ಸ್ಮಾರ್ಟ್‌ ನಗರಿಯಲ್ಲೂ ಸ‌ೃಷ್ಟಿಯಾಗಲಿ ವರ್ಟಿಕಲ್‌ ಅರಣ್ಯ


Team Udayavani, May 5, 2019, 6:00 AM IST

VERTICAL-FOREST-1A-2

ಅತಿಯಾದ ಪಾಸ್ಟಿಕ್‌ ಬಳಕೆ, ಗಾಳಿ, ನೀರು ಮೊದಲಾದ ನೈಸರ್ಗಿಕ ಸಂಪನ್ಮೂಲಗಳನ್ನು ಹಾಳುಗಡವುತ್ತಿರುವ ಮಾನವ ಇದರಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾನೆ ಕೂಡ. ಇತ್ತೀಚೆಗೆ ಪರಿಸರ ರಕ್ಷಣೆಯ ಕುರಿತು ಅನೇಕ ಜಾಗೃತಿ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಅದು ಫ‌ಲಕಾರಿಯಾಗದೇ ಇರುವುದು ವಿಪರ್ಯಾಸ.

ಭವಿಷ್ಯದಲ್ಲಿ ಉಸಿರಾಡಲು ಶುದ್ಧ ಆಮ್ಲಜನಕಕ್ಕೂ ಮಾನವ ಪರದಾಡಬೇಕಾದ ಪರಿಸ್ಥಿತಿ ಬಂದೊದಗುವ ಸಾಧ್ಯತೆಗಳಿವೆ. ಪರಿಸರ ರಕ್ಷಣೆ ವಿಷಯದಲ್ಲಿ ಒಂದು ಹೊಸ ಕಲ್ಪನೆ ವರ್ಟಿಕಲ್‌ ಅರಣ್ಯ.

ಈ ವರ್ಟಿಕಲ್‌ ಅರಣ್ಯದ ನೆರವಿನಿಂದ ಜೀವಸಂಕುಲಕ್ಕೆ ಉಸಿರಾಡಲು ಶುದ್ಧ ಗಾಳಿಯ ಸೃಷ್ಟಿಯಾಗುತ್ತದೆ. ಈಗಾಗಲೇ ವಿದೇಶಗಳಲ್ಲಿ, ಭಾರತದ ಕೆಲವು ಕಡೆಗಳಲ್ಲಿ ಈ ವರ್ಟಿಕಲ್‌ ಅರಣ್ಯ ಯೋಜನೆ ಜಾರಿಯಾಗಿದ್ದು, ಕಟ್ಟಡಗಳಲ್ಲೇ ಗಿಡಮರಗಳನ್ನು ಬೆಳೆಸಿ ಶುದ್ಧ ಆಮ್ಲಜನಕದ ಸೃಷ್ಟಿಗೆ ಕಾರಣವಾಗುತ್ತದೆ. ಈ ವರ್ಟಿಕಲ್‌ ಅರಣ್ಯದಿಂದ ಪ್ರತಿದಿನ 132 ಪೌಂಡ್‌ಗಳಷ್ಟು (60 ಕೆ.ಜಿ.) ಶುದ್ಧ ಆಮ್ಲಜನಕವು ಉತ್ಪತ್ತಿಯಾಗುತ್ತದೆ.

ಏನಿದು ವರ್ಟಿಕಲ್‌ ಅರಣ್ಯ?
ನಗರ ಪ್ರದೇಶಗಳಲ್ಲಿ ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣದಿಂದ ಗಿಡಮರಗಳನ್ನು ಬೆಳೆಸಲು ಸ್ಥಳವಕಾಶಗಳೇ ಇಲ್ಲ. ಹೀಗಿರುವಾಗ ಗಿಡಮರಗಳಿಗಾಗಿ ಮನೆ ನಿರ್ಮಾಣ ಮಾಡುವುದೇ ವರ್ಟಿಕಲ್‌ ಅರಣ್ಯ. ಈ ಯೋಜನೆಯ ಮೂಲಕ ಕಟ್ಟಡಗಳಲ್ಲಿ ಗಿಡಮರಗಳ ಬೆಳೆಸಿ ಅವುಗಳನ್ನು ಪೋಷಿಸುವುದರಿಂದ ವಾತಾವರಣವೂ ಕೂಡ ತಂಪಾಗಿರುವುದಲ್ಲದೇ ಜಾಗತಿಕ ತಾಪಮಾನದ ಏರಿಕೆಯ ಪ್ರಮಾಣವನ್ನು ಕಡಿಮೆ ಮಾಡುಬಹುದಾಗಿದೆ. ನಗರದ ಪರಿಸರಕ್ಕೆ ಸೂಕ್ತವಾದ ಸಸ್ಯಗಳನ್ನು ಆಯ್ಕೆ ಮಾಡುವ ಮೂಲಕ ಈ ಪ್ರಕ್ರಿಯೆಯು ಆರಂಭವಾಗುತ್ತದೆ. ಇದರಿಂದ ಮರಗಳಿಗಾಗಿ ಮನೆಗಳನ್ನು ನಿರ್ಮಿಸಲಾಗುತ್ತದೆ. ಪ್ರಪಂಚದಾದ್ಯಂತ ಈ ಕಲ್ಪನೆಯೂ ಜಾರಿಯಾಗುತ್ತಿರುವುದರಿಂದ ಪರಿಸರ ರಕ್ಷಣೆಗೆ ಸಹಕರಿಯಾಗುತ್ತಿದೆ.

