ಅಸಮಾಧಾನದ ಲಾಭದತ್ತ ಕಾಂಗ್ರೆಸ್ ಚಿತ್ತ
|ಬಿಜೆಪಿ ನಾಯಕರಿಗೆ ಹೆಚ್ಚಿನ ಮತಗಳ ಅಂತರದ ವಿಶ್ವಾಸ |ಅಂಗಡಿ ವಿರುದ್ಧ ಜನರ ಅಸಂತೋಷವೇ ಕೈ ಬಲ
Team Udayavani, May 7, 2019, 11:45 AM IST
ಮತ ಎಣಿಕೆ ದಿನ ಬರುವವರೆಗೆ ಕ್ಷೇತ್ರದಲ್ಲಿ ಈ ಚರ್ಚೆ ನಡೆದಿರುವುದು ಕಾಣುತ್ತದೆ. ಒಂದು ಕಡೆ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸುತ್ತಾರೆ ಎಂಬ ಮಾತುಗಳು ಕೇಳಿಬಂದರೆ ಇನ್ನೊಂದು ಕಡೆ ಕಾಂಗ್ರೆಸ್ ಕಳೆದ ಸಲಕ್ಕಿಂತ ಈ ಸಲ ಹೆಚ್ಚಿನ ಮತಗಳನ್ನು ಗಳಿಸಲಿದೆ. ಪಕ್ಷದ ಅಭ್ಯರ್ಥಿ ಸಾಧುನವರ ಸವದತ್ತಿಯಿಂದ ಒಳ್ಳೆಯ ಮುನ್ನಡೆ ಪಡೆಯಲಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಮತದಾನ ನಡೆದ ನಂತರ ಕ್ಷೇತ್ರದ ಜನರ ಮೂಡ್ ಹೇಗಿದೆ ಎಂದು ತಿಳಿಯಲು ಒಂದು ಸುತ್ತು ಓಡಾಡಿದರೆ ಯುವ ಸಮುದಾಯ ಬಹುತೇಕ ಮೋದಿ ಅಲೆಗೆ ಮಾರು ಹೋಗಿರುವುದು ಕಂಡುಬಂತು. ಅದರ ಜೊತೆಗೆ ಕಾಂಗ್ರೆಸ್ನ ನಿಷ್ಠಾವಂತ ಮತದಾರರು ಈ ಬಾರಿಯೂ ಸಹ ತಮ್ಮ ನಿಷ್ಠೆ ಬದಲಿಸದೇ ಇರುವುದು ವಿಶೇಷವಾಗಿದೆ. ಇದೇ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಮುನ್ನಡೆ ಗಳಿಸುವ ಲೆಕ್ಕಾಚಾರ ಜೋರಾಗಿ ನಡೆದಿದೆ..
ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇರುವುದರಿಂದ ಸಹಜವಾಗಿಯೇ ಅಭ್ಯರ್ಥಿ ಸುರೇಶ ಅಂಗಡಿ ಹೆಚ್ಚಿನ ಮತಗಳನ್ನು ಪಡೆಯಲಿದ್ದಾರೆ. ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅಲೆ ಸಹ ಎಲ್ಲ ಕಡೆ ಇದ್ದು ಇದು ಮತದಾರರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ನಮಗೆ ಹೆಚ್ಚಿನ ಮತಗಳ ಅಂತರ ಸಿಗಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ.
ಒಟ್ಟು ಮತದಾರರು 1,94,081
ಮತ ಚಲಾಯಿಸಿದವರು 1,36,407
ಪುರುಷರು 72,034
ಮಹಿಳೆಯರು 64,373
ಆದರೆ ಕಾಂಗ್ರೆಸ್ ನಾಯಕರು ಹೇಳುವುದೇ ಬೇರೆ. ಬಿಜೆಪಿ ಅಭ್ಯರ್ಥಿಯ ಬಗ್ಗೆ ಕ್ಷೇತ್ರದ ಜನರಲ್ಲಿ ಅಸಮಾಧಾನ ಇದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಸದರು ತಾಲೂಕಿಗೆ ಬಂದಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಬಹಳ ಕಡಿಮೆ. ಹೀಗಾಗಿ ಜನರು ಈ ಬಾರಿ ಬಿಜೆಪಿಯಿಂದ ದೂರ ಉಳಿದಿದ್ದರು. ಅದು ನಮಗೆ ಅನುಕೂಲವಾಗಿದೆ ಎನ್ನುತ್ತಾರೆ ಕಾಂಗ್ರೆಸ್ ಮುಖಂಡರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸುಮಾರು 86 ಸಾವಿರ ಮತದಾರರು ಇದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈ ಮತಗಳು ನಮ್ಮವರ ಬಂಡಾಯದಿಂದ ಹಂಚಿಹೋಗಿದ್ದವು. ಈ ಎಲ್ಲ ಮತಗಳು ಈಗ ಒಂದಾಗಿ ಕಾಂಗ್ರೆಸ್ಗೆ ಬಂದಿವೆ. ಹೀಗಾಗಿ ನಮ್ಮ ಅಭ್ಯರ್ಥಿ ಸಾಧುನವರ ಮುನ್ನಡೆ ಪಡೆಯುತ್ತಾರೆ ಎಂಬುದು ಕಾಂಗ್ರೆಸ್ ನಾಯಕರ ವಿಶ್ವಾಸದ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.