ಬಣಗುಡುತ್ತಿರುವ ಸಿದ್ದಯ್ಯನಪುರದ ನಾಲ್ಕು ಕೆರೆಗಳು


Team Udayavani, May 6, 2019, 3:00 AM IST

banaguduti

ಕೊಳ್ಳೇಗಾಲ: ಒಂದು ಗ್ರಾಮದಲ್ಲಿ ಒಂದು ಕೆರೆ ಇರುವುದೇ ಹೆಚ್ಚು ಆದರೆ ತಾಲೂಕಿನ ಸಿದ್ದಯ್ಯನಪುರದಲ್ಲಿ ಪುರಾತನ ಕಾಲದಿಂದಲೂ ನಾಲ್ಕು ಕೆರೆಗಳು ಇವೆ. ಆದರೆ ಕೆರೆಗಳು ಯಾವುದೇ ರೀತಿ ಅಭಿವೃದ್ಧಿಯಾಗದೆ ಬತ್ತಿಹೋಗಿ, ರೈತರಿಗೆ ಮತ್ತು ದನ-ಕರುಗಳಿಗೆ ನೀರು ಇಲ್ಲದೆ ಗಿಡಗಂಟಿಗಳು ಬೆಳೆದು ನಿಂತಿದೆ.

ತಾಲೂಕಿನಲ್ಲಿ ಸಿದ್ದಯ್ಯನಪುರ ಗ್ರಾಮ ಅತ್ಯಂತ ದೊಡ್ಡ ಗ್ರಾಮವಾಗಿದ್ದು, ಇಲ್ಲಿ ಗ್ರಾಮ ಪಂಚಾಯಿತಿಯನ್ನು ಒಳಗೊಂಡಿದೆ. ಗ್ರಾಮದಲ್ಲಿ ಗೂಗಲಕಟ್ಟೆ ಕೆರೆ, ಎರಡು ಬಸವನಗುಡಿ ಕೆರೆ, ಈರಯ್ಯನ ಕೆರೆ ಒಟ್ಟು ನಾಲ್ಕು ಕೆರೆಗಳು ಗ್ರಾಮದ ಹಿಂಬದಿಯಲ್ಲಿರುವ ಬಸವನಗುಡಿ ದೇವಸ್ಥಾನದ ಬಳಿ ನಿರ್ಮಾಣವಾಗಿದೆ.

ಗ್ರಾಮಸ್ಥರು ತಮ್ಮ ಜಮೀನುಗಳಿಗೆ ತೆರಳಲು ಇದೇ ದೇವಸ್ಥಾನದ ಮುಂಬದಿಯಲ್ಲಿಯೇ ತೆರಳಬೇಕಾಗಿದ್ದು, ತಮ್ಮ ಜಾನುವಾರುಗಳನ್ನು ಗದ್ದೆ ಬಯಲಿಗೆ ಮೇವಿಗಾಗಿ ತೆರಳುವ ವೇಳೆ ಜಾನುವಾರುಗಳು ಇಲ್ಲೇ ನೀರನ್ನು ಕುಡಿದು ಹೋಗುತ್ತವೆ ಮತ್ತು ತುಂಬಿದ ಕೆರೆಯ ನೀರನ್ನು ಸುತ್ತಮುತ್ತಲಿನ ರೈತರು ಜಮೀನುಗಳಿಗೆ ಹರಿಸಿಕೊಂಡು ಫ‌ಸಲ ತೆಗೆಯುವುದು ವಾಡಿಕೆ.

ಪ್ರಯೋಜನಕ್ಕೆ ಬಾರದ ಕೆರೆಗಳು:ಇತ್ತೀಚಿನ ದಿನಗಳಲ್ಲಿ ಫೋನಿ ಚಂಡಮಾರುತ ಎದ್ದರೂ ಸಹ ಸಮರ್ಪಕ ಮಳೆಯಾಗದೆ ಕೆರೆಯಲ್ಲಿ ಒಂದು ಹನಿ ನೀರಿಲ್ಲದೆ ಸಂಪೂರ್ಣ ಗಿಡಗಂಟಿಗಳು ಬೆಳೆದು ಅಭಿವೃದ್ಧಿಯೇ ಇಲ್ಲದೆ ಯಾವುದಕ್ಕೂ ಪ್ರಯೋಜನವಾಗದೆ ಬರಿದಾದ ಕೆರೆಯಾಗಿವೆ.

