ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿ: ಗಾಯ
Team Udayavani, May 5, 2019, 3:02 AM IST
ಆಲ್ದೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ಇದ್ದ ವಾಹನ ಪಲ್ಟಿಯಾಗಿ ನಾಲ್ವರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.
ಆಲ್ದೂರು ಸಮೀಪದ ಶಂಕರ್ ಫಾಲ್ಸ್ ತಿರುವಿನ ಬಳಿ ವಾಹನ ಪಲ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆರ್ಪಿಐ ಪ್ರದೀಪ್ಕುಮಾರ್, ಎಪಿಸಿ ಮೋಹನ್ಕುಮಾರ್, ಪ್ರೊಬೇಷನರಿ ಪಿಎಸ್ಐ ವಿರೂಪಾಕ್ಷಿ, ಚಾಲಕ ಗೋಪಾಲ್ ಗಾಯಗೊಂಡಿದ್ದು, ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಪ್ಪ ತಾಲೂಕಿನ ಕಮ್ಮರಡಿ ಸಮೀಪದ ಕುಡೆಲ್ಲಿಯ ಉಮಾಮಹೇಶ್ವರ ದೇವಸ್ಥಾನದಲ್ಲಿ ಶನಿವಾರ ದೇವೇಗೌಡರ ಕುಟುಂಬ ಕೈಗೊಂಡಿದ್ದ ಹೋಮದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ, ರಸ್ತೆ ಮಾರ್ಗವಾಗಿ ಹಾಸನ ಜಿಲ್ಲೆಗೆ ತೆರಳುತ್ತಿದ್ದರು.
ಸಿಎಂ ಪ್ರಯಾಣಿಸುತ್ತಿದ್ದ ವಾಹನದ ಹಿಂಭಾಗದಲ್ಲಿದ್ದ ಬೆಂಗಾವಲು ಪಡೆಯ ವಾಹನ ಶಂಕರ್ ಫಾಲ್ಸ್ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಲ್ಲಿ ತೆರಳುತ್ತಿದ್ದವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.