ನನ್ನ ಬಗ್ಗೆ “ಕೈ” ನಾಯಕರಿಗೆ ಚಿಂತೆ ಯಾಕೆ, ಫಲಿತಾಂಶ ಬರಲಿ: ಬಿಎಸ್ ವೈ
Team Udayavani, May 6, 2019, 6:39 PM IST
ಕಲಬುರಗಿ: ಸರ್ಕಾರ ಬೀಳಲಿ ಅಂತಾ ನಾ ಹಗಲುಗನಸ್ಸು ಕಾಣುತ್ತಿಲ್ಲ. ಅವರವರೆ ಅಸಮಾಧಾನಗೊಂಡು ಸರ್ಕಾರ ಬೀಳಿಸ್ತಾರೆ ಎಂದು ಬಿಎಸ್ ಯಡಿಯೂರಪ್ಪ ಮತ್ತೆ ಭವಿಷ್ಯ ನುಡಿದಿದ್ದಾರೆ.
ಲೋಕಸಭೆ ಫಲಿತಾಂಶದ ಬಳಿಕ ಬಿಎಸ್ವೈ ಅವರನ್ನು ಸೈಡ್ಲೈನ್ ಮಾಡಲಾಗುತ್ತದೆ ಎಂಬ ಕೈ ನಾಯಕರ ಹೇಳಿಕೆ ವಿಚಾರವಾಗಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರಿಗೆ ನನ್ ಬಗ್ಗೆ ಯಾಕೆ ಚಿಂತೆ, ಅವರ ಬಗ್ಗೆ ಅವರೆ ಮೊದಲು ಚಿಂತೆ ಮಾಡಲಿ ಎಂದು ತಿರುಗೇಟು ನೀಡಿದರು.
ಲೋಕಸಭಾ ಚುನಾವಣೆ ಮತ್ತು ವಿಧಾನ ಸಭೆ ಉಪಚುನಾವಣೆಯ ನಂತ್ರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಕಾಂಗ್ರೆಸ್ ನ 20 ಕ್ಕೂ ಹೆಚ್ಚು ಶಾಸಕರು ಸಮಾಧಾನಗೊಂಡಿದ್ದಾರೆ. ಮುಂದೇನಾಗುತ್ತದೋ ಕಾದು ನೋಡೋಣ.. ಫಲಿತಾಂಶದ ನಂತ್ರ ಏನು ಬೇಕಾದ್ರೂ ಆಗಬಹುದು ಎಂದರು.
ಆದ್ರೆ ಅಧಿಕಾರದ ಆಸೆಗಾಗಿ ಯಾವುದೇ ಕಾರಣಕ್ಕೂ ವಿಶ್ವಾಸ ದ್ರೋಹಿಗಳೊಂದಿಗೆ ಕೈಜೋಡಿಸಲಾರೆ. ಈ ಹಿಂದೆ ನನಗೆ ದ್ರೋಹ ಮಾಡಿರುವ ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ ಎಂದು ಹೇಳಿದರು.
ಜೂನ್ ನಲ್ಲಿ ಯಡಿಯೂರಪ್ಪ ಅಧಿಕಾರ ಅವಧಿ ಪೂರ್ಣಗೊಳ್ಳುವ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ನಾಯಕರು ಕೈಗೊಳ್ಳುವ ಕ್ರಮಕ್ಕೆ ಬದ್ಧರಾಗಿರುತ್ತೇವೆ. ರಾಜ್ಯಾಧ್ಯಕ್ಷ ಅಲ್ಲದಿದ್ದರೂ, ವಿರೋಧ ಪಕ್ಷದ ನಾಯಕನಾಗಂತೂ ಇದ್ದೇ ಇರ್ತೆನೆ. ನನ್ನ ಅವಧಿ, ಅಧ್ಯಕ್ಷಗಾದಿ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.