ಹೆಣ್ಮಕ್ಲೂ ಸ್ಟ್ರಾಂಗು ಗುರು… : ನಾಯಕಿಯರ ದರ್ಬಾರ್‌


Team Udayavani, May 3, 2019, 6:00 AM IST

Suchi-Heroins-726

ಇಷ್ಟು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಹೆಚ್ಚೇ ಇವೆ. ಈ ಮೂಲಕ ನಾಯಕಿ ನಟಿಯರು ಕೂಡಾ ತಾವು ನಾಯಕ ನಟರಿಗಿಂತ ಕಮ್ಮಿಯಿಲ್ಲ ಎಂದು ತೋರಿಸಲು ಹೊರಟಿದ್ದಾರೆ. ಹಾಗಂತ ನಾಯಕಿ ಪ್ರಧಾನ ಸಿನಿಮಾಗಳಲ್ಲಿ ನಾಯಕ ನಟರು ಇಲ್ಲವೇ ಇಲ್ಲ ಎಂದರ್ಥವಲ್ಲ, ಬದಲಾಗಿ ಇಡೀ ಕಥೆಯ ಕೇಂದ್ರಬಿಂದು ನಾಯಕಿಯಾಗಿರುತ್ತಾಳೆ, ಆಕೆಯ ನಟನೆ ಮೇಲೆ ಇಡೀ ಸಿನಿಮಾದ ಭವಿಷ್ಯ ನಿಂತಿರುತ್ತದೆ. ಇದೇ ಕಾರಣದಿಂದ ಅದೆಷ್ಟೋ ನಟಿಯರು ನಾಯಕಿ ಪ್ರಧಾನ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ…

ಒಂದು ಕಡೆ ಹೊಸಬರ ಸಿನಿಮಾ, ಇನ್ನೊಂದು ಕಡೆ ಸ್ಟಾರ್‌ಗಳ ಸಿನಿಮಾ, ಮತ್ತೂಂದು ಕಡೆ ಹಾಫ್ಬೀಟ್‌ ಎನ್ನುವ ಹೊಸ ಪ್ರಯೋಗ, ಹಾರರ್‌, ಥ್ರಿಲ್ಲರ್‌, ಕಾಮಿಡಿ … ಹೀಗೆ ಬೇರೆ ಬೇರೆ ಜಾನರ್‌ಗಳ ಮಧ್ಯೆ ಈ ವರ್ಷ ಗಮನ ಸೆಳೆಯುತ್ತಿರುವ ಸಿನಿಮಾ ಕೆಟಗರಿಯಲ್ಲಿ ನಾಯಕಿ ಪ್ರಧಾನ ಚಿತ್ರಗಳು ಕೂಡಾ ಇವೆ. ಕನ್ನಡ ಚಿತ್ರರಂಗದಲ್ಲಿ ಅವತ್ತಿನಿಂದ ಇವತ್ತಿನವರೆಗೂ ಸಾಕಷ್ಟು ನಾಯಕಿ ಪ್ರಧಾನ ಚಿತ್ರಗಳು ಬಂದಿವೆ.

ಆಯಾಯ ಕಾಲಘಟ್ಟಕ್ಕೆ ತಕ್ಕಂತೆ ಆ ಸಿನಿಮಾಗಳು ಪ್ರೇಕ್ಷಕರನ್ನು ಸೆಳೆದಿವೆ. ಈ ವರ್ಷ ಕೂಡಾ ಒಂದಷ್ಟು ನಾಯಕಿ ಪ್ರಧಾನ ಚಿತ್ರಗಳು ಬಿಡುಗಡೆಯ ಹಾದಿಯಲ್ಲಿವೆ. ಇಷ್ಟು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಹೆಚ್ಚೇ ಇವೆ. ಈ ಮೂಲಕ ನಾಯಕಿ ನಟಿಯರು ಕೂಡಾ ತಾವು ನಾಯಕ ನಟರಿಗಿಂತ ಕಮ್ಮಿಯಿಲ್ಲ ಎಂದು ತೋರಿಸಲು ಹೊರಟಿದ್ದಾರೆ. ಹಾಗಂತ ನಾಯಕಿ ಪ್ರಧಾನ ಸಿನಿಮಾಗಳಲ್ಲಿ ನಾಯಕ ನಟರು ಇಲ್ಲವೇ ಇಲ್ಲ ಎಂದರ್ಥವಲ್ಲ, ಬದಲಾಗಿ ಇಡೀ ಕಥೆಯ ಕೇಂದ್ರಬಿಂದು ನಾಯಕಿಯಾಗಿರುತ್ತಾಳೆ, ಆಕೆಯ ನಟನೆ ಮೇಲೆ ಇಡೀ ಸಿನಿಮಾದ ಭವಿಷ್ಯ ನಿಂತಿರುತ್ತದೆ.

