ಗ್ರಾಮೀಣ ಅಂಚೆ ಕಚೇರಿಗಳಲ್ಲಿ ಸರ್ವರ್‌ ಕೈ ಕೊಟ್ಟು ವಿಳಂಬ ಭಾಗ್ಯ !

ಹೆಸರಿಗಷ್ಟೇ ತ್ವರಿತ ಅಂಚೆ ಸೇವೆ;ಮನಿಯಾರ್ಡರ್‌, ಸ್ಪೀಡ್‌ ಪೋಸ್ಟ್‌,ರಿಜಿಸ್ಟರ್ಡ್‌ ಪೋಸ್ಟ್‌ ವಿತರಣೆ ತಡ

Team Udayavani, May 7, 2019, 6:00 AM IST

POST

ಕುಂದಾಪುರ: ತ್ವರಿತ, ಪಾರದರ್ಶಕ ಮತ್ತು ನಿಖರ ಸೇವೆಗಾಗಿ ಗ್ರಾಮೀಣ ಅಂಚೆ ಕಚೇರಿಗಳಲ್ಲಿ ಆರಂಭಿಸಿದ ಡಿಜಿಟಲ್‌ ಸೇವೆಯಲ್ಲಿ ಸರ್ವರ್‌ ದೋಷದಿಂದ ಕೆಲಸಗಳು ವಿಳಂಬವಾಗುತ್ತಿವೆ. ಮನಿಯಾರ್ಡರ್‌, ಸ್ಪೀಡ್‌ಪೋಸ್ಟ್‌, ರಿಜಿಸ್ಟರ್ಡ್‌ ಪೋಸ್ಟ್‌, ವಿದ್ಯುತ್‌ ಬಿಲ್‌ ಪಾವತಿಯಂತಹ ಸೇವೆಗಳು ಗ್ರಾಹಕರಿಗೆ ಸಕಾಲದಲ್ಲಿ ದೊರೆಯುತ್ತಿಲ್ಲ.

ದರ್ಪಣ
ದೇಶದ 1.29 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳಲ್ಲಿ 2017ರ ಡಿ.15ರಿಂದ ದರ್ಪಣ (ಡಿಜಿಟಲ್‌ ಎಡ್ವಾನ್ಸ್‌ಮೆಂಟ್‌ ಆಫ್ ರೂರಲ್‌ ಪೋಸ್ಟ್‌ ಆಫೀಸ್‌ ಫಾರ್‌ ಎ ನ್ಯೂ ಇಂಡಿಯಾ) ಎನ್ನುವ ಯೋಜನೆ ಜಾರಿಯಾಗಿತ್ತು. ಸೇವಾ ಗುಣಮಟ್ಟ ವೃದ್ಧಿ, ಮೌಲ್ಯವರ್ಧಿತ ಸೇವೆಗಳ ಕೊಡುಗೆ, ಬ್ಯಾಂಕುಗಳಿಲ್ಲದಲ್ಲಿ ಹಣಕಾಸು ವ್ಯವಹಾರಗಳಲ್ಲಿ ಗ್ರಾಮೀಣ ಜನರ ಒಳಗೊಳ್ಳುವಿಕೆಗೆ ಪ್ರೋತ್ಸಾಹ ಇದರ ಮುಖ್ಯ ಉದ್ದೇಶ.

ಹೊಸ ಯಂತ್ರ
ಈಗ ಈ ಯೋಜನೆಯಂತೆ ಗ್ರಾಮೀಣ ಅಂಚೆ ಕಚೇರಿಗಳಿಗೆ ರೂರಲ್‌ ಇನಾ#ರ್ಮೆàಶನ್‌ ಕಮ್ಯುನಿಕೇಶನ್‌ ಟೆಕ್ನಾಲಜಿ (ಆರ್‌ಐಸಿಟಿ)ಅಂಗವಾಗಿ ಇನ್ಫೋಸಿಸ್‌ ಮೂಲಕ ಸಿಂಪ್ಯೂಟರ್‌ ಮಾದರಿಯ ಉಪಕರಣ ನೀಡಲಾಗಿದೆ. ಇದರಲ್ಲಿ ಎಟಿಎಂ ಕಾರ್ಡ್‌ ಸ್ವೆ„ಪ್‌ ಮಾಡಬಹುದು, ಬೆರಳಚ್ಚು ಗುರುತು ತೆಗೆಯಬಹುದು. ಇಂಟರ್‌ನೆಟ್‌ ಸಂಪರ್ಕದಿಂದ ಎಲ್ಲ ವ್ಯವಹಾರಗಳೂ ತತ್‌ಕ್ಷಣ ಅಂಚೆ ಇಲಾಖೆಯ ಕಂಪ್ಯೂಟರ್‌ಗೆ ರವಾನೆಯಾಗುತ್ತವೆ.

