ಆನೆಗಳ ಹಿಂಡಿನಿಂದ ಬೆಳೆ ನಾಶ


Team Udayavani, May 3, 2019, 12:55 PM IST

chikk-2

ಟೇಕಲ್: ಮಾಲೂರು ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ 6 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಓಡಿಸಲು ಎಷ್ಟೇ ಹರಸಾಹಸ ಪಟ್ಟರೂ ಆಗುತ್ತಿಲ್ಲ. ಇದರಿಂದ ಜನತೆ ಆತಂಕಗೊಂಡಿದ್ದಾರೆ.

ಟೇಕಲ್ ಹೋಬಳಿ ವ್ಯಾಪ್ತಿಯ ಬಲ್ಲಹಳ್ಳಿಯ ಕೃಷ್ಣಪ್ಪನವರ ನೀಲಗಿರಿ ತೋಪಿಗೆ ಬಂದ ಆನೆಗಳು, ಗುರುವಾರ ಮುಂಜಾನೆ 7 ಗಂಟೆಗೆ ಪ್ರತ್ಯಕ್ಷಗೊಂಡಿದೆ. ಬುಧವಾರ ಕಾಟೇರಿ, ಸೊಣ್ಣಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಹಾವಳಿಯಿಂದ ಸಾರ್ವಜನಿಕರಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಆನೆ ನೋಡಲು ಬಂದ ಓರ್ವ ಗಾಯಗೊಂಡಿದ್ದ.

ರೈತರು ಭಯಭೀತ: ಮುಂಜಾನೆ 7 ಗಂಟೆಗೆ ಕಾಡಾನೆಗಳ ಹಿಂಡು ಯಲುವಗುಳಿ, ದೊಡ್ಡಮಲ್ಲೆಯ ತೋಟ ಗಳ ಮಧ್ಯೆ ಹಾಯ್ದು ನಡುವೆ ಸಿಕ್ಕ ಟೊಮೆಟೋ ತೋಟ, ಕಬ್ಬಿನ ಬೆಳೆ ಹಾಗೂ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ನಂತರ ತಮಗೆ ಬೇಕಾದ ಆಹಾರ ತಿಂದು ಹಾಕಿವೆ. ಬಲ್ಲಹಳ್ಳಿ ಸಮೀಪದ ಆಸುಪಾಸಿನಲ್ಲಿರುವ ಸೀತಹಳ್ಳಿ ಫಾರ್ಮ ಹೌಸ್‌ ಒಂದರ ಬಳಿ ಇರುವ ಮಾವಿನ ಫ‌ಸಲನ್ನು ತಿಂದು ಹಾಕಿದೆ. ರಾತ್ರಿ 10.30ರಲ್ಲಿ ಕೊಂಡಶೆಟ್ಟಹಳ್ಳಿ ಸಮೀಪದ ತೋಟ ಮನೆಯ ರೈತ ತಮ್ಮ ಹೊಲದಲ್ಲಿ ನೀರನ್ನು ಹಾಯಿಸಲು ಸ್ಥಳಕ್ಕೆ ಹೋದಾಗ ಆನೆಗಳ ಹಿಂಡು ನೋಡಿ ಭಯಭೀತನಾಗಿದ್ದಾನೆ.

ಶಾಸಕರ ಭೇಟಿ: ಇನ್ನು ವಿಶೇಷವೆಂದರೆ ಆನೆಗಳ ಹಿಂಡನ್ನು ನೋಡಲು ಗುರುವಾರ ಮುಂಜಾನೆ ಟೇಕಲ್ ಹೋಬಳಿಯ ಬಲ್ಲಹಳ್ಳಿ ಗ್ರಾಮದ ನೀಲಗಿರಿ ತೋಪಿಗೆ ಶಾಸಕ ಕೆ.ವೈ.ನಂಜೇಗೌಡರು ಭೇಟಿ ನೀಡಿದ್ದರು. ಇದೇ ವೇಳೆ ಮಾತನಾಡಿ, ಕಾಡಾನೆ ಗಳನ್ನು ಓಡಿಸಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ರಾತ್ರಿ ವೇಳೆ ಅವು ಹೆಚ್ಚು ಓಡಾಟ ಮಾಡಲಿದ್ದು, ಸಾರ್ವಜನಿಕರು ಎಚ್ಚರದಿಂದ ಇರಬೇಕು. ಅರಣ್ಯ ಇಲಾಖೆ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾಡಾನೆಗಳು ಗುರುವಾರ ದಿನವಿಡೀ ಬಲ್ಲಹಳ್ಳಿಯ ನೀಲಗಿರಿ ತೋಪಿನಲ್ಲೇ ಬೀಡು ಬಿಟ್ಟಿದ್ದು, ಅವುಗಳನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದರು. ಅವರನ್ನು ನಿಯಂತ್ರಿಸುವುದೇ ಅರಣ್ಯ ಸಿಬ್ಬಂದಿಗೆ ಸವಾಲಾಗಿದೆ. ಸಂಜೆ ನಂತರ ಆನೆಗಳನ್ನು ತಮಿಳುನಾಡಿನ ಮೂತನೂರು ಅರಣ್ಯ ಪ್ರದೇಶಕ್ಕೆ ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಗೆ ಮುಂದಾಗಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.