ಗಣೇಶ್‌ ಮೊಗದಲ್ಲಿ ನಗು

99ರಲ್ಲಿ 100 ಪರ್ಸೆಂಟ್‌ ಖುಷಿ

Team Udayavani, May 6, 2019, 3:00 AM IST

ganesh

ಗಣೇಶ್‌ ನಾಯಕರಾಗಿರುವ “99′ ಚಿತ್ರ ತೆರೆಕಂಡಿರೋದು ನಿಮಗೆ ಗೊತ್ತೇ ಇದೆ. ಹೊಸ ಬಗೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಗಣೇಶ್‌ ಮುಖದಲ್ಲಿ ಈಗ ನಗು ಮೂಡಿದೆ. ಅದಕ್ಕೆ ಕಾರಣ ಸಿನಿಮಾ ನೋಡಿದವರಿಂದ ಸಿಗುತ್ತಿರುವ ಪ್ರತಿಕ್ರಿಯೆ.

ಹೌದು, ಗಣೇಶ್‌ ಅವರ ಗೆಟಪ್‌, ಪಾತ್ರ ಪೋಷಣೆ ಮಾಡಿದ ರೀತಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಗಣೇಶ್‌ ಅವರ ಯಶಸ್ಸಿನ ಪಾತ್ರಗಳ ಲಿಸ್ಟ್‌ಗೆ “99′ ಕೂಡಾ ಸೇರ್ಪಡೆಗೊಂಡಿದೆ. ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲೆಮಾರಿ ಪಾತ್ರದಲ್ಲಿ ಗಣೇಶ್‌ ಕಾಣಿಸಿಕೊಂಡಿದ್ದಾರೆ.

ಟ್ರಾವೆಲ್‌ ಫೋಟೋಗ್ರಾಫ‌ರ್‌ ಪಾತ್ರ. ಫೋಟೋಗ್ರಫಿ ಹೇಗೆ ಮಾಡುವುದು ಎಂದು ಸಲಹೆ ಕೊಡುವವನ ಜೀವನದ ಕಥೆ. ಆ ಕಥೆ ಪ್ರತಿಯೊಬ್ಬರಿಗೂ ರಿಲೇಟ್‌ ಆಗುವಷ್ಟರ ಮಟ್ಟಿಗೆ ಪರಿಣಾಮ ಬೀರುತ್ತಿದ್ದು, ಸಿನಿಮಾ ನೋಡಿದವರಿಗೆ ತಮ್ಮ ಸ್ಕೂಲ್‌ ಡೇಸ್‌ ನೆನಪಾಗುತ್ತಿದೆ.

ನನ್ನ ಮಟ್ಟಿಗೆ ಇದು ಹೊಸ ಬದಲಾವಣೆಯ ಸಿನಿಮಾ. ಜನ ಮೆಚ್ಚಿಕೊಂಡು, ಖುಷಿಪಟ್ಟಿದ್ದಾರೆ. ಚಿತ್ರದ ಹಾಡುಗಳನ್ನು ಕೂಡಾ ಜನ ಇಷ್ಟಪಟ್ಟಿದ್ದಾರೆ. ಸಿನಿಮಾ ಹೆಸರು 99 ಆಗಿರಬಹುದು. ಆದರೆ, ಪ್ರೇಕ್ಷಕರಿಂದ 100 ಪರ್ಸೆಂಟ್‌ ಪ್ರತಿಕ್ರಿಯೆ ಸಿಗುತ್ತಿದೆ ಎನ್ನುವುದು ಗಣೇಶ್‌ ಮಾತು.

ಇನ್ನು, ನಿರ್ಮಾಪಕ ರಾಮು ಕೂಡಾ ಚಿತ್ರದ ಬಗ್ಗೆ ಖುಷಿಯಾಗಿದ್ದಾರೆ. ಕಲೆಕ್ಷನ್‌ ವಿಷಯದಲ್ಲೂ ಚಿತ್ರ ಹಿಂದೆ ಬಿದ್ದಿಲ್ಲ. ಒಳ್ಳೆಯ ಕನ್ನಡ ಸಿನಿಮಾಗಳನ್ನು ಕನ್ನಡ ಪ್ರೇಕ್ಷಕ ಕೈ ಬಿಡಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾಗಿದೆ ಎನ್ನುವುದು ಅವರ ಮಾತು.

ಗಣೇಶ್‌ ನಾಯಕರಾಗಿರುವ ಈ ಚಿತ್ರದಲ್ಲಿ ಭಾವನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತದ 100 ಸಿನಿಮಾವಿದು. ಗಣೇಶ್‌ ಮತ್ತು ಭಾವನಾ ಈಗಾಗಲೇ “ರೊಮಿಯೋ’ ಎಂಬ ಯಶಸ್ಸಿನ ಚಿತ್ರ ಕೊಟ್ಟವರು.

ನಿರ್ದೇಶಕ ಪ್ರೀತಂ ಗುಬ್ಬಿ ಮತ್ತು ಗಣೇಶ್‌ ಕಾಂಬಿನೇಷನ್‌ನಲ್ಲಿ “ಮಳೆಯಲಿ ಜೊತೆಯಲಿ’ ಕೂಡ ಯಶಸ್ಸು ಪಡೆದಿತ್ತು. ಈಗ ಅದೇ ಸಕ್ಸಸ್‌ ಕಾಂಬಿನೇಷನ್‌ನಲ್ಲಿ “99′ ಬಿಡುಗಡೆಯಾಗಿದ್ದು, ಯಶಸ್ಸಿನತ್ತ ದಾಪುಗಾಲು ಹಾಕುತ್ತಿದೆ. ನಿರ್ಮಾಪಕ ರಾಮು ಬ್ಯಾನರ್‌ನಲ್ಲಿ ಗಣೇಶ್‌ ಅವರ ಮೊದಲ ಸಿನಿಮಾವಿದು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.