ಉಪಯೋಗ
ಎಟಿಎಂ ಕಾರ್ಡ್‌ ಇದ್ದರೆ ಸಾಕು, ಮನಿಯಾರ್ಡರ್‌, ಸ್ಪೀಡ್‌ಪೋಸ್ಟ್‌, ರಿಜಿಸ್ಟರ್‌ ಪೋಸ್ಟ್‌ಗೆ ಪಾವತಿ ಮಾಡಬಹುದು. ರಿಜಿಸ್ಟರ್ಡ್‌ ಅಂಚೆ, ಸ್ಪೀಡ್‌ಪೋಸ್ಟ್‌, ಮನಿಯಾರ್ಡರ್‌, ವೃದ್ಧಾಪ್ಯ, ವಿಧವಾ, ಅಂಗವಿಕಲ ಮಾಸಾಶನಗಳನ್ನು ವಿತರಿಸಿದ ಕುರಿತು ತತ್‌ಕ್ಷಣ ಮಾಹಿತಿ ಅಪ್‌ಲೋಡ್‌ ಆಗುತ್ತದೆ. ವಿದ್ಯುತ್‌ ಬಿಲ್‌ ಪಾವತಿ ವಿವರ ತತ್‌ಕ್ಷಣ ಮೆಸ್ಕಾಂ ಕಂಪ್ಯೂಟರ್‌ಗೂ ರವಾನೆಯಾಗುತ್ತದೆ.

ದೂರುಗಳೇನು?
ಗ್ರಾಮಾಂತರದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿದ್ದು, ಮಾಹಿತಿ ತುಂಬಲು ಆಗುತ್ತಿಲ್ಲ ಎಂಬ ಅಳಲು ಅಂಚೆ ನೌಕರರದು. ಈ ಕುರಿತು ನೌಕರರ ಸಂಘಟನೆ ಇಲಾಖೆಗೆ ದೂರು ಸಲ್ಲಿಸಿದೆ. ಸರ್ವರ್‌ ಬಿಝಿ ಸಂದೇಶ ಬರುವುದು ಬಹುದೊಡ್ಡ ಸಮಸ್ಯೆ. ಪ್ರಾಯಃ ಸರ್ವರ್‌ನ ಸಾಮರ್ಥ್ಯ ಹೆಚ್ಚಿಸದ ಕಾರಣ ವ್ಯವಹಾರ ತಾಸುಗಟ್ಟಲೆ ವಿಳಂಬವಾಗುತ್ತದೆ. ಇದರಲ್ಲಿ ನಮೂದಿಸದ ವಿನಾ ಹಣಕಾಸಿಗೆ ಸಂಬಂಧಿಸಿದ, ದಾಖಲೆಗಳ ಮೂಲಕ ವಿತರಿಸುವ ಯಾವುದೇ ಕೆಲಸ ಮಾಡಲಾಗುತ್ತಿಲ್ಲ. ಸ್ಪೀಡ್‌ಪೋಸ್ಟ್‌, ರಿಜಿಸ್ಟರ್ಡ್‌ ಪೋಸ್ಟ್‌, ಮನಿಯಾರ್ಡರ್‌ ವಿತರಣೆ ಕೂಡ ವಿಳಂಬವಾಗುತ್ತಿದೆ ಎನ್ನುವುದು ಸಿಬಂದಿಯ ದೂರು. ಅಕ್ಷರಗಳ ಕೀಲಿಮಣೆ ಸಣ್ಣದಾಗಿದ್ದು, ಕಾಣುವುದಿಲ್ಲ ಎನ್ನುತ್ತಾರೆ.

