಕೊಯ್ಲು ಕಾರ್ಯಕ್ಕೆ ಚಾಲನೆ ನೀಡಿದರು. ಶಶಿಧರ ಕಿನ್ನಿಮಜಲು, ಬಂಟ್ವಾಳ ಘಟಕದ ಉಪಾಧ್ಯಕ್ಷ ಸತೀಶ್‌ ಬಾಯಿಲ ಹಾಗೂ ಬಾಕಿಲ ಕುಟುಂಬದ ಜನಾರ್ದನ ಪೂಜಾರಿ, ವಸಂತ ಪೂಜಾರಿ ಜಲ್ಲಿಗುಡ್ಡೆ, ಹರೀಶ್‌ ಎನ್‌ಎಂಪಿಟಿ ಉಪಸ್ಥಿತರಿದ್ದರು.

ಮಾಣಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾಜೇಶ್‌ ಬಾಬನಕಟ್ಟೆ, ಕಾರ್ಯದರ್ಶಿ ಸುಜಿತ್‌ ಅಂಚನ್‌, ಉಪಾಧ್ಯಕ್ಷರಾದ ರಮೇಶ್‌ ಮುಜಲ, ಪ್ರಶಾಂತ್‌ ಪುಂಜಾವು, ಕೋಶಾಧಿಕಾರಿ ಶಿವರಾಜ್‌ ಇದ್ದರು. ಸಂಚಾಲಕರಾಗಿ ರಾಜೇಶ್‌ ಪರಾಜೆ ಮತ್ತು ಮಹಾಬಲ ಪೂಜಾರಿ ಬಾಕಿಲ ಅವರನ್ನು ಆಯ್ಕೆ ಮಾಡಲಾಗಿತ್ತು.

ಕೊಯ್ಲಿನ ಅನಂತರ ದೊರೆತ ಭತ್ತವನ್ನು ಬಡವರಿಗೆ ದಾನ ಮಾಡಲು, ಉಳಿದ ಭತ್ತವನ್ನು ಬಾಕಿಲ ಕೋಟಿ ಚೆನ್ನಯ ಗರಡಿ, ಶ್ರೀ ಉಳ್ಳಾಲ್ತಿ ವೈದ್ಯನಾಥ ಮತ್ತು ಸ್ಥಳ ದೈವ ದೇವರುಗಳ ಬ್ರಹ್ಮಕಲಶೋತ್ಸವದ ಆನ್ನದಾನಕ್ಕೆ ಬಳಸಿಕೊಳ್ಳುವ ನಿರ್ಧಾರವನ್ನು ಯುವವಾಹಿನಿ ಮಾಣಿ ಘಟಕ ಕೈಗೊಂಡಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.