ಮನುಷ್ಯ ಇತಿಹಾಸ ಅಧ್ಯಯನ ನಡೆಯಲಿ


Team Udayavani, May 5, 2019, 5:05 PM IST

nc-4

ಶಿರಸಿ: ಮನುಷ್ಯನ ಇತಿಹಾಸ ಅಧ್ಯಯನಕ್ಕೆ ಸಿಗುವ ಆಕರಗಳು ಕಡಿಮೆ. ಈ ಕಾರಣದಿಂದ ಡಿಎನ್‌ಎ ಸೇರಿದಂತೆ ವೈಜ್ಞಾನಿಕವಾಗಿಯೂ ಅಧ್ಯಯನದ ವಿಸ್ತಾರ ಆಗಬೇಕಾಗಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರಮೋದ ಗಾಯಿ ಹೇಳಿದರು.

ತಾಲೂಕಿನ ಸ್ವರ್ಣವಲ್ಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಇತಿಹಾಸ ಸಮ್ಮೇಳನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ದಿನದ 24 ಗಂಟೆಯಲ್ಲಿ ಇತಿಹಾಸದ ದಾಖಲೆ ಸಿಗುವುದು ಕೇವಲ ಒಂದು ನಿಮಿಷ ಮಾತ್ರ. ಉಳಿದವುಗಳಿಗೆ ದಾಖಲೆ ಇಲ್ಲ. ಈ ಕಾರಣದಿಂದ ಎಲುಬುಗಳು ಸಿಕ್ಕರೂ ಅದರ ಡಿಎನ್‌ಎ ನೋಡಿಯೂ ವಿಸ್ತಾರ ಮಾಡಿಕೊಳ್ಳಬೇಕು ಎಂದ ಅವರು, ಇದಕ್ಕಾಗಿ ಇತಿಹಾಸದ ವಿಸ್ತಾರ ಅಧ್ಯಯನ ನಡೆಯಬೇಕು ಎಂದು ಪ್ರತಿಪಾದಿಸಿದರು.

ಸಾಮಂತರ ಇತಿಹಾಸ ಸೇರಿದಂತೆ ಯಾವುದೇ ಇತಿಹಾಸದ ಅಧ್ಯಯನಗಳು, ಸಂಶೋಧನೆಗಳು ಹೆಚ್ಚಾದಂತೆ ಮಾನವನ ಉಗಮ ಕಂಡು ಹಿಡಿಯುವ ವಿಧಾನ ಕೂಡ ಬದಲಾಗುತ್ತವೆ. ಇದಕ್ಕಾಗಿ ಜಗತ್ತಿನಲ್ಲಿ ಸತತ ಪ್ರಯತ್ನ ಆಗುತ್ತಿದೆ. ಇತಿಹಾಸ ಶೋಧನೆಗಳು ಆಕರಗಳು ಬೇಕಿದೆ. ಮಾನವನ ಗತ ಕಾಲದ ಬದುಕಿನಲ್ಲಿ ನಡೆದ ಘಟನೆಗಳು ಆಧರಿಸಿ ಅಧ್ಯಯನ ನಡೆಯುತ್ತದೆ ಎಂದರು.

ಇತಿಹಾಸ ತಜ್ಞ ಡಾ| ಅ.ಸುಂದರ್‌ ಮಾತನಾಡಿ, ಭಾರತೀಯ ಶಿಲ್ಪಗಳಲ್ಲಿ ವೈಜ್ಞಾನಿಕವಾಗಿಯೇ ಆಧ್ಯಾತ್ಮಿಕತೆ ಅಳವಡಿಸಿಕೊಳ್ಳಲಾಗಿದೆ ಎಂದರು.

ಇತಿಹಾಸ ಅಕಾಡೆಮಿ ಅಧ್ಯಕ್ಷ ದೇವರಕೊಂಡಾರೆಡ್ಡಿ, ರಾಷ್ಟ್ರಕೂಟರು ಹಾವೇರಿ ಮತ್ತು ಉತ್ತರ ಕನ್ನಡ ಭಾಗಕ್ಕೆ ವಲಸೆ ಬಂದಿದ್ದರು. ಅವರು ಏಕೆ ಇಲ್ಲಿ ಬಂದರು ಎಂಬ ಬಗ್ಗೆ ಇದುವರೆಗೂ ಹೆಚ್ಚಿನ ಸಂಶೋಧನೆಗಳು ಆಗಿಲ್ಲ. ಅವರ ಅವಧಿಯಲ್ಲಿ ಸ್ಥಾಪಿಸಿರುವ ಕೋಣನ ತಲೆ ಕಲ್ಲುಗಳ ಬಗ್ಗೆ ಅಧ್ಯಯನ ಮಾಡಲು ಯುವ ಸಂಶೋಧಕರಿಗೆ ಅವಕಾಶವಿದೆ ಎಂದರು.

ಐಸಿಎಚ್ಆರ್‌ ಸದಸ್ಯ ಡಾ| ಎಂ. ಕೊಟ್ರೇಶ, ಇಡೀ ಕರ್ನಾಟಕ ಪ್ರಾದೇಶಿಕ ಇತಿಹಾಸಕ್ಕೆ ಐತಿಹಾಸಿಕ ಸಮ್ಮೇಳನ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ. ಹೆಗಡೆ, ನೆಲ, ಜಲ ವೃಕ್ಷಕ್ಕೆ ಅದರದ್ದೇ ಆದ ಇತಿಹಾಸ ಮಹತ್ವವಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಚಾಲಕ ಇತಿಹಾಸ ತಜ್ಞ ಲಕ್ಷ್ಮೀಶ ಹೆಗಡೆ ಸೋಂದಾ, ಪ್ರಾದೇಶಿಕ ಇತಿಹಾಸಗಳನ್ನು ಜೋಡಿಸುವ ಕಾರ್ಯ ಇದು. ಇತಿಹಾಸ ಅಕಾಡೆಮಿ, ಇತಿಹಾಸ ಕಾಂಗ್ರೆಸ್‌ ಬಿಟ್ಟರೆ ಜಾಗೃತ ವೇದಿಕೆಯೇ ಸಮ್ಮೇಳನ, ಇತಿಹಾಸ ಜಾಗೃತಿ ಮಾಡುತ್ತಿದೆ ಎಂದರು. ಸಂಸ್ಕೃಗಳ ಚಿಂತಕ ಬಾಲಸುಬ್ರಹ್ಮಣ್ಯ ಕೆಸ್ತೂರು, ಮಠದ ಅಧ್ಯಕ್ಷ ವಿ.ಎನ್‌. ಹೆಗಡೆ ಬೊಮ್ಮನಳ್ಳಿ, ಚಂದ್ರರಾಜ ಜೈನ್‌, ಎನ್‌.ಎನ್‌. ಹೆಗಡೆ ವಾಜಗದ್ದೆ, ಎನ್‌.ಎನ್‌. ಹೆಗಡೆ ಕಲಗದ್ದೆ, ಸುಧೀರ ಪರಂಜಪೆ, ರತ್ನಾಕರ ಬಾಡಲಕೊಪ್ಪ ಇದ್ದರು. ವಿನಾಯಕ ಎಂ. ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.