ಆರಂಭವಾಗಿದ್ದು ಇಟಲಿಯಲ್ಲಿ
ಈ ಯೋಜನೆ ಮೊದಲು ಕಾರ್ಯಗತವಾಗಿದ್ದು ಇಟಲಿಯಲ್ಲಿ. ಇದಕ್ಕೆ ಬೊಸ್ಕೊ ವರ್ಟಿಕಲೆ ಎಂದು ಹೆಸರಿಡಲಾಗಿತ್ತು. ಇಂಗ್ಲಿಷ್‌ನಲ್ಲಿ ವರ್ಟಿಕಲ್‌ ಫಾರೆಸ್ಟ್‌ ಎಂದು ಕರೆಯಾಲಾಗುತ್ತದೆ. ಈ ಟವರ್‌ ಹೌಸ್‌ನಲ್ಲಿ 900 ಮರಗಳು, 5,000 ಪೊದೆಗಳು ಮತ್ತು 11,000 ಹೂವಿನ ಸಸ್ಯಗಳಿವೆ. ಇದು ಹೊಗೆಯನ್ನು ತಗ್ಗಿಸಿ
ಆಮ್ಲಜನಕವನ್ನು ಉತ್ಪತ್ತಿ ಮಾಡಲು ಸಹಕರಿಸುತ್ತವೆ. ಇದರಲ್ಲಿ90ಕ್ಕಿಂತಲೂ ಹೆಚ್ಚಿನ ಜಾತಿಗಳ ಗಿಡಗಳಿದ್ದು, ಹಕ್ಕಿ ಮತ್ತು ಕೀಟಗಳನ್ನು ನಗರಕ್ಕೆ ಆಕರ್ಷಿಸುತ್ತವೆ. ಕಟ್ಟಡದ ಒಳಾಂಗಣದಲ್ಲಿ ಸೂರ್ಯನ ತಾಪಾಮಾನವನ್ನು ಬೇಸಗೆಯಲ್ಲಿ ಮಂದಗೊಳಿಸುತ್ತದೆ. ಶಬ್ದ ಮಾಲಿನ್ಯ ಮತ್ತು ಧೂಳಿನಿಂದ ಆಂತರಿಕ ಸ್ಥಳಗಳನ್ನು ಸಸ್ಯಗಳು ರಕ್ಷಿಸುತ್ತವೆ. ಈ ಕಟ್ಟಡವು ಸೌರ ಫ‌ಲಕಗಳಿಂದ ನವೀಕರಿಸಬಹುದಾದ ಶಕ್ತಿಯನ್ನು ಬಳಸಿ ಮತ್ತು ಕಟ್ಟಡಗಳ ಜೀವತಾವಧಿಯನ್ನು ಉಳಿಸಿಕೊಳ್ಳಲು ತ್ಯಾಜ್ಯ ನೀರನ್ನು ಫಿಲ್ಟರ್‌ ಮಾಡುವುದರ ಮೂಲಕ ಸ್ವಾವಲಂಬಿಯಾಗಿದೆ.

ಮಂಗಳೂರಿಗೂ ಬರಲಿ
ಮೊಟ್ರೋಪಾಲಿಟನ್‌ ನಗರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ದಿನೇ ದಿನೇ ಕಟ್ಟಡಗಳ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ವೇಳೆ ಮಂಗಳೂರಿನಲ್ಲೂ ವರ್ಟಿಕಲ್‌ ಅರಣ್ಯ ಯೋಜನೆ ಜಾರಿಯಾದರೇ ಮಂಗಳೂರು ಹಚ್ಚ ಹಸುರಿನಿಂದ ತುಂಬಿ ಶುದ್ಧ ಗಾಳಿಯೂ ಕೂಡ ಲಭ್ಯವಾಗಲಿದೆ. ಇದರೊಂದಿಗೆ ಪಕ್ಷಿ ಸಂಕುಲಕ್ಕೂ ಉಪಯುಕ್ತವಾದ ಪರಿಸರ ನಿರ್ಮಾಣವಾಗುವುದು. ಈ ಯೋಜನೆ ದುಬಾರಿಯೇನಲ್ಲ. ಹೀಗಾಗಿ ಎಲ್ಲಿ ಬೇಕಾದರೂ, ಯಾರು ಬೇಕಾದರೂ ಇದನ್ನು ನಿರ್ಮಿಸಬಹುದಾಗಿದೆ.

– ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.