ಚರ್ಚೆಗೆ ಗ್ರಾಸವಾದ ಫಲಿತಾಂಶ ಕುಸಿತ!

•ರಾಜ್ಯದ 204 ಶೈಕ್ಷಣಿಕ ಬ್ಲಾಕ್‌ಗಳಲ್ಲಿ ಹೂವಿನಹಡಗಲಿ ತಾಲೂಕಿಗೆ ಕೊನೆಯ ಸ್ಥಾನ

Team Udayavani, May 3, 2019, 11:44 AM IST

Udayavani Kannada Newspaper

ಹೂವಿನಹಡಗಲಿ: ಪ್ರಸ್ತುತ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ತಾಲೂಕಿನಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ರಾಜ್ಯದ 204 ಶೈಕ್ಷಣಿಕ ಬ್ಲಾಕ್‌ನಲ್ಲಿ ಹಡಗಲಿ ತಾಲೂಕು 204ನೇ ಸ್ಥಾನ ಪಡೆದು ರಾಜ್ಯಕ್ಕೆ ಕೊನೆ ಸ್ಥಾನ ಪಡೆದುಕೊಂಡಿದೆ.

ಪರೀಕ್ಷೆ ವೇಳೆ ಕೈಗೊಂಡ ಬಿಗಿಯಾದ ಕ್ರಮಗಳು ಇದಕ್ಕೆಲ್ಲ ಪ್ರಮುಖ ಕಾರಣವಾಗಿದೆ ಎಂದು ತಾಲೂಕಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಶೇ.40ರಷ್ಟು ಫಲಿತಾಂಶ ಲಭಿಸಿದೆ.

ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಬಾಲಕರ ಪ.ಪೂ ಕಾಲೇಜಿಗೆ ಕೇವಲ ಶೇ.5.26ರಷ್ಟು ಫಲಿತಾಂಶ ಲಭಿಸಿದ್ದು, ಶಿಕ್ಷಣ ತಜ್ಞರು, ಮಕ್ಕಳ ಪೋಷಕರಿಗೆ, ಶಿಕ್ಷಕರಿಗೆ ಅಚ್ಚರಿ ತಂದಿದೆ. ಫಲಿತಾಂಶ ಕುಸಿತದಲ್ಲೂ ತಾಲೂಕಿನ ಎಂ.ಎಂ. ಪಾಟೀಲ್ ಪ್ರೌಢಶಾಲೆ, ಹೊಳಲು ಸಾಧನಾ ಪ್ರೌಢಶಾಲೆ, ಹಿರೇಹಡಗಲಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಗಿರಿಯಾಪುರ ಮಠದ ಮೊರಾರ್ಜಿ ಪ್ರೌಢಶಾಲೆ, ಕಿತ್ತೂರರಾಣಿ ಚನ್ನಮ್ಮ ವಸತಿಶಾಲೆ ಸೇರಿ ಮುಂತಾದ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ.

ಯಾವ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆಯೋ ಆ ಶಾಲೆಯಲ್ಲಿ ಈ ಬಾರಿ ಹೆಚ್ಚುವರಿ ಶಿಕ್ಷಕರನ್ನು ನೀಡಲಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಫಲಿತಾಂಶ ಹೆಚ್ಚಿಸಲು ಅಬ್ದುಲ್ ಕಲಾಂ ಶಿಕ್ಷಣ ಸೇವೆ, ಬಳ್ಳಾರಿ ವಿಜನ್‌ ಫಾರ ಎಜುಕೇಶನ್‌ ಅಡಿ ಅತಿಥಿ ಶಿಕ್ಷಕರನ್ನು ನೀಡಲಾಗಿತ್ತು. ಇಷ್ಟೆಲ್ಲ ಸೌಲಭ್ಯ ನೀಡಿದರೂ ಕೂಡ ಫಲಿತಾಂಶ‌ ಕಡಿಮೆ ಬರುವುದಕ್ಕೆ ಶಿಕ್ಷಣ ಇಲಾಖೆಯ ಮೇಲಧಿಕಾರಿಗಳ ಮಾರ್ಗದರ್ಶನ ಕೊರತೆ ಇರಬಹುದು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

ನೂರಕ್ಕೆ ನೂರು ಯಾವ ಶಾಲೆ ಇಲ್ಲ: ಕಳೆದ ಬಾರಿ ಸಾಧನಾ ಆಂಗ್ಲ ಮಾಧ್ಯಮ ಶಾಲೆ, ಎಂ.ಎಂ .ಪಾಟೀಲ ಶಾಲೆ, ಸರ್ಕಾರಿ ಪ್ರೌಢಶಾಲೆ ಉಪನಾಯ್ಕಹಳ್ಳಿ, ಮೊದಲಗಟ್ಟೆ ಮೊರಾರ್ಜಿ ವಸತಿ ಶಾಲೆ, ಗಿರಿಯಾಪುರ ಮಠದ ವಸತಿ ಶಾಲೆ, ಇಟಗಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸೇರಿದಂತೆ ಒಟ್ಟು 7 ಶಾಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದ್ದವು. ಆದರೆ ಈ ಬಾರಿ ತಾಲೂಕಿನಲ್ಲಿರುವ ಒಂದು ಶಾಲೆಯೂ ಶೇ.100ರಷ್ಟು ಫಲಿತಾಂಶ ಪಡೆದಿಲ್ಲ.

ಈ ಬಾರಿ ತಾಲೂಕಿನಲ್ಲಿ ಫಲಿತಾಂಶ ಕುಸಿಯಲು ವಿದ್ಯಾರ್ಥಿಗಳಲ್ಲಿ ಕಲಿಕೆ ಬಗ್ಗೆ ನಿರಾಸಕ್ತಿ ಇರಬಹುದು. ಕೆಲವು ಶಿಕ್ಷಕರು ಮಕ್ಕಳಿಗೆ ಗುಣಮಟ್ಟ ಬೋಧನೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿರಬಹುದು. ಅಲ್ಲದೆ, ಈ ಬಾರಿ ಪಠ್ಯ ಪುಸ್ತಕ ಬದಲಾವಣೆಯಾಗಿ ನೂತನ ಪಠ್ಯಕ್ರಮ ಬಂದಿರುವುದೂ ಕೂಡ ಫಲಿತಾಂಶ ಕುಸಿಯಲು ಕಾರಣವಾಗಿರಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ್‌ ಪ್ರತ್ರಿಕ್ರಿಯಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಾಲೂಕಿನಲ್ಲಿ ಫಲಿತಾಂಶ ಹೆಚ್ಚಳ ಮಾಡುವುದಕ್ಕೆ ಈಗಾಗಲೇ ಮುಖ್ಯೋಪಾಧ್ಯಾರ ಸಭೆ ಕರೆಯಲಾಗಿದೆ. ಶಿಕ್ಷಕರಿಗೆ ಇಂದಿನಿಂದಲೇ ಸೂಕ್ತ ತಯಾರಿ ನಡೆಸಲು ಮುಖ್ಯ ಶಿಕ್ಷಕರಿಗೆ ವೇದಿಕೆ ತಯಾರಿಸಿದ್ದು, ವಿಷಯವಾರು ತರಬೇತಿ ನೀಡಲಾಗುವುದು.
•ಸಿ.ನಾಗರಾಜ,
ಕ್ಷೇತ್ರ ಶಿಕ್ಷಣಾಧಿಕಾರಿ.

ವಿಶ್ವನಾಥ ಹಳ್ಳಿಗುಡಿ

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.