ಅನೈತಿಕ ಚಟುವಟಿಕೆ ತಾಣವಾದ ಸರ್ಕಾರಿ ಕಟ್ಟಡ


Team Udayavani, May 7, 2019, 3:00 AM IST

anitika

ಸಂತೆಮರಹಳ್ಳಿ: ಸಂತೆಮರಹಳ್ಳಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನದಾನ, ವಿದ್ಯಾದಾನ ನೀಡಿದ ವಸತಿ ಶಾಲೆ ಇಂದು ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

15 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ: ಹೋಬಳಿ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಮಾರ್ಗ ಮಧ್ಯೆ ರೇಷ್ಮೆಗೂಡಿನ ಮಾರುಕಟ್ಟೆ ಮುಂಭಾಗ ಎರಡು ಸುಸಜ್ಜಿತವಾದ ಕಟ್ಟಡಗಳಿವೆ. ಇದಕ್ಕೆ ಸುತ್ತು ಗೋಡೆಯ ವ್ಯವಸ್ಥೆಯೂ ಇದೆ. 3 ಎಕರೆ ವಿಸ್ತೀರ್ಣದಲ್ಲಿ ಮೈದಾನವಿದೆ. ಕುಡಿಯುವ ನೀರಿನ ವ್ಯವಸ್ಥೆಯೂ ಉತ್ತಮವಾಗಿದೆ.

ಇಷ್ಟಿದ್ದರೂ ರೇಷ್ಮೆ ಇಲಾಖೆಗೆ ಸೇರಿದ ಈ ಕಟ್ಟಡಗಳನ್ನು 2005ನೇ ಸಾಲಿನಲ್ಲಿ ಆಗಿನ ಸಂತೆಮರಳ್ಳಿ ಕೇತ್ರದ ಶಾಸಕರಾಗಿದ್ದ ಆರ್‌. ಧ್ರುವನಾರಾಯಣರ ಒತ್ತಾಯದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರೇಷ್ಮೆ ಇಲಾಖೆಯಿಂದ ಪಡೆದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಪಡಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸ‌ಲಾಗಿತ್ತು.

ರೇಷ್ಮೆ ಇಲಾಖೆ ನಿರ್ಲಕ್ಷ್ಯ: ನಂತರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಲಕ್ಷಾಂತರ ಹಣ ಖರ್ಚುಮಾಡಿ ವಿದ್ಯುತ್‌ ಸಂಪರ್ಕ, ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆಗೆ ಸೋಲಾರ್‌ ಅಳವಡಿಸಿರುವ ಬಗ್ಗೆ ದಾಖಲೆಗಳಿವೆ. ಕಳೆದ ಎರಡು ವರ್ಷದಿಂದ ವಸತಿ ಶಾಲೆಯನ್ನು ತೆರವುಗೊಳಿಸಿ ಪಕ್ಕದ ಉಮ್ಮತ್ತೂರು ಹೊರ ವಲಯದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು.

