ಮನೆಗೆ ಸಿಡಿಲು ಬಡಿದು ಅಪಾರ ನಷ್ಟ


Team Udayavani, May 2, 2019, 3:00 AM IST

sidilu

ನೆಲಮಂಗಲ: ಪಟ್ಟಣದ ಸುಭಾಷ್‌ನಗರದ ಕೇಶವಶೆಟ್ಟಿ ಬಡಾವಣೆಯ ನಾರಾಯಣರಾವ್‌ ಮನೆಗೆ ಮಂಗಳವಾರ ತಡರಾತ್ರಿ ಸುರಿದ ಭಾರಿಮಳೆಯ ವೇಳೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದೆ.

ಮಳೆಯ ಜೊತೆ ಬೀಸುತ್ತಿದ್ದ ಬಿರುಗಾಳಿಯನ್ನು ಕಂಡು ಜನರು ಭಯಭೀತರಾಗಿ ಮನೆ ಸೇರಿದ್ದರು. ಇದೇ ಸಂದರ್ಭದಲ್ಲಿ ಮಿಂಚಿನಂತೆ ಮನೆಗೆ ಬಡಿದ ಸಿಡಿಲು ಮನೆಯ ಮಂದಿ ಸೇರಿದಂತೆ ಬಡಾವಣೆಯ ಜನರು ಬೆಚ್ಚಿಬೀಳುವಂತೆ ಮಾಡಿದೆ.

ಬಿರುಕುಬಿಟ್ಟ ಗೋಡೆಗಳು: ಕೇಶವಶೆಟ್ಟಿ ಬಡಾವಣೆಯ ನಿವೃತ್ತ ಶಿಕ್ಷಕ ನಾರಾಯಣರಾವ್‌ ಅವರ ಮೂರು ಮಹಡಿಯ ಮನೆಗೆ ರಾತ್ರಿ ಬಡಿದ ಸಿಡಿಲಿನಿಂದಾಗಿ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯ ಮೇಲಿನ ನೀರಿನ ಟ್ಯಾಂಕ್‌, ಪೈಪ್‌ಗ್ಳಿಗೆ ಅಪಾರ ಹಾನಿಯಾಗಿದೆ.

ಮನೆಯೊಳಗಿನ ಎಲ್ಲಾ ವಿದ್ಯುತ್‌ ಬಲ್ಪ್ಗಳು ಕ್ಷಣಾರ್ಧದಲ್ಲಿ ಪುಡಿಪುಡಿಯಾಗಿವೆ. ಮನೆಯ ಒಂದನೇ ಮತ್ತು ಎರಡನೇ ಮಹಡಿಯಲ್ಲಿ ಬಾಡಿಗೆ ಮನೆಯವರಿದ್ದು, ಸಿಡಿಲು ಬಡಿದ ಮೂರನೇ ಮಹಡಿಯಲ್ಲಿ ಸರಕುಗಳನ್ನು ಸಂಗ್ರಹಣೆ ಮಾಡಿದ್ದರು. ಸ್ವಲ್ಪದರಲ್ಲಿಯೇ ಸಂಭವಿಸಬಹುದಾದ ಪ್ರಾಣಹಾನಿ ತಪ್ಪಿದಂತಾಗಿದೆ.

ಆತಂಕಗೊಂಡ ಜನತೆ: ಮೂರನೇ ಮಹಡಿಯಲ್ಲಿ ಯಾರೂ ವಾಸವಿಲ್ಲದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡಿಲು ಬಡಿದ ತಕ್ಷಣ ಹೆಚ್ಚು ಶಬ್ದ ಹಾಗೂ ಬೆಳಕು ರಾಚಿದ ಪರಿಣಾಮ ಸುತ್ತಮುತ್ತಲ ಜನರು ಆತಂಕಕ್ಕೆ ಒಳಗಾಗಿದ್ದೆವು ಎನ್ನುತ್ತಾರೆ ಬಡಾವಣೆಯ ನಿವಾಸಿ ಮಿಲಿó ಮೂರ್ತಿ.

ಅಪಾರ ಹಾನಿ: ಸಿಡಿಲು ಬಡಿದ ಮನೆಯಲ್ಲದೇ ಅಕ್ಕಪಕ್ಕದಲ್ಲಿದ್ದ ಬಡಾವಣೆಯ ಸುಮಾರು 30ಕ್ಕೂ ಹೆಚ್ಚು ಮನೆಗಳಲ್ಲಿನ 25 ಟಿ.ವಿ.ಗಳು, 3 ಫ್ಯಾನ್‌, 10 ರೆಫ್ರಿಜಿರೇಟರ್‌, 4ಯುಪಿಎಸ್‌, 1ಬೋರ್‌ವೆಲ್‌, 50ಕ್ಕೂ ಹೆಚ್ಚು ಬಲ್ಪ್ಗಳಿಗೆ ಹಾನಿಗೊಳಗಾಗಿದೆ. ಸಿಡಿಲು ಬಡಿದ ಸಮಯದಲ್ಲಿ ವಿದ್ಯುತ್‌ ಸಂಪರ್ಕ ಖಡಿತವಾಗಿಲ್ಲದ ಕಾರಣ ವಿದ್ಯುತ್‌ ಉಪಕರಣಗಳಿಗೆ ಬಹಳಷ್ಟು ಹಾನಿಯಾಗಿದೆ ಎನ್ನಲಾಗಿದೆ.

ಹೆದರಿದ ಜನರು: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು, ಮನೆಗೆ ಸಿಡಿಲು ಬಡಿದ ವೇಳೆಯಲ್ಲಿ ಬಡಾವಣೆಯ ಜನರು ಎಚ್ಚರವಾಗಿದ್ದರಿಂದ ಬೆಳಕು ಮತ್ತು ಶಬ್ದದಿಂದ ಮಕ್ಕಳು ಹೆಚ್ಚು ಹೆದರಿದ್ದಾರೆ. ಅಲ್ಲದೇ, ನಿವಾಸಿಗಳು ಭಯಭೀತರಾಗಿದ್ದೆವು. ಆ ಸಮಯದಲ್ಲಿ ಆಕಾಶವೇ ಕೆಳಗೆ ಬಿತ್ತು ಎಂಬ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು ಎಂದು ಸ್ಥಳೀಯ ಬೈರೇಗೌಡ ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.