ಧಾರ್ಮಿಕ ಪರಂಪರೆಯಿಂದ ಬದುಕು ಸಾರ್ಥಕ


Team Udayavani, May 4, 2019, 2:57 PM IST

hav-2

ಹಾವೇರಿ: ಧಾರ್ಮಿಕತೆ ಹಾಗೂ ಧಾರ್ಮಿಕ ಪರಂಪರೆಗಳನ್ನಿಟ್ಟುಕೊಂಡು ಬದುಕು ಕಟ್ಟಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮೀಜಿ ನುಡಿದರು.

ನಗರದ ಹರಸೂರು ಬಣ್ಣದಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳ 34ನೇ ಪುಣ್ಯ ಸ್ಮರಣೋತ್ಸವ ಹಾಗೂ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳ 9ನೇ ವರ್ಧಂತಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಧರ್ಮೋತ್ತೇಜಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧಾರ್ಮಿಕ ಕಾರ್ಯಗಳಲ್ಲಿ ನೀಡಲಾಗುವ ಸಂದೇಶಗಳನ್ನು ಮನವಿಟ್ಟು ಕೇಳುವುದರೊಂದಿಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದಕ್ಕೆ ಮುಂದಾಗುವುದು ಇನ್ನು ಅಪರೂಪವಾಗುತ್ತಿದೆ. ಇಂದಿನ ಯುವ ಜನಾಂಗ ಧಾರ್ಮಿಕ ಕಾರ್ಯಗಳಿಂದ ದೂರವಾಗುತ್ತಿರುವುದು ವಿಷಾದನೀಯ. ಇದು ಹೀಗೆಯೇ ಮುಂದುವರಿದರೆ ಮುಂದಿನ ಜನಾಂಗಕ್ಕೆ ಧರ್ಮದ ಅರಿವೇ ಇರದೇ ಧರ್ಮ ಸಂಕಷ್ಟದಲ್ಲಿ ಸಿಲುಕುತ್ತದೆ. ಯುವ ಜನತೆಯೊಂದಿಗೆ ಮಕ್ಕಳನ್ನು ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಬಹಳ ಅವಶ್ಯಕವಾಗಿದೆ ಎಂದರು.

ಹಣದಿಂದ ಪುಸ್ತಕವನ್ನು ಕೊಳ್ಳಬಹುದೇ ಹೊರತು ವಿದ್ಯೆಯನ್ನು ಕೊಳ್ಳಲು ಸಾಧ್ಯವಿಲ್ಲ. ಹಣದಿಂದ ಔಷಧಿ ಕೊಳ್ಳಬಹುದೇ ಹೊರತು ಆರೋಗ್ಯವನ್ನು ಕೊಳ್ಳಲು ಆಗದು. ಹಣದಿಂದ ಸಂತೆಯಲ್ಲಿ ಏನೆಲ್ಲ ಕೊಳ್ಳಬಹುದು ಆದರೆ, ಭಕ್ತಿ ಕೊಳ್ಳಲಾಗದು. ಮಠಮಾನ್ಯಗಳಲ್ಲಿ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮಾತ್ರ ಭಕ್ತಿ ದೊರೆಯಲು ಸಾಧ್ಯ. ನಾವು ಮಾಡುವ ಧಾರ್ಮಿಕ ಪುಣ್ಯಕಾರ್ಯಗಳಿಂದ ನಮಗಲ್ಲದೆ ನಮ್ಮ ಮುಂದಿನ ಜನಾಂಗಕ್ಕೂ ದೊರೆಯುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಹೇಳಿದರು.

ಸಮ್ಮುಖ ವಹಿಸಿ ಮಾತನಾಡಿದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ವಿಶ್ವದ ಅನೇಕ ರಾಷ್ಟ್ರಗಳು ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಿರಬಹುದು. ಆದರೆ, ಆ ದೇಶಗಳಲ್ಲಿ ಧಾರ್ಮಿಕತೆ ಕುಸಿತವನ್ನು ಕಂಡಿದ್ದರೆ ಭಾರತದಲ್ಲಿ ಮಾತ್ರ ಧಾರ್ಮಿಕತೆಯೊಂದಿಗೆ ಭವ್ಯ ಭಾರತ ನಿರ್ಮಾಣವಾಗುತ್ತಿದೆ ಎನ್ನುವುದು ಕಂಡುಬರುತ್ತಿದೆ ಎಂದು ತಿಳಿಸಿದರು.

