ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಎರಡು ದಿನ ಕಾದ ಮಕ್ಕಳು!

35 ಜನ ವಿದ್ಯಾರ್ಥಿಗಳು-ಪಾಲಕರಿಂದ ಗುರುವಾರ ಮಧ್ಯಾಹ್ನ ದಿಢೀರ್‌ ಪ್ರತಿಭಟನೆ

Team Udayavani, May 3, 2019, 1:15 PM IST

bagalkote-3-tdy..

ಬಾಗಲಕೋಟೆ: ಫಲಿತಾಂಶಕ್ಕಾಗಿ ನವನಗರದ ಆದರ್ಶ ವಿದ್ಯಾಲಯದ ಎದುರು ಕಾದು ಕುಳಿತಿದ್ದ ವಿದ್ಯಾರ್ಥಿಗಳು-ಪಾಲಕರು.

ಬಾಗಲಕೋಟೆ: ಪ್ರಸಕ್ತ ಎಸ್ಸೆಸ್ಸೆಲ್ಸಿ ಫಲಿತಾಂಶ ರಾಜ್ಯಾದ್ಯಂತ ಎರಡು ದಿನಗಳ ಹಿಂದೆಯೇ ಬಹಿರಂಗಗೊಂಡರೂ ಇಲ್ಲಿನ ಆದರ್ಶ ವಿದ್ಯಾಲಯದ 35 ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಎರಡು ದಿನ ಕಾಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಎರಡು ದಿನಗಳಿಂದ ನವನಗರದ ಆದರ್ಶ ವಿದ್ಯಾಲಯಕ್ಕೆ ಅಲೆದಾಡಿದಾಗ ಶಿಕ್ಷಕರು, ತಾಂತ್ರಿಕ ಸಮಸ್ಯೆ ಆಗಿದೆ. ಸದ್ಯದಲ್ಲೇ ಫಲಿತಾಂಶ ಬರುತ್ತದೆ ಎಂದು ಹೇಳುತ್ತಲೇ ಇದ್ದರು. ಎರಡು ದಿನಗಳಾದರೂ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ 35 ಜನ ವಿದ್ಯಾರ್ಥಿಗಳು ಹಾಗೂ ಪಾಲಕರು ಗುರುವಾರ ಮಧ್ಯಾಹ್ನ ದಿಢೀರ್‌ ಪ್ರತಿಭಟನೆ ನಡೆಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಶಿಕ್ಷಕರ ಎದುರು ಕಣ್ಣೀರು ಹಾಕಿದರು. ಈ ಘಟನೆ ನಡೆದ ಮೂರು ಗಂಟೆಯಲ್ಲಿ ಫಲಿತಾಂಶ ಕೂಡ ಬಂತು. ಬೆಳಗ್ಗೆ ಕಣ್ಣೀರು ಹಾಕಿ, ಪ್ರತಿಭಟನೆ ನಡೆಸಿದ್ದ ಮಕ್ಕಳು ಸಂಜೆಯ ಹೊತ್ತಿಗೆ ಖುಷಿಪಟ್ಟರು. ಆದರೆ, ಕೆಲವು ವಿದ್ಯಾರ್ಥಿಗಳು ನಾವು ನಿರೀಕ್ಷಿಸಿದ್ದ ಅಂಕ ಬಂದಿಲ್ಲ. ಹೀಗಾಗಿ ಮರು ಮೌಲ್ಯಮಾಪಕನಕ್ಕೆ ಹಾಕುತ್ತೇವೆ ಎಂದರು.

ರಾಜ್ಯದಲ್ಲಿ ಎರಡು ದಿನಗಳ ಹಿಂದೆಯೇ ಫಲಿತಾಂಶ ಬಂದಿದೆ. ಆದರೆ, ಆದರ್ಶ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ ನಮ್ಮ ಪುತ್ರಿಯ ಫಲಿತಾಂಶ ನೋಡಲು ಇಂಟರ್‌ನೆಟ್‌ಗೆ ಹೋದರೆ ಬರುತ್ತಿರಲಿಲ್ಲ. ಶಿಕ್ಷಕರು, ಅಧಿಕಾರಿಗಳ ಗಮನಕ್ಕೆ ತಂದಿದ್ದೇವು. ಪ್ರತಿಭಟನೆಯೂ ಮಾಡಿದ್ದೇವೆ. ಗುರುವಾರ ಸಂಜೆ ಫಲಿತಾಂಶ ಬಂದಿದೆ. ಆದರೆ, ನಮ್ಮ ಪುತ್ರಿ ಸೃಷ್ಟಿ ಪಾಟೀಲಗೆ ಶೇ.67.84 ಫಲಿತಾಂಶ ಬಂದಿದ್ದು, ಅದನ್ನು ಮರು ಮೌಲ್ಯಮಾಪನಕ್ಕೆ ಹಾಕಲು ಸಿದ್ಧತೆ ಮಾಡಿದ್ದೇವೆ.- ಶಿವನಗೌಡ ಪಾಟೀಲ,ವಿದ್ಯಾರ್ಥಿ ಸೃಷ್ಟಿ ಪಾಟೀಲ ತಂದೆ

ನವನಗರದ ಆದರ್ಶ ವಿದ್ಯಾಲಯ ಶೇ.100 ಫಲಿತಾಂಶ ಬಂದಿದೆ. ಆದರೆ, 35 ವಿದ್ಯಾರ್ಥಿಗಳ ವೈಯಕ್ತಿಕ ಫಲಿತಾಂಶ ಶಾಲೆಗೆ ಬಂದಿರಲಿಲ್ಲ. ಈ ಕುರಿತು ಇಲಾಖೆಯ ನಿರ್ದೇಶಕರೊಂದಿಗೆ ಮಾತನಾಡಿದ್ದು, ಗುರುವಾರ ಸಂಜೆಯೇ ಫಲಿತಾಂಶ ಬಂದಿದೆ.-ಬಿ.ಎಚ್. ಗೋನಾಳ, ಡಿಡಿಪಿಐ

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.