ಇದೇ ಕಾರಣದಿಂದ ಅದೆಷ್ಟೋ ನಟಿಯರು ನಾಯಕಿ ಪ್ರಧಾನ ಸಿನಿಮಾ ಮಾಡಲು ಹಿಂದೇಟು ಹಾಕುತ್ತಾರೆ. ಅದೇನೇ ಆದರೂ ಈ ವರ್ಷ ಸಾಕಷ್ಟು ನಾಯಕಿ ಪ್ರಧಾನ ಚಿತ್ರಗಳು ಸರತಿಯಲ್ಲಿರುವುದು ಸುಳ್ಳಲ್ಲ. “ಸೂಜಿದಾರ’, “ಡಾಟರ್‌ ಆಫ್ ಪಾರ್ವತಮ್ಮ’, “ದೇವಕಿ’, “ಭೈರಾದೇವಿ’, “ದಮಯಂತಿ’, “ರಂಗನಾಯಕಿ’, “ವಜ್ರಮುಖೀ’, “ಅನುಷ್ಕ’, “ವೃತ್ರ’, “ಆದಿ ಲಕ್ಷ್ಮೀ’, “ಸಾಗುತ ದೂರ ದೂರ’, “ಶಾಲಿನಿ ಐಪಿಎಸ್‌’, “ಡಾ.56′, “ಪುಣ್ಯಾತಿಗಿತ್ತೀರು, “ಕನ್ನಡ್‌ ಗೊತ್ತಿಲ್ಲ’… ಹೀಗೆ ಲೆಕ್ಕ ಹಾಕುತ್ತಾ ಹೋದರೆ ಈ ಸಾಕಷ್ಟು ನಾಯಕಿ ಪ್ರಧಾನ ಚಿತ್ರಗಳು ಸಿಗುತ್ತವೆ.

ಇದರಲ್ಲಿ ಬಹುತೇಕ ಚಿತ್ರಗಳು ತಮ್ಮ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಾದಿಯಲ್ಲಿವೆ. ಇನ್ನೊಂದಿಷ್ಟು ಚಿತ್ರಗಳು ಚಿತ್ರೀಕರಣದಲ್ಲಿದ್ದು, ಈ ವರ್ಷವೇ ಚಿತ್ರಮಂದಿರದ ಬಾಗಿಲು ಬಡಿಯಲಿವೆ. ಇಲ್ಲಿ ಗಮನಿಸಬೇಕಾದ ಮತ್ತೂಂದು ಅಂಶವೆಂದರೆ ಈ ವರ್ಷ ಬರಲಿರುವ ನಾಯಕಿ ಪ್ರಧಾನ ಚಿತ್ರಗಳು ಬೇರೆ ಬೇರೆ ಜಾನರ್‌ಗೆ ಸೇರಿವೆ. ಹಾರರ್‌, ಥ್ರಿಲ್ಲರ್‌, ಫ್ಯಾಮಿಲಿ ಡ್ರಾಮಾ … ಹೀಗೆ ವಿಭಿನ್ನ ಅಂಶಗಳನ್ನು ಸ್ಪರ್ಶಿಸಿವೆ.