ಇಂದಿನ ತಾಂತ್ರಿಕ ಯುಗದಲ್ಲಿ ಆರ್ಥಿಕವಾಗಿ ಸದೃಢರಾದಂತೆ ಐಶಾರಾಮಿ ಜೀವನಕ್ಕೆ ಮಾರುಹೋಗಿ ಧಾರ್ಮಿಕ ಪರಂಪರೆ, ಸಂಸ್ಕೃತಿ, ಸಂಸ್ಕಾರ ಹಾಗೂ ಭಕ್ತಿಯನ್ನು ಮರೆಯುತ್ತಿದ್ದೇವೆ. ಉನ್ನತ ಜೀವನ ನಡೆಸುವುದರೊಂದಿಗೆ ಇವೆಲ್ಲವನ್ನು ಎಲ್ಲರೂ ಮತ್ತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಮುಂದಿನ ಜನಾಂಗಕ್ಕೂ ಕೊಡುಗೆ ಆಗಿ ನೀಡಬೇಕಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ಕರ್ಜಗಿ ಗೌರಿಮಠ ಹಾಗೂ ನಗರದ ಗುರುಪಾದ ದೇವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಮಕ್ಕಳಿಗೆ ಆಸ್ತಿಯನ್ನು ಮಾಡದೇ ಅವರಿಗೆ ಉನ್ನತ ಶಿಕ್ಷಣ, ಧಾರ್ಮಿಕತೆ, ಸಂಸ್ಕೃತಿಯನ್ನು ಹಾಗೂ ಸಂಸ್ಕಾರ ನೀಡುವ ಮೂಲಕ ಅವರನ್ನೇ ಒಂದು ಆಸ್ತಿಯನ್ನಾಗಿ ಮಾಡಿರಿ ಎಂದರು.

ಅತಿಥಿಗಳ ಪರವಾಗಿ ನಗರಸಭೆ ಸದಸ್ಯ ಮಲ್ಲಿಕಾರ್ಜುನ ಸಾತೇನಹಳ್ಳಿ ಮಾತನಾಡಿ, ಟಿವಿ ಬಂದ ನಂತರ ಜನತೆ ವಿಶೇಷವಾಗಿ ಮಹಿಳೆಯರು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳ್ಳುವ ಸಂಖ್ಯೆ ಕ್ಷೀಣಿಸುತ್ತಿದೆ. ಟಿವಿಯಲ್ಲಿನ ದಾರವಾಹಿಗಳನ್ನು ನೋಡುವುದನ್ನು ಬಿಟ್ಟು ಇಂದಿನ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರೂ ಧನ್ಯವಾದಗಳು ಎನ್ನುವ ಮೂಲಕ ಜನತೆ ಧಾರ್ಮಿಕ ಕಾರ್ಯಗಳಿಂದ ದೂರವಿರುವುದು ಮತ್ತು ಟಿವಿಯಲ್ಲಿನ ಧಾರವಾಹಿಗಳಿಗೆ ಎಷ್ಟು ಮಾರು ಹೋಗಿದ್ದಾರೆ ಎನ್ನುವುದನ್ನು ಸೂಚ್ಯವಾಗಿ ಹೇಳಿದರು.

ಹರಸೂರು ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೂರು ದಿನಗಳ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಜಗದೀಶ ಕನವಳ್ಳಿ, ಉಪಾಧ್ಯಕ್ಷ ಶಿವಯೋಗಿ ಹುಲಿಕಂತಿಮಠ, ನಿಕಟಪೂರ್ವ ಅಧ್ಯಕ್ಷ ಮಹಲಿಂಗಸ್ವಾಮಿ ಹಿರೇಮಠ, ನಗರಸಭೆ ಸದಸ್ಯರಾದ ರೇಣುಕಾ ಪುತ್ರನ್‌, ಚೈತ್ರಾ ಹತ್ತಿ, ಚೌಡೇಶ್ವರಿ ಮಹಿಳಾ ಮಂಡಳದ ಅಧ್ಯಕ್ಷೆ ಶಾಂತಾ ದಾವಣಗೆರೆ ಪ್ರಸ್ತಾವಿಕವಾಗಿ ಮಾತನಾಡಿದರು. ಗಿರಿಜಾ ಸಾತೇನಹಳ್ಳಿ ಸ್ವಾಗತಿಸಿದರು. ನಾಗರಾಜ ನಡುವಿನಮಠ ನಿರ್ವಹಿಸಿದರು. ಎಸ್‌ಆರ್‌ಎಸ್‌ ಸ್ವರ ರಾಗ ಸಂಗಮ ಕಲಾ ಬಳಗದಿಂದ ಸಂಗೀತ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ಪೃಥ್ವಿ ನೃತ್ಯ ಲೋಕದ ಕಲಾವಿದರು ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.