ಬಿರುಗಾಳಿ ಮಳೆ: ಲಕ್ಷಾಂತರ ರೂ.ಆಸ್ತಿ ಹಾನಿ

ಕೆಂಚೇಗೌಡನಕೊಪ್ಪಲಿನಲ್ಲಿ ನೆಲಕಚ್ಚಿದ ಕೋಳಿ ಫಾರಂ | ಮನೆ ಗೋಡೆ ಕುಸಿತ, ಹಾರಿಹೋದ ಹೆಂಚುಗಳು

Team Udayavani, May 2, 2019, 11:20 AM IST

mandya-3..

ನಾಗಮಂಗಲ ತಾಲೂಕಿನ ನಾರಗೋನಹಳ್ಳಿಯಲ್ಲಿ ಸುರಿದ ಗುಡುಗು ಸಹಿತ ಬಿರುಗಾಳಿ ಮಳೆಯಿಂದಾಗಿ ಗ್ರಾಮದ ಹನುಮಂತಶೆಟ್ಟಿ ಎಂಬುವವರ ಮನೆ ಗೋಡೆ ಕುಸಿದು ಬಿದ್ದಿರುವುದು.

ಮಂಡ್ಯ: ನಾಗಮಂಗಲ ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಲಕ್ಷಾಂತರ ಮೌಲ್ಯದ ಆಸ್ತಿಗೆ ಹಾನಿ ಉಂಟಾಗಿದೆ.

ಪಟ್ಟಣದ ಹೊರವಲಯದ ಕೆಂಚೇಗೌಡನಕೊಪ್ಪಲು ಗ್ರಾಮದ ಲೋಕೇಶ್‌ ಅವರಿಗೆ ಸೇರಿದ ನಾಟಿಕೋಳಿ ಫಾರಂನ ಕಟ್ಟಡ ಬಿರುಗಾಳಿ ಮಳೆಗೆ ಸಿಲುಕಿ ಸಂಪೂರ್ಣ ನೆಲಕಚ್ಚಿದೆ. ಈ ವೇಳೆ ಫಾರಂನಲ್ಲಿದ್ದ ಸಾವಿರಕ್ಕೂ ಹೆಚ್ಚು ನಾಟಿ ಕೋಳಿ ಮರಿಗಳು ಮೃತಪಟ್ಟಿವೆ. ಇದರಿಂದಾಗಿ 3 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಗಾರಿಗೆ ತೂರಿ ಹೋದ ಹೆಂಚುಗಳು: ಅದೇ ಗ್ರಾಮದ ಎನ್‌.ಜೆ.ರಂಗಸ್ವಾಮಿ ವಾಸದ ಮನೆ ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್‌ಗಳು ಗಾಳಿಗೆ ತೂರಿಹೋಗಿವೆ. ನಲ್ಕುಂದಿ ಗ್ರಾಮದ ಕೃಷ್ಣ ಪ್ರಸಾದ್‌ ಅವರ ಮನೆಯ ಛಾವಣಿಯೂ ಗಾಳಿಯ ರಭಸಕ್ಕೆ ಅರ್ಧ ಕಿ.ಮೀ.ದೂರಕ್ಕೆ ಹೋಗಿಬಿದ್ದಿವೆ. ಅಲ್ಲದೆ ಕೋಳಿ ಫಾರಂನ ಹೆಂಚುಗಳು ಗಾಳಿಗೆ ತೂರಿ ಹೋಗಿದ್ದು ಹೆಚ್ಚಿನ ಹಾನಿ ಸಂಭವಿಸಿದೆ.

ತಾಲೂಕಿನ ನಾರಗೋನಹಳ್ಳಿ ಗ್ರಾಮದ ಹನುಮಂತಶೆಟ್ಟಿ ಅವರ ಮನೆ ಗೋಡೆ ಕುಸಿದು ಬಿದ್ದು ಇಡೀ ರಾತ್ರಿ ಕತ್ತಲಿನ ಜೊತೆಗೆ ಮನೆಯವರು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿತ್ತು.

ಪರಿಹಾರಕ್ಕೆ ಆಗ್ರಹ: ತಾಲೂಕಿನ ಕಂಚಹಳ್ಳಿ ಗ್ರಾಮ ದಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ನಂಜುಂಡೇಗೌಡರ ಮನೆ ಮೇಲೆ ತಡರಾತ್ರಿ ತೆಂಗಿನ ಮರವೊಂದು ಬಿದ್ದ ಪರಿಣಾಮ ಮನೆ ಸೇರಿ 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಪದಾರ್ಥಗಳು ಹಾನಿ ಯಾಗಿವೆ. ಮನೆ ಕಳೆದುಕೊಂಡಿರುವ ನಂಜುಂಡೇಗೌಡ ಅವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಪ್ಪಿದ ಭಾರೀ ಅನಾಹುತ: ಹಾಗೆಯೇ ಬಿಂಡಿಗನವಿಲೆ-ಕದಬಹಳ್ಳಿ ಮುಖ್ಯ ರಸ್ತೆಯ ಮಾಯಣ್ಣಗೌಡನಕೊಪ್ಪಲು ಗೇಟ್ ಬಳಿ ಬೃಹತ್‌ ಆಲದ ಮರವೊಂದು ಬುಧವಾರ ಬೆಳಗ್ಗೆ ರಸ್ತೆಗೆ ಅಡ್ಡಲಾಗಿ ವಿದ್ಯುತ್‌ ಕಂಬದ ಮೇಲೆ ಬೀಳುವ ಸಮಯದಲ್ಲಿ ಅದೇ ಮಾರ್ಗದಲ್ಲಿ ಬಂದ ಬಸ್‌ ಕ್ಷಣಾರ್ಧದಲ್ಲಿ ಮುಂದೆ ಸಾಗಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮರಗಳ ತೆರವು: ತಾಲೂಕಿನ ಹಲವು ಗ್ರಾಮಗಳಲ್ಲಿ ರೈತರ ತೆಂಗಿನ ಮರಗಳು ಧರೆಗುರುಳಿ ಬಿದ್ದರೆ, ರಸ್ತೆ ಬದಿಯಲ್ಲಿ ಒಣಗಿ ನಿಂತಿದ್ದ ಮರಗಳು ಬಿರುಗಾಳಿಗೆ ಸಿಲುಕಿ ನೆಲಕಚ್ಚಿವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ಕೆಲ ಹೊತ್ತು ಅಡ್ಡಿಯಾದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿದ್ದಾರೆ.

ಕಗ್ಗತ್ತಲಲ್ಲಿ ಮುಳುಗಿದ ಗ್ರಾಮಗಳು:ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೂರಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ನೆಲಕ್ಕುರುಳಿ ಬಿದ್ದಿದ್ದು, ಈ ಪ್ರದೇಶದಲ್ಲಿ ಮಂಗಳವಾರ ಇಡೀ ರಾತ್ರಿ ವಿದ್ಯುತ್‌ ಇಲ್ಲದೆ ಹಳ್ಳಿಗಳು ಕಗ್ಗತ್ತಲಲ್ಲಿ ಮುಳುಗಿದ್ದವು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.