ಬೇಸಗೆ ದಾಹ ತಣಿಸಲು ಜಲ-ಕುಟೀರ ಸ್ಥಾಪನೆ
Team Udayavani, May 2, 2019, 6:06 AM IST
ಉಡುಪಿ: ಜೋಸ್ ಆಲುಕ್ಕಾಸ್ ಆಭರಣ ಮಳಿಗೆ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ ಸುಡು ಬಿಸಿಲಲ್ಲಿ ದಾಹ ತಣಿಸಲು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಜಲ-ಕುಟೀರವನ್ನು ಚಿತ್ತರಂಜನ್ ಸರ್ಕಲ… ಬಳಿಯ ಮಾರುತಿ ವೀಥಿಕಾದಲ್ಲಿ ಸ್ಥಾಪಿಸಿದೆ. ಇದನ್ನು ಬುಧವಾರ ಬಾಲಪ್ರತಿಭೆ ಯುಕ್ತ ಕೆ. ಸಾಮಗ ಅವರು ಉದ್ಘಾಟಿಸಿದರು.
ಮೃತ್ತಿಕೆ ಹೂಜಿಗೆ ಬಿಸಿಲ ತಾಪದ ರಕ್ಷಣೆಗೆಂದು ತೃಣ ಕುಟೀರವನ್ನು ಕಲಾವಿದ ರಮೇಶ್ ಕಿದಿಯೂರು ಕಲಾತ್ಮಕವಾಗಿ ರಚಿಸಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಬಳಲಿದವರಿಗೆ ಜಲದಾನ ಮಾಡುವ ಯೋಜನೆಯು ಮೆಚ್ಚುಗೆಗೆ ಪಾತ್ರವಾಗಿದೆ. ಜೀವಜಲ ಅಮೂಲ್ಯ ನೀರನ್ನು ಮಿತವಾಗಿ ಬಳಸಿ ಸಂದೇಶ ವಾಕ್ಯದ ಫಲಕವನ್ನು ಇಲ್ಲಿ ಅಳವಡಿಸಿ ಜಲ ಜಾಗೃತಿ ಮೂಡಿಸಲಾಗಿದೆ.
ನಗರದಲ್ಲಿ ಪ್ರಾಣಿ ಪಕ್ಷಿಗಳ ಸಂಚಾರ, ಇರುವಿಕೆ ಇರುವ ಹತ್ತು ಸ್ಥಳಗಳನ್ನು ಗುರುತಿಸಿ ಅಲ್ಲಿ ಕಲ್ಮರ್ಗಿಗಳನ್ನು ಸ್ಥಾಪಿಸಿ ನೀರಿಡಲು ಪ್ರಾರಂಭಿಸಿದೆವು. ಯಾವತ್ತೂ ಜನ ಸಂಚಾರ ಇರುವ ಮಾರುತಿ ವಿಥೀಕಾ ರಸ್ತೆಯಲ್ಲಿ ಮೃತ್ತಿಕೆ ಹೂಜಿ ಇಡಲು ಆಯ್ಕೆ ಮಾಡಿಕೊಂಡೆವು. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಈ ಯೋಜನೆಯು ಮಳೆಗಾಲ ಪ್ರಾರಂಭ ಆಗುವವರೆಗೂ ಮುಂದುವರಿಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಹೇಳಿದರು.
ಕಾರ್ಯಕ್ರಮದಲ್ಲಿ ಜೋಸ್ ಆಲೂಕ್ಕಾಸ್ ಚಿನ್ನಾಭರಣ ಸಂಸ್ಥೆಯ ಪ್ರಬಂಧಕ ರಾಜೇಶ್ ಎನ್. ಆರ್., ಸಿಬಂದಿಗಳಾದ ರತೀಶ್, ಗೋಪಾಲ…, ನಾಗರಿಕ ಸಮಿತಿಯ ಪದಾಧಿಕಾರಿಗಳಾದ ತಾರಾನಾಥ ಮೇಸ್ತ ಶಿರೂರು, ಸುಧಾಕರ್ ದೇವಾಡಿಗ, ಡೇವಿಡ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.