ಅಂಗಡಿಯಿಂದ ಪಡಿತರ ಅಕ್ಕಿ ವಶಕ್ಕೆ
Team Udayavani, May 2, 2019, 6:05 AM IST
ವಶಕ್ಕೆ ಪಡೆಯಲಾದ ವಾಹನಗಳು.
ಬಂಟ್ಟಾಳ: ಬಿ.ಮೂಡ ಗ್ರಾಮದ ಗೂಡಿನಬಳಿಯ ಅಂಗಡಿ ಯೊಂದರ ಮೇಲೆ ಬುಧವಾರ ದಾಳಿ ನಡೆಸಿದ ಆಹಾರ ಇಲಾಖೆ ನಿರೀಕ್ಷಕರು ಒಟ್ಟು 2,36, 950 ರೂ. ಮೌಲ್ಯದ ಪಡಿತರ ಅಕ್ಕಿ ಮತ್ತು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಗೂಡಿನ ಬಳಿ ನಿವಾಸಿಗಳಾದ ಅಬ್ದುಲ್ ಹಕೀಂ (60) ಮತ್ತು ಅಬ್ದುಲ್ ಸಲೀಂ (45)ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪಿಕಪ್ ವಾಹನದಲ್ಲಿ ತುಂಬಿಸಿದ್ದ 50 ಕೆ.ಜಿ. ತೂಕದ 60 ಚೀಲಗಳು,ಅಂಗಡಿಯಲ್ಲಿದ್ದ 50 ಕೆ.ಜಿ. ತೂಕದ 27 ಬ್ಯಾಗ್ಗಳು,48 ಕೆ.ಜಿ. ತೂಕದ 28 ಚೀಲಗಳು, ತೂಕದ ಯಂತ್ರ 2 ಸಹಿತ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ವಿರುದ್ಧ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಆರೋಪ ಹೊರಿಸಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.