ಮಹಾರಾಷ್ಟ್ರಾದ್ಯಂತ ನೀರಿನ ತೀವ್ರ ಕೊರತೆ


Team Udayavani, May 4, 2019, 3:32 PM IST

Water

ಮುಂಬಯಿ: ರಾಜ್ಯದಲ್ಲಿ ನೀರಿನ ಸಂಗ್ರಹವು ಅಪಾಯದ ಘಂಟೆಯನ್ನು ಹೊಡೆಯು ವಂತೆ ಮಾಡಿದೆ. ರಾಜ್ಯಾದ್ಯಂತ ಜಲಾಶಯಗಳಲ್ಲಿ ಶೇ.19.35ರಷ್ಟು ನೀರಿನ ಸಂಗ್ರಹ ಉಳಿದಿದ್ದು, ಮೇ ತಿಂಗಳಿನಿಂದ ರಾಜ್ಯದಲ್ಲಿ ನೀರಿನ ತೀವ್ರ ಕೊರತೆಯ ಅಪಾಯವು ಹೆಚ್ಚಾಗಲಾರಂಭಿಸಿದೆ.

ಕಳೆದ ವರ್ಷ ಶೇ. 20.79ರಷ್ಟು ನೀರಿನ ಸಂಗ್ರಹಣೆ ಯನ್ನು ಹೊಂದಿದ್ದ ಅಮರಾವತಿ ವಿಭಾಗದ ಜಲಾಶಯಗಳು ಈ ಬಾರಿ ಶೇ. 24.07ರಷ್ಟು ನೀರನ್ನು ಹೊಂದಿವೆ. ರಾಜ್ಯದಲ್ಲಿ ಔರಂಗಾಬಾದ್‌ ವಿಭಾಗವು ಅತಿ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಇಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟವು ಕಳೆದ ವರ್ಷದ ಶೇ. 28.2ರ ವಿರುದ್ಧ ಶೇ.5.14ಕ್ಕೆ ಕುಸಿದಿದೆ.

ನಾಗಪುರ ಪ್ರದೇಶವು ಎರಡನೇ ಅತಿ ಹೆಚ್ಚು ಪೀಡಿತ ಪ್ರದೇಶವಾಗಿದ್ದು, ಇಲ್ಲಿನ ಜಲಾಶಯಗಳಲ್ಲಿ ಶೇ.10.17ರಷ್ಟು ನೀರು ಉಳಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ನಾಗಪುರ ಪ್ರದೇಶವು ಶೇ.15.91ರಷ್ಟು ನೀರಿನ ಸಂಗ್ರಹ ಹೊಂದಿತ್ತು.
ನಾಸಿಕ್‌ನ ಜಲಾಶಯಗಳು ಕಳೆದ ವರ್ಷದ ಶೇ.32.66ರ ತುಲನೆಯಲ್ಲಿ ಈ ವರ್ಷ ಕೇವಲ ಶೇ.17.78ರಷ್ಟು ನೀರನ್ನು ಹೊಂದಿವೆ. ಕಳೆದ ವರ್ಷ ಈ ಅವಧಿಯಲ್ಲಿ ಶೇ.34.47ರಷ್ಟು ನೀರಿನ ಸಂಗ್ರಹವನ್ನು ಹೊಂದಿದ್ದ ಪುಣೆ ವಿಭಾಗದ ಜಲಾಶಯಗಳಲ್ಲಿ ಈ ವರ್ಷ ಶೇ.23.26ಕ್ಕೆ ಕುಸಿದಿವೆ. ಕೊಂಕಣ ಪ್ರದೇಶದ ಜಲಾಶಯಗಳಲ್ಲಿ ನೀರಿನ ಪರಿಸ್ಥಿತಿಯು ಸ್ವಲ್ಪ ಉತ್ತಮವಾಗಿದ್ದು, ಇಲ್ಲಿ ಕಳೆದ ವರ್ಷದ ಶೇ.47.57ರ ತುಲನೆಯಲ್ಲಿ ಈ ವರ್ಷ ಶೇ.40.58ರಷ್ಟು ನೀರಿನ ಸಂಗ್ರಹವಿದೆ.

ವೇಗವಾಗಿ ಒಣಗುತ್ತಿವೆ
ಮುಂಬಯಿ ನಗರಕ್ಕೆ ನೀರನ್ನು ಒದಗಿಸುವ ಜಲಾಶಯಗಳು ಕೂಡ ವೇಗವಾಗಿ ಒಣಗುತ್ತಿವೆ, ಆದರೆ ಈಗ ಸಾಕಷ್ಟು ನೀರು ಹೊಂದಿವೆ. ಮಧ್ಯ ವೈತರ್ಣದಲ್ಲಿ ಶೇ. 24.59, ಮೋಡಕ್‌ ಸಾಗರ್‌ನಲ್ಲಿ ಶೇ. 50.46, ಮತ್ತು ತಾನ್ಸಾದಲ್ಲಿ ಶೇ. 34ರಷ್ಟು ನೀರಿನ ಸಂಗ್ರಹವಿದೆ.

