34 ಐಟಿ ದಾಳಿಗಳಲ್ಲಿ 24 ದಾಳಿ ಖಾಲಿ ಖಾಲಿ!


Team Udayavani, May 3, 2019, 11:00 AM IST

Udayavani Kannada Newspaper

ಬೆಂಗಳೂರು: ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ 34 ದಾಳಿಗಳಲ್ಲಿ 24 ದಾಳಿಗಳಲ್ಲಿ ಯಾವುದೇ ಅಕ್ರಮ ಹಣ ಅಥವಾ ಆಸ್ತಿ ಪತ್ತೆಯಾಗಿಲ್ಲ ಎಂದು ಜೆಡಿಎಸ್‌ ತಿಳಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಜೆಡಿಎಸ್‌ ವಕ್ತಾರ ಹಾಗೂ ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು, ಅಕ್ರಮ ಆಸ್ತಿ ಅನಧಿಕೃತ ಹಣ ವರ್ಗಾವಣೆ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೆರಿದಂತೆ ಇತರೆ ರಾಜಕೀಯ ಮುಖಂಡರು ಹಾಗೂ ಗುತ್ತಿಗೆದಾರರ ನಿವಾಸಗಳು ಕಚೇರಿಗಳಲ್ಲಿ ರಾಜ್ಯದ ವಿವಿಧೆಡೆ 34 ಕಡೆ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಪೈಕಿ ಕಾಂಗ್ರೆಸ್‌ ನಾಯಕರ ಜತೆ ಗುರುತಿಸಿಕೊಂಡಿದ್ದವರಿಗೆ ಸಂಬಂಧಿಸಿದಂತೆ 22 ಕಡೆ, ಜೆಡಿಎಸ್‌ನ ನಾಲ್ಕು, ಬಿಜೆಪಿ ನಾಯಕರು ಆಪ್ತರ ಆರು ನಿವಾಸಗಳ ಮೇಲೆ ದಾಳಿ ನಡೆಸಲಾಗಿತ್ತು.

ದಾಳಿ ನಡೆಸಿದ್ದ 24 ಕಡೆ ಯಾವುದೇ ಆಸ್ತಿ ಹಾಗೂ ಹಣ ಪತ್ತೆಯಾಗಿಲ್ಲ. ಸಂಸದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್ ಪಾಟೀಲ್, ಎಚ್.ಸಿ ಮಹದೇವಪ್ಪ, ಹಾಲಿ ಸಚಿವ ಎಂಟಿಬಿ ನಾಗರಾಜ ಅವರ ಆಪ್ತರು ಬೆಂಬಲಿಗರ ನಿವಾಸಗಳಲ್ಲಿ ನಡೆದ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಹಣ, ಆಸ್ತಿ ಪತ್ತೆಯಾಗಿಲ್ಲ. ಬಿಜೆಪಿಯು ರಾಜಕೀಯ ದುರುದ್ದೇಶದಿಂದ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡಿತ್ತು ಎಂಬುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

ದಾಳಿಯಲ್ಲಿ ಪ್ರಮುಖವಾಗಿ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಒಡೆತನದ ಹೆರಿಟೇಜ್‌ ವಸತಿ ಗೃಹದ ಮೇಲೆ ನಡೆಸಿದ ದಾಳಿಯಲ್ಲಿ ದೊರೆತ 13.80 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದು ಯಾವುದೇ ದಾಖಲೆಗಳಿಲ್ಲ. ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗೋಪಾಲ ಕುಲಕರ್ಣಿ ನಿವಾಸದಲ್ಲಿ 8630 ರೂ. ನಗದು ಹಾಗೂ 2.06 ಲಕ್ಷ ರೂ ಮೌಲ್ಯದ ಚಿನ್ನಾಭರಣ ಜಪ್ತಿಯಾಗಿತ್ತು.ಜತೆಗೆ, ಹುಬ್ಬಳ್ಳಿಯ ಖಾಸಗಿ ವ್ಯಕ್ತಿಯೊಬ್ಬರ ನಿವಾಸದಲ್ಲಿ 25 ಲಕ್ಷ ರೂ. ಹಣ ಹಾಗೂ 25 ಲಕ್ಷ ರೂ. ಆಸ್ತಿ ಬಗ್ಗೆ ಪರಿಶೀಲನೆ ನಡೆದಿದೆ. ಮಾಜಿ ಶಾಸಕ ಚೆಲುವರಾಯಸ್ವಾಮಿ ಮೂವರು ಆಪ್ತರ ನಿವಾಸಗಳಲ್ಲಿ ನಡೆದ ದಾಳಿಯಲ್ಲಿ 30 ಸಾವಿರ ರೂ. ದೊರೆತಿದ್ದು ಸೂಕ್ತ ದಾಖಲೆಗಳಿದ್ದ ಹಿನ್ನೆಲೆಯಲ್ಲಿ ವಾಪಾಸ್‌ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಟಾರ್ಗೆಟ್

‘ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ಐಟಿ ದಾಳಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಆಪ್ತರ ನಿವಾಸಗಳಲ್ಲಿ ಹಣ ಅಥವಾ ಆಸ್ತಿ ದೊರೆತಿಲ್ಲ. ಇದೇ ಕಾರಣಕ್ಕೆ ಐಟಿ ದಾಳಿಯನ್ನು ಕಾಂಗ್ರೆಸ್‌-ಜೆಡಿಎಸ್‌ ಮುಖಂಡರು ವಿರೋಧಿಸಿದ್ದೆವು. 2014ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಆಗ, ಐಟಿ ದಾಳಿ ನಡೆದಿರಲಿಲ್ಲ. 2018ಯ ವಿಧಾನಸಭೆ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗಿತ್ತು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.