ಹೀರೋಗಳ ಸಿನಿಮಾವನ್ನು ಸುಲಭವಾಗಿ ಕಟ್ಟಿಕೊಡಬಹುದು. ಮಾಸ್‌ ಆಡಿಯನ್ಸ್‌ಗೆ ನಾಲ್ಕು ಫೈಟ್‌, ಫ್ಯಾಮಿಲಿಗೆ ಕಲರ್‌ಪುಲ್‌ ಸಾಂಗ್‌, ಒಂದಿಷ್ಟು ಕಾಮಿಡಿ … ಹೀಗೆ ಕಮರ್ಷಿಯಲ್‌ ಅಂಶಗಳೊಂದಿಗೆ ಕಟ್ಟಿಕೊಡಬಹುದು. ಆದರೆ, ನಾಯಕಿ ಪ್ರಧಾನ ಚಿತ್ರಗಳಿಗೆ ಇದು ಅನ್ವಯಿಸುವುದಿಲ್ಲ. ಅದರದ್ದೇ ಆದ ಒಂದು ಶೈಲಿ ಇರುತ್ತದೆ. ಅದು ಕಥೆಯಿಂದ ಹಿಡಿದು ಮೇಕಿಂಗ್‌ವರೆಗೂ ಅಷ್ಟೇ. ಸುಖಾಸುಮ್ಮನೆ ಏನೋ ಕಟ್ಟಿಕೊಡುತ್ತೇವೆ ಎಂದರೆ ಅದು ವರ್ಕೌಟ್‌ ಆಗೋದಿಲ್ಲ. ಹಾಗೆ ಮಾಡಿದ ಸಿನಿಮಾಗಳು ಬಂದ ದಾರಿಯಲ್ಲೇ ವಾಪಾಸ್‌ ಹೋದ ಉದಾಹರಣೆ ನಮ್ಮ ಕಣ್ಣ ಮುಂದಿದೆ.

ನಾಯಕಿ ಪ್ರಧಾನ ಸಿನಿಮಾಗಳು ಚಿತ್ರಮಂದಿರದಲ್ಲಿ ಗಟ್ಟಿನೆಲೆಯೂರಿ, ನಿರ್ಮಾಪಕರ ಜೇಬು ತುಂಬಬೇಕಾದರೆ ಅಲ್ಲೊಂದು ಗಟ್ಟಿಕಥಾಹಂದರವಿರಬೇಕು. ಆ ಅಂಶವೇ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರಬೇಕೇ ಹೊರತು, ಅದರಾಚೆಗಿನ ಅನಾವಶ್ಯಕ ಕಮರ್ಷಿಯಲ್‌ ಅಂಶಗಳಿಂದಲ್ಲ. ಸದ್ಯ ಬಿಡುಗಡೆಗೆ ಸಿದ್ಧವಾಗಿರುವ ಸಿನಿಮಾಗಳನ್ನು ಗಮನಿಸಿದರೆ “ಸೂಜಿದಾರ’ ಒಂದು ಸೂಕ್ಷ್ಮ ಕಥಾಹಂದರವಿರುವ ಚಿತ್ರವಾಗಿ ಗಮನಸೆಳೆದರೆ, “ಡಾಟರ್‌ ಆಫ್ ಪಾರ್ವತಮ್ಮ’ ಒಂದು ಖಡಕ್‌ ಹುಡುಗಿಯ ಪಾತ್ರದ ಮೂಲಕ ಮೋಡಿ ಮಾಡುವ ಸಾಧ್ಯತೆ ಇದೆ.

ಉಳಿದಂತೆ “ಭೈರಾದೇವಿ’, “ದಮಯಂತಿ’, “ವಜ್ರಮುಖೀ’ ಚಿತ್ರಗಳು ಹಾರರ್‌-ಥ್ರಿಲ್ಲರ್‌ ಜಾನರ್‌ಗೆ ಸೇರಿವೆ. ಕಳೆದ ವರ್ಷ “ಸೆಕೆಂಡ್‌ ಹಾಫ್’ ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದ ಪ್ರಿಯಾಂಕಾ ಉಪೇಂದ್ರ ಈ ವರ್ಷ “ದೇವಕಿ’ಯಾಗಿ ತೆರೆಮೇಲೆ ಬರಲು ಅಣಿಯಾಗಿದ್ದಾರೆ.