ತಕ್ಷಣವೇ ಕಟ್ಟಡವನ್ನು ರೇಷ್ಮೆ ಇಲಾಖೆ ವಶಪಡಿಸಿಕೊಂಡು ರಕ್ಷಣೆ ಒದಗಿಸಬೇಕಾಗಿತ್ತು, ಆದರೆ ಈ ಕೆಲಸ ಮಾಡಲು ವಿಫ‌ಲವಾದ ಇಲಾಖೆ ಬೇಜವಾಬ್ದಾರಿತನದಿಂದ ಕಟ್ಟಡದಲ್ಲಿದ್ದ ಬೆಲೆಬಾಳುವ ಕಿಟಕಿ, ಬಾಗಿಲು ಮತ್ತು ವಿದ್ಯುತ್‌ ಸಂಪರ್ಕದ ವಸ್ತುಗಳು ಕಳ್ಳರ ಪಾಲಾಗಿದೇಯೋ ಅಥವಾ ಅಲ್ಲಿ ಕೆಲಸ ನಿರ್ವಸುತ್ತಿದ ಸಿಬ್ಬಂದಿ ಪಾಲಾಗಿದೆಯೋ ಎಂಬುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಏಳು ವರ್ಷ ವಿದ್ಯಾದಾನ: ಏಳು ವರ್ಷಗಳ ಕಾಲ ಈ ಕಟ್ಟಡದಲ್ಲಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಇಂದು ಆ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಆದರೆ ಕಟ್ಟಡ ಮಾತ್ರ ಅನಾಥವಾಗಿದೆ. ತಾಲೂಕು ಸಮಾಜ ಕಲ್ಯಾಣ ಇಲಾಖೆ ಈ ಕಟ್ಟಡದ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದು, ಕಟ್ಟಡಕ್ಕೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫ‌ಲರಾದ ಕಾರಣ ಇಂದು ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ನಿವಾಸಿಗಳಿಗೆ ಮುಜುಗರ: ಸುತ್ತಮುತ್ತಲ ನಿವಾಸಿಗಳು ತುಂಬಾ ಮುಜುಗರದಿಂದ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಈ ಕಟ್ಟಡವನ್ನು ಸಾರ್ವಜನಿಕರ ಕೆಲಸಕ್ಕಾಗಲಿ ಅಥವಾ ವಿಧ್ಯಾರ್ಥಿಗಳ ಅನುಕೂಲಕ್ಕೆ ಬಳಕೆ ಯಾಗಲಿ ಎಂಬುದು ಸ್ಥಳೀಯ ನಿವಾಸಿಗಳಾದ ಮೂರ್ತಿ, ಹಾಗು ನಾಗೇಂದ್ರ ಅವರ ಒತ್ತಾಯವಾಗಿದೆ. ಈ ಬಗ್ಗೆ ಜಿಲ್ಲಾ ಆಡಳಿತ ಈ ಕಟ್ಟಡವನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಬಳಕೆ ಮಾಡಲು ಮುಂದಾಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಸರ್ಕಾರಿ ಆಸ್ತಿ ರಕ್ಷಣೆಯಾಗಲಿ: ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡಗಳನ್ನು ಆಯುಕ್ತರ ಆದೇಶದ ಮೇರೆಗೆ ಸಮಾಜಕಲ್ಯಾಣ ಇಲಾಖೆಗೆ ಕಳೆದ 9 ವರ್ಷಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಗೆ ಮೊರಾರ್ಜಿದೇಸಾಯಿ ವಸತಿ ಶಾಲೆ ನಡೆಸಲು ನೀಡಲಾಗಿತ್ತು ಆದರೆ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ನಮ್ಮ ಇಲಾಖೆಗೆ ಅಧಿಕೃತವಾಗಿ ಹಸ್ತಾಂತರಿಸಿರುವುದಿಲ್ಲ, ಹಾಗಾಗಿ ರಕ್ಷಣೆ ನೀಡಿ ಸಾರ್ವಜನಿಕರ ಬಳಕೆಗೆ ಕಾನೂನು ತೊಡಕುಂಟಾಗಿದೆ ಎಂದು ರೇಷ್ಮೆ ಇಲಾಖೆ ಅಧಿಕಾರಿಗಳು ಸಬೂಬು ನೀಡುತ್ತಾರೆ.

ಈಗಲಾದರೂ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಒಡಂಬಡಿಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಎರಡೂ ಕಟ್ಟಡಗಳನ್ನು ಸಮರ್ಪಕವಾಗಿ ಬಳಕೆಮಾಡಿಕೊಳ್ಳುವತ್ತ ಗಮನ ಹರಿಸಲಿ ಎಂಬುದು ವೆಂಕಟೇಶ, ಸುಂದರೇಶ ಸೇರಿದಂತೆ ಹಲವು ಸಾರ್ವಜನಿಕರ ಒತ್ತಾಸೆಯಾಗಿದೆ.

ರೇಷ್ಮೆ ಇಲಾಖೆ ವ್ಯಾಪ್ತಿಯ ಈ ಕಟ್ಟಡವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಬೇರೆಡೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ನಮ್ಮ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದನ್ನು ನಿರ್ಗತಿಕರ ಪುನರ್ವಸತಿ ಕೇಂದ್ರ ಸ್ಥಾಪಿಸುತ್ತೇವೆ ಎಂಬ ನೆಪವೊಡ್ಡಿನಮ್ಮ ಇಲಾಖೆಗೆ ಕಟ್ಟಡವನ್ನು ಹಸ್ತಾಂತರಿಸಿಲ್ಲ. ಹಾಗಾಗಿ ಈ ಕಟ್ಟಡವನ್ನು ಹಾಗೇ ಬಿಡಲಾಗಿದೆ.
-ಎಂ.ರೇಣುಕೇಶ್‌, ಸಹಾಯಕ ನಿದೇರ್ಶಕರು, ರೇಷ್ಮೆ ಇಲಾಖೆ , ಚಾಮರಾಜನಗರ

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.