ಕಥೆಗೂ ಶೀರ್ಷಿಕೆಗೂ ಸಂಬಂಧ ಹುಡುಕಬೇಡಿ

ಅರ್ಥವಿಲ್ಲದ ಟೈಟಲ್‌ಗೆ ಮುಹೂರ್ತ ಸಂಭ್ರಮ

Team Udayavani, May 3, 2019, 6:00 AM IST

Suchi-Title

ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಶೀರ್ಷಿಕೆಯನ್ನು ಇಡಬೇಕಾದರೆ, ಚಿತ್ರತಂಡ ಸಾಕಷ್ಟು ಅಳೆದು ಅದಕ್ಕೊಪ್ಪುವ ಹೆಸರನ್ನು ಇಡುತ್ತದೆ. ಕೆಲವರು ಚಿತ್ರಕ್ಕೆ ಮೊದಲೇ ಶೀರ್ಷಿಕೆಯನ್ನಿಟ್ಟು ನಂತರ ಅದರ ಮೇಲೆ ಕಥೆ ಮಾಡಿ, ಅದನ್ನು ಸಿನಿಮಾ ಮಾಡಿದ ನಿದರ್ಶನಗಳೂ ಚಿತ್ರರಂಗದಲ್ಲಿ ಸಾಕಷ್ಟಿದೆ.

ಇನ್ನು ಕೆಲವರು ಬೇಕೆಂದೆ ಒಂದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡು, ಪ್ರಚಾರ ಗಿಟ್ಟಿಸಿಕೊಳ್ಳಲು ತಮ್ಮ ಚಿತ್ರಕ್ಕೆ ಚಿತ್ರ-ವಿಚಿತ್ರ ಟೈಟಲ್‌ಗ‌ಳನ್ನು ಇಡುವುದನ್ನೂ ಚಿತ್ರರಂಗದಲ್ಲಿ ಆಗಾಗ್ಗೆ ಕಾಣುತ್ತೇವೆ. ಆದರೆ ಇಲ್ಲೊಂದು ಚಿತ್ರತಂಡ ಆಡಿಯನ್ಸ್‌ಗೆ ಕ್ಯಾಚಿಯಾಗಿದೆ ಅನ್ನೋ ಏಕೈಕ ಕಾರಣಕ್ಕೆ ತಮ್ಮ ಚಿತ್ರಕ್ಕೆ ವಿಚಿತ್ರ ಹೆಸರನ್ನಿಟ್ಟಿದೆ. ಅಂದಹಾಗೆ, ಆ ಚಿತ್ರದ ಹೆಸರು “ಕಾರ್ಕಿ’.

ಏನಿದು “ಕಾರ್ಕಿ’? ಎಂದರೆ “ಆ ಟೈಟಲ್‌ಗೆ ಅರ್ಥವೇ ಇಲ್ಲ’ ಅಂತಾರೆ ಚಿತ್ರದ ನಿರ್ದೇಶಕರು! “ಇತ್ತೀಚೆಗೆ ವಿಭಿನ್ನ ಟೈಟಲ್‌ಗ‌ಳ ಚಿತ್ರಗಳು ಬರುತ್ತಿರುವುದರಿಂದ, ಆಡಿಯನ್ಸ್‌ಗೆ ಕ್ಯಾಚಿಯಾಗಿ ಕಾಣುತ್ತದೆ. ಟೈಟಲ್‌ ಬೇಗ ಜನರನ್ನ ರೀಚ್‌ ಆಗುತ್ತದೆ ಅನ್ನೋ ಕಾರಣಕ್ಕೆ, ಇಂಥದ್ದೊಂದು ಡಿಫ‌ರೆಂಟ್‌ ಟೈಟಲ್‌ ಇಟ್ಟುಕೊಂಡಿದ್ದೇವೆ’ ಎನ್ನುವುದು ನಿರ್ದೇಶಕ ಲೋಕೇಶ್‌ ಪ್ರಭು ಮಾತು.

ಇತ್ತೀಚೆಗೆ “ಕಾರ್ಕಿ’ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಇದೇ ವೇಳೆ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನೂ ಕರೆದಿತ್ತು. ಆದರೆ ಚಿತ್ರದ ಬಗ್ಗೆ ಏನಾದರೂ ಹೇಳಬಹುದು ಗಂಟೆಗಟ್ಟಲೆ ಎಲ್ಲರೂ ಕಾದು ಕುಳಿತಿದ್ದರೂ, ಚಿತ್ರದ ನಿರ್ಮಾಪಕರು, ನಿರ್ದೇಶಕರು ಅದ್ಯಾವುದರ ಪರಿವೇ ಇಲ್ಲದಂತೆ ಓಡಾಡಿಕೊಂಡಿದ್ದರು. ಕೊನೆಗೆ ಪತ್ರಿಕಾಗೋಷ್ಠಿಯಲ್ಲಿ ಕಾದು ಕಾದು ಸುಸ್ತಾದ ಪತ್ರಕರ್ತರೇ ನಿರ್ದೇಶಕರು – ನಿರ್ಮಾಪಕರನ್ನು ಕರೆದು ಮಾತನಾಡಿಸಿದರೂ, ಅವರಿಗೆ ಕಾದಿದ್ದು ಮಾತ್ರ ನಿರಾಸೆ.