ಶೂನ್ಯ ಮಟ್ಟ
ಔರಂಗಾಬಾದ್‌ನಲ್ಲಿ ಹೆಚ್ಚಿನ ಜಲಾಶಯಗಳು ಒಣಗಿವೆ. ಪ್ರದೇಶದ ಎಂಟು ಪ್ರಮುಖ ಜಲಾಶ ಯಗಳ ಪೈಕಿ ಏಳು ಜಲಾಶಯಗಳಲ್ಲಿ ನೀರಿನ ಮಟ್ಟವು ಶೂನ್ಯಕ್ಕೆ ಇಳಿದಿದ್ದು, ಇದರಲ್ಲಿ ಅತಿದೊಡ್ಡ ಅಣೆಕಟ್ಟು ಜಯಕ್‌ವಾಡಿ ಕೂಡ ಸೇರಿದೆ. ಕೊಂಕಣದಲ್ಲಿ ಬಾತ್ಸಾ ಅಣೆಕಟ್ಟು ಕಳೆದ ವರ್ಷದ ಶೇ.43.2ರಷ್ಟು ನೀರಿನ ತುಲನೆಯಲ್ಲಿ ಪ್ರಸ್ತುತ ಶೇ. 37.91ರಷ್ಟು ನೀರಿನ ಸಂಗ್ರಹವನ್ನು ಹೊಂದಿದೆ.
ಔರಂಗಾಬಾದ್‌ನ ಹೊರತಾಗಿ, ರಾಧಾನಗರಿ ಅಣೆಕಟ್ಟು (ಶೇ. 32.67), ತುಳಸಿ ಅಣೆಕಟ್ಟು (ಶೇ.45.14) ಕೊಯ್ನಾ (ಶೇ. 38.6) ಸೇರಿದಂತೆ ರಾಜ್ಯಾದ್ಯಂತ ಜಲಾಶಯಗಳು ಕೂಡ ಒಣಗಲಾರಂಭಿಸಿದ್ದು, ನೀರಿನ ಕೊರತೆ ಹೆಚ್ಚಾಗಲಾರಂಭಿಸಿದೆ.

ರಾಜ್ಯ ಸರಕಾರದ ಮಾಹಿತಿಯ ಪ್ರಕಾರ, ರಾಜ್ಯದ ಜಲಾಶಯಗಳಲ್ಲಿ ನೀರು ವೇಗವಾಗಿ ಇಳಿಮುಖವಾಗುತ್ತಿದೆ. ಮಹಾರಾಷ್ಟ್ರದ ಎಲ್ಲ ಜಲಾಶಯಗಳಲ್ಲಿ ಕಳೆದ ವರ್ಷದ ಶೇ. 30.84ರಷ್ಟು ನೀರಿನ ತುಲನೆಯಲ್ಲಿ ಪ್ರಸ್ತುತ ಒಟ್ಟು ಶೇ.19.35 ರಷ್ಟು ನೀರು ಮಾತ್ರ ಉಳಿದಿದೆ.

ನಾಗಪುರದ ದೊಡ್ಡ ಜಲಾಶಯಗಳಲ್ಲಿ ಶೇ. 8.51ರಷ್ಟು ನೀರಿನ ಸಂಗ್ರಹವಿದೆ. ಮಧ್ಯಮ ಅಣೆಕಟ್ಟುಗಳು ಶೇ.15.22ರಷ್ಟು ನೀರಿನ ಸಂಗ್ರಹವನ್ನು ಹೊಂದಿವೆ. ರಾಜ್ಯಾದ್ಯಂತ ದೊಡ್ಡ ಜಲಾಶಯಗಳು ಕಳೆದ ವರ್ಷದ ಶೇ. 31.33ರ ತುಲನೆಯಲ್ಲಿ ಶೇ.17.54 ರಷ್ಟು ನೀರಿನ ಶೇಖರಣೆಯನ್ನು ಹೊಂದಿವೆ. ಮಧ್ಯಮ ಮಟ್ಟದ ಅಣೆಕಟ್ಟಿನಲ್ಲಿ ಕಳೆದ ವರ್ಷದ 31.08ರ ತುಲನೆಯಲ್ಲಿ ಶೇ. 28.33ರಷ್ಟು ನೀರು ಉಳಿದಿದೆ.

ಔರಂಗಾಬಾದ್‌ ಪ್ರದೇಶದ ದೊಡ್ಡ ಜಲಾಶಯಗಳಲ್ಲಿ ಕೇವಲ ಶೇ. 2.73ರಷ್ಟು ನೀರು ಮಾತ್ರ ಉಳಿದಿದೆ. ಅದೇ, ಮಧ್ಯಮ-ಮಟ್ಟದ ಅಣೆಕಟ್ಟುಗಳು ಶೇ. 8.51ರಷ್ಟು ನೀರಿನ ಸಂಗ್ರಹವನ್ನು ಹೊಂದಿವೆ ಎಂದು ಸರಕಾರದ ಮಾಹಿತಿಯು ಬಹಿರಂಗಪಡಿಸಿದೆ.

ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲು ನಾವು ಚುನಾವಣಾ ಆಯೋಗದ ಅನುಮತಿಯನ್ನು ಕೋರಿದ್ದೇವೆ. ಈ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ಅನಂತರ, ಪರಿಹಾರವನ್ನು ಒದಗಿಸಲಾಗುವುದು. ಜೂನ್‌ವರೆಗೆ ಬಳಸಬಹುದಾದ ಸಾಕಷ್ಟು ನೀರಿನ ಸಂಗ್ರಹವನ್ನು ನಾವು ಹೊಂದಿದ್ದೇವೆ. ಇಸಿಯಿಂದ ಅನುಮತಿ ಪಡೆಯಲು ವಿಫಲವಾದಲ್ಲಿ, ನಾವು ಖಾಸಗಿ ವಾಹನಗಳನ್ನು ಬಳಸಿ ಬರ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತೇವೆ ಮತ್ತು ಪರಿಹಾರ ಕ್ರಮಗಳನ್ನು ಕಂಡುಕೊಳ್ಳುತ್ತೇವೆ
-ಗಿರೀಶ್‌ ಮಹಾಜನ್‌ , ನೀರಾವರಿ ಸಚಿವ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.