ವ್ಯವಹಾರ
ಉಡುಪಿ ಜಿಲ್ಲೆಯಲ್ಲಿಯೇ ಅತಿಹೆಚ್ಚು ವ್ಯವಹಾರ ಮಾಡುವ ಗ್ರಾಮೀಣ ಅಂಚೆ ಕಚೇರಿ ಕುಂದಾಪುರ ತಾ|ನ ಕರ್ಕುಂಜೆಯಲ್ಲಿದೆ. ವಿಮೆ, ವಿದ್ಯುತ್‌ ಬಿಲ್‌ ಸ್ವೀಕಾರ, ಮನಿಯಾರ್ಡರ್‌ನಿಂದಾಗಿ ಕೆಲವು ಕಚೇರಿಗಳಲ್ಲಿ 1 ಲಕ್ಷ ರೂ.ಗೂ ಅಧಿಕ ವ್ಯವಹಾರ ಪ್ರತಿದಿನ ನಡೆಯುತ್ತದೆ.

ಆ್ಯಂಟೆನಾ ಕೊಡಲಾಗುತ್ತಿದೆ
ಕೆಲವೆಡೆ ಸಿಗ್ನಲ್‌ ಸಮಸ್ಯೆ ಕುರಿತು ದೂರು ಬಂದಿದೆ. ಸಿಗ್ನಲ್‌ ಬೂಸ್ಟ್‌ ಮಾಡಿಕೊಡುವ ತಂತ್ರಾಂಶ ಅಳವಡಿಸಿದ ಸಾಧನೆಗಳು ಇವಾಗಿದ್ದು ಆ್ಯಂಟೆನಾ ಕೊಡಲಾಗುತ್ತಿದೆ. ಈಗಾಗಲೇ ಸೇನಾಪುರ, ಇಡೂರು ಕುಂಞಾಡಿಯಲ್ಲಿ ಕೊಡಲಾಗಿದ್ದು, ಇತರೆಡೆಗೂ ನೀಡಲು ಬರೆಯಲಾಗಿದೆ. ಸರ್ವರ್‌ ಬಿಝಿ ಸಮಸ್ಯೆ ಕುರಿತು ಇಲಾಖೆಗೆ ಪತ್ರ ಬರೆಯಲಾಗಿದೆ. ಮನಿಯಾರ್ಡರ್‌, ಪೋಸ್ಟ್‌ ವಿತರಣೆಗೆ ಯಂತ್ರಾರಂಭಕ್ಕೆ ಕಾಯಬೇಕಿಲ್ಲ. ಪುಸ್ತಕದಲ್ಲಿ ಬರೆದು ವಿತರಿಸಬಹುದು. ಗ್ರಾಹಕರಿಗೆ ವಿಳಂಬ ಮಾಡುವಂತಿಲ್ಲ.
-ಗಣಪತಿ ಮರಡಿ, ಅಸಿಸ್ಟೆಂಟ್‌ ಸೂಪರಿಂಟೆಂಡೆಂಟ್‌ ಆಫ್ ಪೋಸ್ಟ್‌ , ಕುಂದಾಪುರ ಉಪವಿಭಾಗ

ಹೆಚ್ಚುವರಿ ಸಮಯ
ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಕಚೇರಿ ಸಮಯ. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಸಂಜೆ 5 ಗಂಟೆಯಾದರೂ ಫೀಡ್‌ ಮಾಡುವ ಕೆಲಸ ಮುಗಿಯದು. ಯಂತ್ರಾರಂಭಕ್ಕೆ ಬೆರಳಚ್ಚು ಬೇಕಾದ ಕಾರಣ ಪೋಸ್ಟ್‌ ಮಾಸ್ಟರನ್ನು ಆಗಾಗ ಬದಲಿಸುವಂತಿಲ್ಲ. ಯಾರ ಬೆರಳಚ್ಚು ದಾಖಲಾಗಿದೆಯೋ ಅವರೇ ಬರಬೇಕಾಗುತ್ತದೆ.
– ಸಮಸ್ಯೆ ಎದುರಿಸುತ್ತಿರುವ ಪೋಸ್ಟ್‌ ಮಾಸ್ಟರ್‌

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.