ಇತ್ತ ಕಡೆ ನಟಿ ಹರಿಪ್ರಿಯಾ ಅವರ “ಸೂಜಿದಾರ’ ಹಾಗೂ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರಗಳು ಒಂದರ ಹಿಂದೊಂದರಂತೆ ತೆರೆಕಾಣಲು ಅಣಿಯಾಗಿವೆ. ಚಿತ್ರರಂಗಕ್ಕೆ ಬರುತ್ತಿರುವ ಹೊಸ ನಿರ್ದೇಶಕರು ನಾಯಕಿ ಪ್ರಧಾನ ಚಿತ್ರಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಅದಕ್ಕೆ ಕಾರಣ ಕಂಟೆಂಟ್‌ ಸಿನಿಮಾ. ಇವತ್ತು ಕಮರ್ಷಿಯಲ್‌ ಸಿನಿಮಾಗಳಿಗೆ ಪರ್ಯಾಯವಾಗಿ ಕಂಟೆಂಟ್‌ ಸಿನಿಮಾಗಳು ಬೆಳೆಯುತ್ತಿವೆ.

ಆ ತರಹದ ಕಂಟೆಂಟ್‌ ಸಿನಿಮಾಗಳನ್ನು ಮಾಡುವ ಹೊಸಬರಿಗೆ ನಾಯಕಿ ಪ್ರಧಾನ ಚಿತ್ರಗಳು ಸೂಕ್ತ ವೇದಿಕೆಯಾಗುತ್ತಿರುವುದು ಸುಳ್ಳಲ್ಲ. ಒಂದು ನಾಯಕಿ ಪ್ರಧಾನ ಚಿತ್ರ ಗೆದ್ದರೆ, ಅದು ಮತ್ತೂಂದಿಷ್ಟು ಮಂದಿಗೆ ದಾರಿ ಮಾಡಿಕೊಡುತ್ತದೆ, ಇನ್ನೊಂದಿಷ್ಟು ಹೊಸ ಸಿನಿಮಾಗಳ ಹುಟ್ಟಿಗೆ ಕಾರಣವಾಗುತ್ತವೆ. ಈ ವರ್ಷ ಬಿಡುಗಡೆಯ ಸಾಲಿನಲ್ಲಿರುವ ಸಿನಿಮಾಗಳಲ್ಲಿ ಯಾವ ಸಿನಿಮಾವನ್ನು ಪ್ರೇಕ್ಷಕ ಕೈ ಹಿಡಿಯುತ್ತಾನೆ, ಯಾವ ಸಿನಿಮಾ ಯಾರಿಗೆ ಸ್ಫೂರ್ತಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕು.

ನಿಮ್ಮ ಹೆಸರಿನಲ್ಲೇ ಸಿನಿಮಾ ಗುರುತಿಸಿಕೊಳ್ಳುತ್ತದೆ ಎಂಬುದು ನಾಯಕಿ ಪ್ರಧಾನ ಚಿತ್ರದ ಒಂದು ಪ್ಲಸ್‌ ಆದರೆ, ನಾಯಕಿಗೆ ಅಷ್ಟೇ ಜವಾಬ್ದಾರಿ ಕೂಡಾ ಇರುತ್ತದೆ. ಹೀರೋಗಳ ಸಿನಿಮಾವಾದರೆ ಎಲ್ಲಾ ಜವಾಬ್ದಾರಿ ಅವರ ಮೇಲೆ ಇರುತ್ತದೆ. ಆದರೆ, ಇಲ್ಲಿ ನಾಯಕಿ ಎಲ್ಲಾ ವಿಷಯದಲ್ಲೂ ಗಮನಹರಿಸ­ಬೇಕು. ಅದು ತಾರಾಬಳಗದ ಆಯ್ಕೆಯಿಂದ ಹಿಡಿದು ಸಿನಿಮಾದ ಪ್ರಮೋಶನ್‌ವರೆಗೂ. ನಾನಂತೂ ನಾಯಕಿ ಪ್ರಧಾನ ಚಿತ್ರಗಳನ್ನು ಖುಷಿಯಿಂದ ಮಾಡುತ್ತಿದ್ದೇನೆ…
ಹರಿಪ್ರಿಯಾ, ನಟಿ

— ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

Nisha Ravikrishnan: ಮಹಿಳಾ ಪ್ರಧಾನ ʼಅಂಶುʼ: ಕುತೂಹಲ ಮೂಡಿಸಿದ ಟ್ರೇಲರ್‌

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.