ಘನ ತ್ಯಾಜ್ಯ ನಿರ್ವಹಣೆ ತೃಪ್ತಿಕರ


Team Udayavani, May 4, 2019, 2:43 PM IST

ramanagar-4-tdy..

ರಾಮನಗರ: ಘನ ತ್ಯಾಜ್ಯ ನಿರ್ವಹಣೆಯಲ್ಲಿ ರಾಮನಗರ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್‌ ಜಿ. ಆಡಿ ತೃಪ್ತಿ ವ್ಯಕ್ತಪಡಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅರೋಗ್ಯ ಇಲಾಖೆ, ನಗರ ಸಭೆ, ಪುರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಪರಿಶೀಲನಾ ಸಭೆ ನಡೆಸಿದರು.

ಕಸ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳು ಹಾಗೂ ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮ ಕಾರಿಯಾಗಿ ಜಾರಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಹಸಿ- ಒಣ ಕಸ ವಿಂಗಡಿಸದಿದ್ದರೆ ದಂಡ: ಸ್ಥಳೀಯ ಸಂಸ್ಥೆಗಳು ಕಸವನ್ನು ಒಣ ಹಾಗೂ ಹಸಿಕಸವನ್ನಾಗಿ ವಿಂಗಡಿಸಿ ನೀಡುವಂತೆ ವ್ಯಾಪಕ ಪ್ರಚಾರಮಾಡಿ ಹಸಿಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಕ್ರಮವಹಿಸಬೇಕು. ಸ್ವಯಂಸೇವಾ ಸಂಸ್ಥೆಗಳು ಹಾಗೂ ಸ್ಥಳೀಯ ಕೌನ್ಸಿಲರ್‌ಗಳು ಘನ ತ್ಯಾಜ್ಯ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಪ್ರತಿ ಮನೆ ವಿಂಗಡಿತ ಕಸ ನೀಡುವಂತೆ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲೆಡೆಯೂ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಎದುರಾಗುತ್ತಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯುವವರು ಹಾಗೂ ಕಸವನ್ನು ಬೇರ್ಪಡಿಸದೇ ಕೊಡುವವರ ಮೇಲೆ ದಂಡ ವಿಧಿಸಬೇಕು. ಘನ ತ್ಯಾಜ್ಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಶಾಲಾ ಮಟ್ಟದಲ್ಲೇ ಕಾರ್ಯಕ್ರಮ ರೂಪಿಸಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚನೆ ಕೊಟ್ಟರು. ಹೊಸ ಬಡಾವಣೆ ನಿರ್ಮಾಣವಾಗುವಾಗಲೇ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ತಿಳಿಸಿದರು.

ಪ್ಲಾಸ್ಟಿಕ್‌ ತಡೆಯಲು ವ್ಯಾಪಕ ದಾಳಿಗೆ ಆದೇಶ: ಪ್ಲಾಸ್ಟಿಕ್‌ ಬಳಕೆ ತಡೆಯಲು ವ್ಯಾಪಕ ದಾಳಿ ಅಗತ್ಯವಾಗಿದೆ. ಯಾವುದೇ ಅಂಗಡಿಗಳಲ್ಲಿ ಮರು ಬಳಕೆಯಾಗದ ಪ್ಲಾಸ್ಟಿಕ್‌ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ವಸಬೇಕು. ಆಸ್ಪತ್ರೆ ತ್ಯಾಜ್ಯವನ್ನು ಕಡ್ಡಾಯವಾಗಿ ಪ್ರತ್ಯೇಕವಾಗಿ ಪಡೆದು ನಿರ್ವಹಿಸಬೇಕಾಗಿದೆ. ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಮನೆ ಮನೆಗಳಲ್ಲೇ ಸಾಧ್ಯವಿದೆ. ಈ ವಿಚಾರದಲ್ಲಿಯೂ ಅಧಿಕಾರಿಗಳು ಸೂಕ್ತ ಕ್ರಮವಸಬೇಕಾಗಿದೆ. ಈ ನಿಟ್ಟಿನಲ್ಲಿ ನಾಗರಿಕರು ಹಾಗೂ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ, ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪಿ ಮುಲ್ಲೈ ಮುಹಿಲನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ರಮೇಶ್‌, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಗರಸಭೆ, ಪುರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.