ಮಂದಾರ್ತಿ: ಹಸುಗಳ ಉಚಿತ ವಿತರಣೆ
Team Udayavani, May 2, 2019, 6:10 AM IST
ಬ್ರಹ್ಮಾವರ: ಮಂದಾರ್ತಿಯಲ್ಲಿ ಸುಮಾರು 36 ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ| ನಾಗಾನಂದ ಭಟ್ ಅವರು ತಮ್ಮ ಷಷ್ಟ ಬ್ದಿಯನ್ನು ವಿಶಿಷ್ಟವಾಗಿ ಆಚರಿಸಿದರು. ಈ ಸವಿನೆನಪಿಗಾಗಿ ಮಂದಾರ್ತಿ ಆಸುಪಾಸಿನ 25 ಜನ ಅರ್ಹ ರೈತರಿಗೆ ಸುಮಾರು 6ಲಕ್ಷ ರೂ. ವೆಚ್ಚದ ಹಸುಗಳನ್ನು ಉಚಿತವಾಗಿ ವಿತರಿಸಿದರು.
ಮಂಗಳವಾರ ಜರಗಿದ ಸರಳ ಸಮಾರಂಭವನ್ನು ಮಂದಾರ್ತಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶೇಡಿಕೊಡ್ಲು ವಿಟuಲ ಶೆಟ್ಟಿ ಅವರು ಉದ್ಘಾಟಿಸಿ, ಈ ವಿಶಿಷ್ಟ ಸೇವಾ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ, ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.
ಕಿಂಚಿತ್ ಸೇವೆ
ಇಂದು ಆಚರಣೆಗಳು ಸಂಪತ್ತಿನ, ಪ್ರಭಾವದ ಪ್ರದರ್ಶನ ಆಗುತ್ತಿರುವ ಸಂದರ್ಭದಲ್ಲಿ ನಮ್ಮ ಷಷ್ಟ ಬ್ದಿ ಕಾರ್ಯಕ್ರಮ ಭಿನ್ನವಾಗಿರಬೇಕೆಂದು ಯೋಚಿಸಿದೆವು. ಸಮಾಜದಿಂದ ಪಡೆದುದಕ್ಕೆ ಕಿಂಚಿತ್ ಕೊಡುಗೆಯಾಗಿ ಹಸುಗಳನ್ನು ನೀಡುತ್ತಿದ್ದೇವೆ. ಜನ್ಮ ಕೊಟ್ಟ ತಾಯಿ, ಗೋಮಾತೆ ಹಾಗೂ ಭೂಮಾತೆಯ ಋಣ ತೀರಿಸಲು ಸಾಧ್ಯವಿಲ್ಲ ಎಂದು ಡಾ| ನಾಗಾನಂದ ಭಟ್ ಪ್ರಸ್ತಾವನೆಯಲ್ಲಿ ಹೇಳಿದರು.
ಹೆಗ್ಗುಂಜೆ ಗ್ರಾ.ಪಂ. ಅಧ್ಯಕ್ಷ ಗಣೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಎಚ್. ಧನಂಜಯ ಶೆಟ್ಟಿ ಶುಭಹಾರೈಸಿದರು. ಅತಿಥಿಗಳಾಗಿ ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ| ಅನಿಲ ಕುಮಾರ್ ಶೆಟ್ಟಿ, ಸಹಾಯಕ ವ್ಯವಸ್ಥಾಪಕ ಸುಧಾಕರ್, ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಡಾ| ಸುವರ್ಣಾ ಭಟ್, ಆಶ್ಲೇಷ ಭಟ್ ಅತಿಥಿಗಳನ್ನು ಗೌರವಿಸಿದರು. ಉದಯ ಭಾಸ್ಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.