17 ರಾಜ್ಯ ಹೆದ್ದಾರಿ ಅಭಿವೃದ್ಧಿ, 7 ಟೋಲ್
Team Udayavani, May 7, 2019, 3:00 AM IST
ಬೆಂಗಳೂರು: “ರಾಜ್ಯದಲ್ಲಿ ಒಟ್ಟು 17 ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಏಳು ರಸ್ತೆಗಳ ಟೋಲ್ ವಿಧಿಸಲು ಟೆಂಡರ್ ನೀಡಲಾಗಿದೆ’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, “ರಸ್ತೆ ತೆರಿಗೆ ಕಟ್ಟುತ್ತಿದ್ದರೂ ಪುನಃ ರಾಜ್ಯ ಹೆದ್ದಾರಿಗಳಿಗೂ ತೆರಿಗೆ ವಿಧಿಸುತ್ತಿರುವುದು ಏಕೆ ಎಂದು ಪ್ರಶ್ನಿಸುತ್ತಿದ್ದಾರೆ. ರಸ್ತೆಗಳ ನಿರ್ವಹಣೆಗೆ ಹಣ ಬೇಕಾಗುತ್ತದೆ’ ಎಂದು ಸಮರ್ಥಿಸಿಕೊಂಡರು.
ರಾಜ್ಯ ಹೆದ್ದಾರಿಗಳಿಗೆ ಟೋಲ್ ವಿಧಿಸುವ ನಿರ್ಣಯ ಮಾಡಿ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರ. ಹೀಗಾಗಿ ಟೋಲ್ ಬಗ್ಗೆ ಯಡಿಯೂರಪ್ಪ ಅವರನ್ನೇ ಪ್ರಶ್ನಿಸಬೇಕು ಎಂದರು. ಕೆಲವೆಡೆ ಸರ್ವಿಸ್ ರಸ್ತೆ ಇಲ್ಲ.
ಟೋಲ್ ಪಾವತಿಸಲು ಸಾಧ್ಯವಾಗದವರು ಶುಲ್ಕ ಪಾವತಿಸದೆ ಸರ್ವಿಸ್ ರಸ್ತೆಯಲ್ಲಿ ಓಡಾಡಲು ಅವಕಾಶ ನೀಡಬೇಕು. ಹೀಗಾಗಿ ನಾವು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ವೇಳೆ ಎರಡು ಪಥದ ಸರ್ವಿಸ್ ರಸ್ತೆ ನಿರ್ಮಿಸುತ್ತಿದ್ದೇವೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯಲ್ಲಿ ಚುನಾವಣಾ ಹಣ ಸಂಗ್ರಹಕ್ಕೆ 1400 ಕೋಟಿ ರೂ. ಮೊತ್ತದ ಹಣವನ್ನು ಕಾಮಗಾರಿ ಮುಗಿಯದೆ ಬಿಡುಗಡೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ನಾನು 1 ರೂ. ತುಂಡು ಗುತ್ತಿಗೆಯನ್ನೂ ನೀಡಿಲ್ಲ. ಆರೋಪಿಸುವವರು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.