ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

ಅಭದ್ರತೆ ನಡುವೆ ಬದುಕುತ್ತಿರುವ ಕಾರ್ಮಿಕರು | ದಿನಾಚರಣೆ ಉದ್ಘಾಟಿಸಿದ ನ್ಯಾಯಾಧೀಶ ದೀಪು

Team Udayavani, May 2, 2019, 10:36 AM IST

kolar-3..

ಬಂಗಾರಪೇಟೆ ಪಟ್ಟಣದ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ನಡೆದ ಕಾನೂನು ಅರಿವು ಹಾಗೂ ಕಾರ್ಮಿಕರ ದಿನಾಚರಣೆಯನ್ನು ಅಪರ ಸಿವಿಲ್‌ ನ್ಯಾಯಾಧೀಶ ಡಿ.ಸಿ.ದೀಪು ಉದ್ಘಾಟಿಸಿದರು.

ಬಂಗಾರಪೇಟೆ: ಭದ್ರತೆ ಇಲ್ಲದೇ ಮಳೆ, ಗಾಳಿ, ಬಿಸಿಲು ಎನ್ನದೇ ದಿನದ 10 ಗಂಟೆ ದುಡಿಯುವ ಪ್ರತಿಯೊಬ್ಬ ಕೂಲಿ ಕಾರ್ಮಿಕರ ಬದುಕು ಅತಂತ್ರದಲ್ಲಿದ್ದು, ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಅಪರ ಸಿವಿಲ್‌ ನ್ಯಾಯಾಧೀಶ ಡಿ.ಸಿ.ದೀಪು ಹೇಳಿದರು.

ಪಟ್ಟಣದ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಏರ್ಪಡಿಸಿದ್ದ ಕಾನೂನು ಅರಿವು ಹಾಗೂ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕೆಲಸ ಸಿಗುವುದೋ? ಇಲ್ಲವೋ? ಎಂಬ ಆಭದ್ರತೆ ನಡುವೆ ಒಂದು ಕಡೆ ಯಿಂದ ಮತ್ತೂಂದು ಕಡೆಗೆ ಹೋಗುವ ಕೂಲಿ ಕಾರ್ಮಿಕರ ಬದುಕು ಅಲೆಮಾರಿಯಾಗಿದೆ. ಈ ಕಾರಣದಿಂದಮಕ್ಕಳಿಗೆ ವಿದ್ಯಾಭ್ಯಾಸವಿಲ್ಲದೇ ಅನಕ್ಷರಸ್ಥರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಗಾರೆ ಕೆಲಸ, ಪೈಂಟರ್‌, ಪ್ಲಂಬರ್‌, ಮರಗೆಲಸ, ಎಲೆಕ್ಟ್ರೀಷನ್‌, ವೆಲ್ಡಿಂಗ್‌, ಟೈಲ್ಸ್‌, ಕಂಬಿ ಕೆಲಸ, ಸ್ಟೀಲ್‌ ಸೆಂಟ್ರಿಂಗ್‌, ಪಾಯ ಅಗೆಯುವುದು, ಇಟ್ಟಿಗೆ ಕೆಲಸ, ಜಲ್ಲಿ ಒಡೆಯುವರು, ಕಾಂಕ್ರೀಟ್‌ ಹಾಕುವವರು, ರಸ್ತೆ ನಿರ್ಮಾಣ, ಚರಂಡಿ, ಟವರ್‌, ರೈಲ್ವೆ ಹಳಿ, ಮರಳು ಸಾಗಾಣಿಕೆ, ಸಿಮೆಂಟ್‌ ಮೂಟೆ ಹೊರೆಯುವವರು, ಮತ್ತಿತರೆ ಕಾರ್ಮಿಕರ ಬದುಕು ಮಾತ್ರ ಬಹಳ ಅತಂತ್ರ ಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

5 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ: ಈ ಅಲೆಮಾರಿ ಅಭದ್ರತೆಯ ಮಧ್ಯೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಕಟ್ಟಡ ಕಾರ್ಮಿಕ ಮುಖಂಡರ ನೇತೃತ್ವದಲ್ಲಿ ನಡೆಸಿದ ಹೋರಾಟದ ಫ‌ಲವಾಗಿ ಸರ್ಕಾರ 14 ಕಲ್ಯಾಣ ಸೌಲಭ್ಯಗಳನ್ನು ಜಾರಿಗೆ ತಂದಿದೆ.

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 5 ಸಾವಿರ ಕೋಟಿ ರೂ.ಗೂ ಹೆಚ್ಚು ಹಣವಿದೆ. ಕಲ್ಯಾಣ ಸೌಲಭ್ಯಗಳನ್ನು ಇನ್ನಿಷ್ಟು ಹೆಚ್ಚಿಸಬೇಕೆಂದು ಸಂಘಟನೆಯು ಹೋರಾಟ ಮಾಡುತ್ತಿದೆ. ಜೊತೆಗೆ ಕಟ್ಟಡ ಕಾರ್ಮಿಕರನ್ನು ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಲು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಶ್ರಮಿಸುತ್ತಿದೆ ಎಂದರು.

ಆರ್ಥಿಕವಾಗಿ ಮುಂದೆ ಬನ್ನಿ: ಎಲ್ಲಾ ವರ್ಗದ ಕಾರ್ಮಿಕರನ್ನು ಸಂಘಟಿಸಿ ಕಲ್ಯಾಣ ಮಂಡಳಿಯಲ್ಲಿ ಸಿಗುವ ಸೌಲಭ್ಯ

ಒದಗಿಸುವಲ್ಲಿ ಸಂಘ ನಿರಂತರವಾಗಿ ಕೆಲಸ ಮಾಡುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸದಸ್ಯರಾಗಿ 14 ಸೌಲಭ್ಯ ಪಡೆದು ಆರ್ಥಿಕವಾಗಿ ಮುಂದುವರಿಯುವಂತೆ ಹೇಳಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಹುಲಿಬೆಲೆ ನಾರಾಯಣಪ್ಪ, ಮಾಜಿ ಅಧ್ಯಕ್ಷರಾದ ವಿ.ಎಸ್‌.ವೇಣುಗೋಪಾಲ್‌, ಅಮರೀಶ್‌, ರಾಮೇಗೌಡ, ಎನ್‌.ನಾರಾಯಣಪ್ಪ, ಶಶಿಕುಮಾರ್‌, ಎಂ.ಜಿ.ಕುಮಾರ್‌, ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ದೊಡ್ಡ ಅಂಕಂಡಹಳ್ಳಿ ಪೆರಮಾಳಪ್ಪ, ಗೌರವಾಧ್ಯಕ್ಷ ಎಂ.ರಾಮನ್‌, ದೊಡ್ಡಚಿನ್ನಹಳ್ಳಿ ಕನ್ನಯ್ಯ, ಮಾದಮಂಗಲ ಶ್ರೀನಿವಾಸ್‌, ಎ.ಗೊಲ್ಲಹಳ್ಳಿ ಕೃಷ್ಣಪ್ಪ, ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.