ಗಬ್ಬೂರು ನಾಡಕಚೇರಿಯಲ್ಲಿ ನೆಟ್ ವರ್ಕ್ ಸಮಸ್ಯೆ

ಜಾತಿ-ಆದಾಯ ಪ್ರಮಾಣಪತ್ರ, ಇತರೆ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರ ಅಲೆದಾಟ

Team Udayavani, May 3, 2019, 1:30 PM IST

3-May-21

ದೇವದುರ್ಗ: ಗಬ್ಬೂರು ನಾಡ ಕಚೇರಿ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ನಾಡ ಕಚೇರಿಯಲ್ಲಿ ಒಂದು ತಿಂಗಳಿನಿಂದ ನೆಟ್ವರ್ಕ್‌ ಸಮಸ್ಯೆ ಎದುರಾಗಿದ್ದು, ಜನರು ಕೆಲಸ, ಕಾರ್ಯಗಳಿಗಾಗಿ ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ.

ಸುತ್ತಲಿನ ಹಲವು ಗ್ರಾಮಗಳ ಗ್ರಾಮಸ್ಥರು ಸರ್ಕಾರದ ವಿವಿಧ ಸೌಲಭ್ಯ ಪಡೆಯಲು, ಅರ್ಜಿಗೆ ದಾಖಲಾತಿಗಳನ್ನು ಪಡೆಯಲು ಗಬ್ಬೂರು ನಾಡಕಚೇರಿಯನ್ನೇ ಅವಲಂಬಿಸಿದ್ದಾರೆ. ಆದರೆ ಇಲ್ಲಿ ಪದೇಪದೆ ನೆಟ್ವರ್ಕ್‌ ಸಮಸ್ಯೆ ಎದುರಾಗುತ್ತಿದೆ. ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಪಹಣಿ, ಜಾತಿ, ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿ ಇತರೆ ಕೆಲಸಗಳು ಬಂದಾಗಿವೆ. ಹೀಗಾಗಿ ಸುತ್ತಲಿನ ಸುಮಾರು 41 ಹಳ್ಳಿಗಳ ಜನ ದೇವದುರ್ಗಕ್ಕೆ ತೆರಳುವಂತಾಗಿದೆ. ಇಲ್ಲಿನ ಸಮಸ್ಯೆ ಕುರಿತು ತಾಲೂಕು ಆಡಳಿತ ಗಮನಕ್ಕೆ ತರಲಾಗಿದೆ. ಅಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳುತ್ತಾರೆ, ಆದರೆ ಸಮಸ್ಯೆಗೆ ಮುಕ್ತಿ ಇಲ್ಲದಾಗಿದೆ.

ಹಳೆ ಕಟ್ಟಡದಲ್ಲಿ ಕೆಲಸ: ಗಬ್ಬೂರು ನಾಡಕಚೇರಿ ಕಟ್ಟಡ ಹಳೆಯದಾಗಿದ್ದು, ಸಿಮೆಂಟ್ ಉದುರಿ ಬೀಳುತ್ತಿದೆ. ಈ ಹಿಂದೆ ಕಚೇರಿ ಸಿಬ್ಬಂದಿ ಮೇಲೆ ಛತ್ತು ಬಿದ್ದು ಗಾಯಗೊಂಡ ಘಟನೆ ನಡೆದಿವೆ. ಕಟ್ಟಡ ಎಲ್ಲೆಂದರಲ್ಲಿ ಬಿರುಕು ಬಿಟ್ಟಿದೆ. ಮಳೆಗಾಲದಲ್ಲಿ ಕಟ್ಟಡ ಸಂಪೂರ್ಣ ಸೋರುತ್ತದೆ. ಈ ವೇಳೆ ಸಿಬ್ಬಂದಿ ದಾಖಲೆಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡಬೇಕಾದ ಪರಿಸ್ಥಿತಿ ಇದೆ. ಆದರೂ ತಾಲೂಕು ಆಡಳಿತ ಕಟ್ಟಡ ದುರಸ್ತಿಗೆ ಇಲ್ಲವೇ ಕಚೇರಿ ಸ್ಥಳಾಂತರಕ್ಕೆ ಮುಂದಾಗಿಲ್ಲ. ಸಿಬ್ಬಂದಿ ಭಯದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ.

ಬಿಲ್ ವಿಳಂಬ: ನಾಡಕಚೇರಿ ಬಿಎಸ್ಸೆನ್ನೆಲ್ ಬಿಲ್ ಪಾವತಿಸದಿರುವುದರಿಂದ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಿದ್ದು, ಇದರಿಂದಾಗಿ ನೆಟ್ವರ್ಕ್‌ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ವಿವಿಧ ದಾಖಲಾತಿಗಳು ಪಡೆಯಲು ಅರ್ಜಿದಾರರು ನೀಡಿದ ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆ ಕಾಡುತ್ತಿದೆ. ಕೂಡಲೇ ತಾಲೂಕು ಆಡಳಿತ ನೆಟ್ವರ್ಕ್‌ ಸಮಸ್ಯೆ ಪರಿಹರಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕೆಂದು ದಲಿತ ಮುಖಂಡ ಶಾಂತಕುಮಾರ ಹೊನ್ನಟಗಿ ಆಗ್ರಹಿಸಿದ್ದಾರೆ.

ಗಬ್ಬೂರು ನಾಡಕಚೇರಿಯಲ್ಲಿ ನೆಟ್ವರ್ಕ ಸಮಸ್ಯೆ ಎದುರಾಗಿದ್ದು ಗಮನಕ್ಕೆ ಬಂದಿದೆ. ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಸರಿಪಡಿಸುವ ಕೆಲಸ ಮಾಡಲಾಗುತ್ತದೆ.
••ಮಲ್ಲಿಕಾರ್ಜನ ಅರಕೇರಿ,
ತಹಶೀಲ್ದಾರ್‌

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.