ಹೆಜಮಾಡಿ ಮೊಗವೀರ ಸಭಾ ಮುಂಬಯಿ ವಿಶೇಷ ಸಭೆ
ಗ್ರಾಮಸಭೆಗಳು ಆಧುನಿಕ ಸಮಸ್ಯೆಗಳಿಗೆ ಸ್ಪಂದಿಸಲಿ: ಕರುಣಾಕರ ಹೆಜ್ಮಾಡಿ
Team Udayavani, May 1, 2019, 3:12 PM IST
ಮುಂಬಯಿ: ಒಂದು ಕಾಲದಲ್ಲಿ ಶಿಕ್ಷಣಾರ್ಥಿಗಳಾಗಿ, ಉದ್ಯೋಗಾ ರ್ಥಿಗಳಾಗಿ ಮುಂಬಯಿಗೆ ಆಗಮಿಸುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಆಶ್ರಯ ತಾಣವಾದ ಗ್ರಾಮ ಸಭೆಗಳು ಇಂದು ಅಸ್ತಿತ್ವವನ್ನು ಕಳೆದುಕೊಂಡಿವೆ. ಯಾಕೆಂದರೆ ಇಂದು ಎಲ್ಲ ಜನರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಹಾಗಾಗಿ ಇವರಿಗೆ ಗ್ರಾಮ ಸಭೆಗಳ ಸಹಾಯ ಬೇಕಾಗಿಲ್ಲ. ಆದರೆ ಹಿರಿಯರು ಒಳ್ಳೆಯ ಉದ್ದೇಶಕ್ಕಾಗಿ ಸ್ಥಾಪಿಸಿದ ಗ್ರಾಮ ಸಭೆಗಳನ್ನು ಮುಚ್ಚುವುದು ಸರಿಯಲ್ಲ. ಆಧುನಿಕ ಕಾಲದ ಆವಶ್ಯಕತೆಯಂತೆ ಗ್ರಾಮ ಸಭೆಗಳನ್ನು ಅರ್ಥಪೂರ್ಣವಾಗಿ ಬೆಳೆಸಬೇಕಾದ ಅಗತ್ಯವಿದೆ. ಇಂದಿನ ಸಮುದಾಯದ ಆಧುನಿಕ ಸಮಸ್ಯೆಗಳಿಗೆ ಗ್ರಾಮಸಭೆಗಳು ಸ್ಪಂದಿಸಬೇಕು ಎಂದು ಹೆಜಮಾಡಿ ಮೊಗವೀರ ಸಭಾದ ಅಧ್ಯಕ್ಷ ಕರುಣಾಕರ ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ಅಂಧೇರಿಯ ಮೊಗವೀರ ಭವನದಲ್ಲಿ ನಡೆದ ಹೆಜ ಮಾಡಿ ಮೊಗವೀರ ಸಭಾ ಮುಂಬಯಿ ಇದರ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಸಭೆಗಳು ತಾಯ್ನಾಡ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು.
ಸಮುದಾಯದ ಬಡವರ ಉದ್ಧಾರಕ್ಕಾಗಿ ಕೈಜೋಡಿಸಬೇಕು ಎಂದು ಹೇಳಿದರು. ಹೆಜಮಾಡಿ ಮೊಗವೀರ ಸಭಾ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಪುತ್ರನ್ ಸ್ವಾಗತಿಸಿದರು.
ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಪ್ರತಾಪ್ ಸಾಲ್ಯಾನ್ ಅವರು ವಂದಿಸಿದರು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.