4 ತಿಂಗಳಿಂದ ಅಸಮರ್ಪಕ ನೀರು ಪೂರೈಕೆ: ಪ್ರತಿಭಟನೆ


Team Udayavani, May 5, 2019, 3:00 AM IST

4tingalininda

ಗೌರಿಬಿದನೂರು: ಕುಡಿವ ನೀರು, ಬೀದಿದೀಪ, ಚರಂಡಿ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದ್ದು, ನಗರಸಭೆ ಕೂಡಲೇ ಸೂಕ್ತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ನಗರದ ಕೂಗಳತೆಯ ದೂರದಲ್ಲಿರುವ ಮಿಟ್ಟೆನಹಳ್ಳಿ ಬಡಾವಣೆ ಮಹಿಳೆಯರು ಕುಡಿಯುವ ನೀರಿನ ಕ್ಯಾನುಗಳನ್ನು ಪ್ರದರ್ಶಿಸಿ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭೆ ವ್ಯಾಪ್ತಿಗೆ ಬರುವ ಮಿಟ್ಟೆನಹಳ್ಳಿ ಬಡಾವಣೆಯಲ್ಲಿ (23ನೇ ವಾರ್ಡ) ಸುಮಾರು 100ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿನ ಜನತೆ ಕನಿಷ್ಠ ಮೂಲಭೂತ ಸೌಕರ್ಯಯಗಳಿಲ್ಲದೆ ಪರಿತಪಿಸುವಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.

4 ತಿಂಗಳಿಂದ ನೀರಿಲ್ಲ: ಕಳೆದ ಶಿವರಾತ್ರಿ ಹಬ್ಬದಿಂದ (ನಾಲ್ಕು ತಿಂಗಳಿಂದ)ಈವರೆಗೂ ಬಡಾವಣೆಗೆ ನೀರು ಸರಬರಾಜಾಗಿಲ್ಲ. ಅಮಾವಾಸ್ಯೆಗೋ, ಪೌರ್ಣಮಿಗೋ ಒಂದು ಟ್ಯಾಂಕರ್‌ ನೀರು ಬರುತ್ತದೆ. ಅದು ಸಿಕ್ಕರೆ ಸಿಕು¤, ಇಲ್ಲವಾದರೆ ಇಲ್ಲ. ಕುಡಿವ ನೀರಿಗಾಗಿ ಹಾಹಾಕಾರು ಶುರುವಾಗಿದೆ.

ಪ್ರತಿನಿತ್ಯ ಹಣ ಕೊಟ್ಟು ಎರಡು ಕ್ಯಾನ್‌ ನೀರು ಖರೀದಿಸಬೇಕು, ಕೂಲಿಯಲ್ಲಿ ಬರುವ ಹಣವೆಲ್ಲ ನೀರಿಗೆ ಇಟ್ಟರೆ ಹೊಟ್ಟೆಗೇನು ಮಾಡೋದು, ನಗರಸಭೆಯವರಿಗೆ ದೂರು ನೀಡಿದರೆ ಇಗೋ ಬಂತು ಟ್ಯಾಂಕರ್‌ ಅಂತಾರೆ. ಟ್ಯಾಂಕರೂ ಇಲ್ಲ ನೀರು ಇಲ್ಲ ಎಂದ ಮಹಿಳೆಯರು, ನಗರಸಭೆಗೆ ಹಿಡಿಶಾಪ ಹಾಕಿದರು.

ಸೊಳ್ಳೆಗಳ ತಾಣ: ಚರಂಡಿ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಆ ಸ್ಥಳಗಳು ಸೊಳ್ಳೆಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿವೆ. ಇಲ್ಲಿನ ಜನರು ಸಾಂಕ್ರಮಿಕ ರೋಗದ ಭೀತಿಯಲ್ಲಿ ದಿನದೂಡುವಂತಾಗಿದೆ ಎಂದು ಬಡಾವಣೆಯ ಗಂಗಮ್ಮ ಅಳಲು ತೋಡಿಕೊಂಡರು.

ಕಗ್ಗತ್ತಲು: ಬಡಾವಣೆಯಲ್ಲಿ ಸಂಜೆಯಾದರೆ ಕಗ್ಗತ್ತಲು ಆವರಿಸುತ್ತದೆ, ವಿದ್ಯುತ್‌ ಕಂಬಗಳಿದ್ದರೂ ಬೀದಿ ದೀಪಗಳು ಅಳವಡಿಸಿಲ್ಲ. ನಗರ ಮತ್ತು ಇನ್ನಿತರೆ ಹೊಲಗದ್ದೆಗಳಲ್ಲಿ ಕೂಲಿನಾಲಿ ಮಾಡಿಕೊಂಡು ಮನೆಗೆ ಬರುವಾಗ ಕಗ್ಗತ್ತಲು ಆವರಿಸಿರುತ್ತದೆ. ಬೆಳಕಿಲ್ಲದೇ ವಿಷಜಂತುಗಳ ಆತಂಕ ಕಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪರಿಹಾರ: ಸ್ಥಳಕ್ಕಾಗಮಿಸಿದ ನಗರಸಭೆ ಮಾಜಿ ಉಪಾಧ್ಯಕ್ಷ ಆರ್‌.ಪಿ.ಗೋಪಿನಾಥ್‌ ಮತ್ತು ನಗರ ನೀರು ಸರಬರಾಜು ವ್ಯವಸ್ಥಾಪಕ ಮುರಳಿ ಮಾತನಾಡಿ, ಇನ್ಮುಂದೆ ಸಮರ್ಪಕವಾಗಿ ನೀರು ಸರಬರಾಜು ಮಾಡುವುದರ ಜತೆಗೆ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರೂ ಮಹಿಳೆಯರು ಪ್ರತಿಭಟನೆ ಹಿಂಪಡೆಯಲಿಲ್ಲ.

ಕೆಲ ಕಾಲ ಮಹಿಳೆಯರು ಮತ್ತು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದರಿಂದ ಕೂಡಲೇ ಟ್ಯಾಂಕರ್‌ ಕಳುಹಿಸಲಾಗುವುದು. ಚರಂಡಿ ಸ್ವತ್ಛತೆಗೆ ಸಿಬ್ಬಂದಿಯನ್ನು ಕಳುಹಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ನಂತರ ನೀರಿನ ಟ್ಯಾಂಕರ್‌ ಕಳುಹಿಸಿದ ಬಳಿಕವಷ್ಟೇ ಪ್ರತಿಭಟನೆ ಹಿಂಪಡೆದರು.

ನಿತ್ಯ ನೀರಿಲ್ಲದೇ ಸ್ನಾನಕ್ಕೆ ಹಾಗೂ ಬಹಿರ್ದೆಸೆಗೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ನಾನ ವಾರಕ್ಕೊಮ್ಮೆ ಮಾಡಿಕೊಳ್ಳುವ ಪರಿಸ್ಥಿಗೆ ಬಂದಿದ್ದೇವೆ. ಸ್ವತ್ಛತೆ ಮರೀಚಿಕೆಯಾಗಿ ಸಾಂಕ್ರಮಿಕ ರೋಗದ ಭೀತಿ ಕಾಡುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ.
-ಪ್ರೇಮಮ್ಮ, ಬಡಾವಣೆಯ ನಿವಾಸಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.