ರೈತರಲ್ಲಿ ಆತಂಕ: ಕೆರೆಗಳು ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ ಇಲಾಖೆ, ಕಾವೇರಿ ಮತ್ತು ಕಬಿನಿ ನಾಲಾ ವಿಭಾಗ ಮತ್ತು ಗ್ರಾಮ ಪಂಚಾಯಿತಿಗೆ ಒಳಪಡುವುದೇ ಎಂಬ ಗೊಂದಲದಲ್ಲಿ ಸಿಲುಕಿರುವ ಗ್ರಾಮದ ರೈತರು ಯಾರೂ ಸಹ ಕೆರೆಗಳತ್ತ ಗಮನ ಹರಿಸದೆ ಇರುವುದು ವಿಪರ್ಯಾಸವೇ ಸರಿ, ನೀರಿಲ್ಲದೆ ಗ್ರಾಮದಲ್ಲಿ ಜನರು ಹಾಗೂ ಜಾನುವಾರುಗಳು ಪರದಾಡುತ್ತಿವೆ ಎಂದು ರೈತರು ತಮ್ಮ ಆತಂಕವನ್ನು ತೊಡಿಕೊಂಡಿದ್ದಾರೆ.

ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ: ಗ್ರಾಮದ ರೈತರು ಹಲವಾರು ಬಾರಿ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕೆರೆ ಅಭಿವೃದ್ಧಿ ಪಡಿಸಬೇಕೆಂದು ಹಲವಾರು ಬಾರಿ ದೂರುಗಳನ್ನು ಸಲ್ಲಿಸಿದರೂ ಸಹ ಯಾರು ಇದರ ಬಗ್ಗೆ ಗಮನಹರಿಸದೆ ಇರುವುದು ಕುಂಠಿತಕ್ಕೆ ಕಾರಣವಾಗಿದೆ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಕಬಿನಿ ನಾಲೆ ನೀರೆ ಗತಿ: ಮಳೆಗಾಲದಲ್ಲಿ ಕಬಿನಿ ಮತ್ತು ಇನ್ನಿತರ ಜಲಾಶಯಗಳು ಭರ್ತಿಗೊಂಡು ಹೆಚ್ಚುವರಿ ನೀರನ್ನು ಕಾವೇರಿ ನದಿ ಮತ್ತು ಕಬಿನಿ ನಾಲೆ ಮೂಲಕ ನೀರನ್ನು ಹರಿದು ಬಿಟ್ಟಾಗ ಮಾತ್ರ ಗ್ರಾಮದ ಎಲ್ಲಾ ಕೆರೆಗಳು ಭರ್ತಿಯಾಗುತ್ತದೆ. ಇಲ್ಲವಾದ ಪಕ್ಷದಲ್ಲಿ ಕೆರೆಯನ್ನು ನೋಡುವವರಾಗಲಿ, ಕೇಳುವವರಾಗಲಿ ದಿಕ್ಕಿಲ್ಲದಂತೆ ಆಗಿದೆ.

ಯಾವುದೇ ಗ್ರಾಮದಲ್ಲಿ ನಾಲ್ಕು ಕೆರೆಗಳು ಇರುವುದಿಲ್ಲ. ಆದರೆ ಸಿದ್ದಯ್ಯನಪುರದಲ್ಲಿ ಹೆಚ್ಚು ಜನರು ಜಮೀನು ಹೊಂದಿದ್ದು, ರೈತರ ಅನುಕೂಲಕ್ಕಾಗಿ ನಾಲ್ಕು ಕೆರೆಗಳು ಇದೆ. ಇದನ್ನು ಹೂಳೆತ್ತುವ ಮತ್ತು ಗಿಡಗಂಟಿಗಳನ್ನು ತೆರವು ಮಾಡುವ ಪ್ರಯತ್ನ ಮಾಡದೆ ಇರುವುದರಿಂದ ಅಭಿವೃದ್ಧಿಯಲ್ಲಿ ಕುಂಠಿತವಾಗಿದ್ದು, ಕೆರೆಯಿಂದ ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ.
-ರಾಚಯ್ಯ, ರೈತ ಮುಖಂಡ

ಕೆರೆಗಳು ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ ಅಥವಾ ಗ್ರಾಮ ಪಂಚಾಯಿತಿಗೆ ಯಾವುದಕ್ಕೆ ಸೇರಿದ್ದರೂ ಸಹ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನ ಸೆಳೆದು ಬತ್ತಿಹೋಗಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು.
-ಶಿವಮ್ಮ, ಜಿಪಂ ಅಧ್ಯಕ್ಷೆ

* ಡಿ.ನಟರಾಜು

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.