ಅಸಮಾಧಾನದ ಲಾಭದತ್ತ ಕಾಂಗ್ರೆಸ್‌ ಚಿತ್ತ

|ಬಿಜೆಪಿ ನಾಯಕರಿಗೆ ಹೆಚ್ಚಿನ ಮತಗಳ ಅಂತರದ ವಿಶ್ವಾಸ |ಅಂಗಡಿ ವಿರುದ್ಧ ಜನರ ಅಸಂತೋಷವೇ ಕೈ ಬಲ

Team Udayavani, May 7, 2019, 11:45 AM IST

belegavi-tdy-01
ಬೆಳಗಾವಿ: ಇತಿಹಾಸ ಪ್ರಸಿದ್ಧ ಹಾಗೂ ಶಕ್ತಿ ದೇವತೆ ಏಳು ಕೊಳ್ಳದ ಯಲ್ಲಮ್ಮ ದೇವಿಯ ವಿಜಯದ ಆಶೀರ್ವಾದ ಯಾರ ಮೇಲೆ? ಅಲೆ ಇಲ್ಲವೇ ಅಸಮಾಧಾನದ ಲಾಭ ಯಾರಿಗೆ. ಇದು ಲೋಕಸಭೆ ಚುನಾವಣೆಯ ಮತದಾನದ ನಂತರ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕುತೂಹಲದ ಚರ್ಚೆ ಹಾಗೂ ಲೆಕ್ಕಾಚಾರ.

ಮತ ಎಣಿಕೆ ದಿನ ಬರುವವರೆಗೆ ಕ್ಷೇತ್ರದಲ್ಲಿ ಈ ಚರ್ಚೆ ನಡೆದಿರುವುದು ಕಾಣುತ್ತದೆ. ಒಂದು ಕಡೆ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸುತ್ತಾರೆ ಎಂಬ ಮಾತುಗಳು ಕೇಳಿಬಂದರೆ ಇನ್ನೊಂದು ಕಡೆ ಕಾಂಗ್ರೆಸ್‌ ಕಳೆದ ಸಲಕ್ಕಿಂತ ಈ ಸಲ ಹೆಚ್ಚಿನ ಮತಗಳನ್ನು ಗಳಿಸಲಿದೆ. ಪಕ್ಷದ ಅಭ್ಯರ್ಥಿ ಸಾಧುನವರ ಸವದತ್ತಿಯಿಂದ ಒಳ್ಳೆಯ ಮುನ್ನಡೆ ಪಡೆಯಲಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಮತದಾನ ನಡೆದ ನಂತರ ಕ್ಷೇತ್ರದ ಜನರ ಮೂಡ್‌ ಹೇಗಿದೆ ಎಂದು ತಿಳಿಯಲು ಒಂದು ಸುತ್ತು ಓಡಾಡಿದರೆ ಯುವ ಸಮುದಾಯ ಬಹುತೇಕ ಮೋದಿ ಅಲೆಗೆ ಮಾರು ಹೋಗಿರುವುದು ಕಂಡುಬಂತು. ಅದರ ಜೊತೆಗೆ ಕಾಂಗ್ರೆಸ್‌ನ ನಿಷ್ಠಾವಂತ ಮತದಾರರು ಈ ಬಾರಿಯೂ ಸಹ ತಮ್ಮ ನಿಷ್ಠೆ ಬದಲಿಸದೇ ಇರುವುದು ವಿಶೇಷವಾಗಿದೆ. ಇದೇ ಆಧಾರದ ಮೇಲೆ ಕಾಂಗ್ರೆಸ್‌ ಹಾಗೂ ಬಿಜೆಪಿ ವಲಯದಲ್ಲಿ ಮುನ್ನಡೆ ಗಳಿಸುವ ಲೆಕ್ಕಾಚಾರ ಜೋರಾಗಿ ನಡೆದಿದೆ..

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಸಹಜವಾಗಿಯೇ ಅಭ್ಯರ್ಥಿ ಸುರೇಶ ಅಂಗಡಿ ಹೆಚ್ಚಿನ ಮತಗಳನ್ನು ಪಡೆಯಲಿದ್ದಾರೆ. ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅಲೆ ಸಹ ಎಲ್ಲ ಕಡೆ ಇದ್ದು ಇದು ಮತದಾರರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ನಮಗೆ ಹೆಚ್ಚಿನ ಮತಗಳ ಅಂತರ ಸಿಗಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.

ಒಟ್ಟು ಮತದಾರರು 1,94,081

ಮತ ಚಲಾಯಿಸಿದವರು 1,36,407

ಪುರುಷರು 72,034

ಮಹಿಳೆಯರು 64,373

ಆದರೆ ಕಾಂಗ್ರೆಸ್‌ ನಾಯಕರು ಹೇಳುವುದೇ ಬೇರೆ. ಬಿಜೆಪಿ ಅಭ್ಯರ್ಥಿಯ ಬಗ್ಗೆ ಕ್ಷೇತ್ರದ ಜನರಲ್ಲಿ ಅಸಮಾಧಾನ ಇದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಸದರು ತಾಲೂಕಿಗೆ ಬಂದಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಬಹಳ ಕಡಿಮೆ. ಹೀಗಾಗಿ ಜನರು ಈ ಬಾರಿ ಬಿಜೆಪಿಯಿಂದ ದೂರ ಉಳಿದಿದ್ದರು. ಅದು ನಮಗೆ ಅನುಕೂಲವಾಗಿದೆ ಎನ್ನುತ್ತಾರೆ ಕಾಂಗ್ರೆಸ್‌ ಮುಖಂಡರು.

ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರವಾಗಿ ಸುಮಾರು 86 ಸಾವಿರ ಮತದಾರರು ಇದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈ ಮತಗಳು ನಮ್ಮವರ ಬಂಡಾಯದಿಂದ ಹಂಚಿಹೋಗಿದ್ದವು. ಈ ಎಲ್ಲ ಮತಗಳು ಈಗ ಒಂದಾಗಿ ಕಾಂಗ್ರೆಸ್‌ಗೆ ಬಂದಿವೆ. ಹೀಗಾಗಿ ನಮ್ಮ ಅಭ್ಯರ್ಥಿ ಸಾಧುನವರ ಮುನ್ನಡೆ ಪಡೆಯುತ್ತಾರೆ ಎಂಬುದು ಕಾಂಗ್ರೆಸ್‌ ನಾಯಕರ ವಿಶ್ವಾಸದ ಮಾತು.

.ಕೇಶವ ಆದಿ

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.