ಟೆಂಪೋ ಡ್ರೈವರ್ ಮಗಳು ನಾಗಾಂಜಲಿ ರಾಜ್ಯಕ್ಕೆ ಪ್ರಥಮ
Team Udayavani, May 1, 2019, 1:22 PM IST
ಕುಮಟಾ: ಕಾಗಾಲ-ಹುಬ್ಬಣಗೇರಿ ನಿವಾಸಿ ನಾಗಾಂಜಲಿ ಪರಮೇಶ್ವರ ನಾಯ್ಕ ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕುಮಟಾ ಕೊಂಕಣ ಎಜ್ಯುಕೇಶನ್ನ ಸಿವಿಎಸ್ಕೆ ಪ್ರೌಢಶಾಲೆಯಲ್ಲಿ ಓದುತ್ತಿರುವ ನಾಗಾಂಜಲಿ 625ಕ್ಕೆ 625 ಅಂಕ ಪಡೆದು ಹುಬ್ಬೇರುವಂತೆ ಮಾಡಿದ್ದಾಳೆ. ಶಾಲೆಯಲ್ಲಿ ಆಡಳಿತ ಮಂಡಳಿಯಿಂದ ಹಿಡಿದು ಮುಖ್ಯಾಧ್ಯಾಪಕರು, ಶಿಕ್ಷಕರು ಉತ್ತಮ ಪ್ರೋತ್ಸಾಹ ನೀಡಿದ್ದು, ಶಿಕ್ಷಕರು ಕಾಲಕಾಲಕ್ಕೆ ಇವರನ್ನು ಸಂಪರ್ಕಿಸಿ, ಪರೀಕ್ಷೆ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಿರುವುದು ಉನ್ನತಿಗೆ ಕಾರಣವಾಗಿದೆ. ಗಡಿ ಭದ್ರತಾ ಪಡೆಯಲ್ಲಿ ಹವಾಲ್ದಾರ್ ಆಗಿ 2006ರಲ್ಲಿ ನಿವೃತ್ತರಾಗಿರುವ ಪರಮೇಶ್ವರ ನಾಯ್ಕ ಮಹೇಂದ್ರಾ ಟೆಂಪೋವನ್ನು ಖರೀದಿಸಿ ಅದರಿಂದಲೇ ಜೀವನ ನಡೆಸುತ್ತಿದ್ದಾರೆ. ಓರ್ವ ಟೆಂಪೋ ಮಾಲಕನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಮಧ್ಯಮ ವರ್ಗದವರೂ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣ: 12ರಂದು ಎನ್ಎಚ್ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ
Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ
Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ
Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ
Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.