“ಕಾರ್ಕಿ’ ಚಿತ್ರದ ಒನ್‌ಲೈನ್‌ ಕಥೆ ಏನು? ಚಿತ್ರದಲ್ಲಿ ಏನು ಹೇಳಲು ಹೊರಟಿದ್ದೀರಿ? ಇದು ಯಾವ ಜಾನರ್‌ನ ಸಿನಿಮಾ..? ಹೀಗೆ ಹತ್ತಾರು ಪ್ರಶ್ನೆಗಳು ತೂರಿಬಂದರೂ, ಚಿತ್ರತಂಡ ಮಾತ್ರ “ಅವರನ್‌ ಬಿಟ್‌ ಇವರ್ಯಾರು’ ಎಂಬ “ಕಣ್ಣಾಮುಚ್ಚೆ’ ಆಟದಂತೆ ಒಬ್ಬರ ಮುಖವನ್ನು ಒಬ್ಬರು ನೋಡುತ್ತಾ ಹಲ್ಲು ಕಿರಿಯುತ್ತ “ಊಹ್ನೂ..’ ಎಂದು ತಲೆಯಾಡಿಸುತ್ತ ನಿಂತು ಬಿಟ್ಟಿತು.

ಕೊನೆಗೂ ಪಟ್ಟುಬಿಡದೆ ಒಂದಷ್ಟು ಕೆದಕಿದ ಪತ್ರಕರ್ತರಿಗೆ ಇದೊಂದು ಸೈಕಲಾಜಿಕಲ್‌ ಸಸ್ಪೆನ್ಸ್‌ – ಥ್ರಿಲ್ಲರ್‌ ಚಿತ್ರ. ನಗರ ಪ್ರದೇಶದ ಹುಡುಗರ ಒಂದು ದಿನದ ಕಥೆ. ಚಿತ್ರದಲ್ಲಿದ್ದು, ಈ ಜನರೇಷನ್‌ ಯೋಚನೆ ಹೇಗಿದೆ ಅನ್ನೊದು ಚಿತ್ರ. ಚಿತ್ರದಲ್ಲಿ ಪ್ರತಿ ಪಾತ್ರಕ್ಕೂ 2 ಗೆಟಪ್‌ಗ್ಳಿವೆ. ಬೆಂಗಳೂರು, ದಾಂಡೇಲಿ, ಯಲ್ಲಾಪುರ, ರಾಮೇಶ್ವರಂ ಸುತ್ತಮುತ್ತ ಸುಮಾರು 30 ದಿನ ಚಿತ್ರದ ಶೂಟಿಂಗ್‌ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿತು.

ಇನ್ನು “ವರ್ಲ್ಡ್ ಕ್ಲಾಸ್‌ ಪಿಕ್ಚರ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಕಾರ್ಕಿ’ ಚಿತ್ರವನ್ನು ಆರ್‌.ಎಸ್‌ ಕುಮಾರ್‌, ಸಂಪತ್‌ ಕುಮಾರ್‌, ಕೃಷ್ಣ ಕುಮಾರ್‌, ಅಕ್ಷಯ್‌ ರಾವ್‌ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ರೋಜರ್‌ ನಾರಾಯಣ್‌, ಐಶ್ವರ್ಯಾ, ಪಾವನಾ, ರಿಯಾನ್ಷಿ, ಚಿತ್ರದ ಹಾಡುಗಳಿಗೆ ಯದುನಂದನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಜಿತಿನ್‌ ದಾಸ್‌ ಛಾಯಾಗ್ರಹಣ, ಮಾಸ್‌ ಮಾದ ಸಾಹಸ, ಪುರುಷೋತ್ತಮ್‌ ಕಲಾ ನಿರ್ದೇಶನವಿದೆ. ಚಿತ್ರಕ್ಕೆ ಲೋಕೇಶ್‌ ಪ್ರಭು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

“ಕಾರ್ಕಿ’ ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಟ ನೆನಪಿರಲಿ ಪ್ರೇಮ್‌, ಧನಂಜಯ್‌, ನಿರ್ದೇಶಕ ವಿಜಯ ಪ್ರಸಾದ್‌ ಮೊದಲಾದವರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ಒಟ್ಟಾರೆ ಯಾವುದೇ ಪೂರ್ವತಯಾರಿ ಇಲ್ಲದೆ ಅವ್ಯವಸ್ಥಿತವಾಗಿ ಶುರುವಾಗಿರುವ “ಕಾರ್ಕಿ’ ಅದೆಷ್ಟರ ಮಟ್ಟಿಗೆ ಪ್ರೇಕ್ಷಕರ ಗಮನ ಸೆಳೆಯುತ್ತದೆಯೋ ದೇವರೇ ಬಲ್ಲ..!

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.